‘ಕ್ರಿಟಿಕಲ್ ಕೀರ್ತನೆಗಳು’ ಚಿತ್ರ ವಿಮರ್ಶೆ: ಬೆಟ್ಟಿಂಗ್‌ ಯಾತನೆ ಕ್ರಿಕೆಟ್‌ ಕೀರ್ತನೆ


Team Udayavani, May 15, 2022, 2:41 PM IST

Critical Keertanegalu

ಸದ್ಯ ಎಲ್ಲ ಕಡೆ ಐಪಿಎಲ್‌ ಫೀವರ್‌ ಜೋರಾಗಿದೆ. ಒಂದೆಡೆ ಐಪಿಎಲ್‌ ಸೀಜನ್‌ ನಲ್ಲಿ ಕ್ರಿಕೆಟ್‌ ಆಟಗಾರರು ತಮ್ಮ ತಂಡಗಳ ಪರವಾಗಿ ಸ್ಟೇಡಿ ಯಂನಲ್ಲಿ ಆಟವಾಡುತ್ತಿದ್ದರೆ, ಮತ್ತೂಂದೆಡೆ ಬೆಟ್ಟಿಂಗ್‌ ಅನ್ನೋ ಪೆಡಂ ಭೂತ ಬುಕ್ಕಿಗಳ ಕೈಯಲ್ಲಿ ತೆರೆಮರೆಯಲ್ಲಿ ಆಟವಾಡಲು ಶುರು ಮಾಡಿ ರುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಪ್ರತಿ ಐಪಿಎಲ್‌ ಸೀಜನ್‌ ನಲ್ಲೂ ಚರ್ಚೆಯಾಗುವ ಬಳಿಕ ಎಲ್ಲರೂ ಮರೆತು ಸುಮ್ಮನಾ ಗುವ ಬೆಟ್ಟಿಂಗ್‌ ಕಹಾನಿಯನ್ನು ತೆರೆಮೇಲೆ ಹೇಳಿರುವ ಸಿನಿಮಾ “ಕ್ರಿಟಿಕಲ್‌ ಕೀರ್ತನೆಗಳು’.

ಒಂದು ಗಂಭೀರ ವಿಷಯವನ್ನು ಕಥಾಹಂದರವಾಗಿ ಇಟ್ಟು ಕೊಂಡು ಅದಕ್ಕೆ ಒಂದಷ್ಟು ಮನರಂಜನಾತ್ಮಕ ಅಂಶಗಳನ್ನು ಸೇರಿಸಿ “ಕ್ರಿಟಿಕಲ್‌ ಕೀರ್ತನೆಗಳು’ ಸಿನಿಮಾವನ್ನು ಅಚ್ಚು ಕಟ್ಟಾಗಿ ಪ್ರೇಕ್ಷಕರ ಮುಂದೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕುಮಾರ್‌. ಕರ್ನಾಟಕದ ನಾಲ್ಕು ಬೇರೆ ಬೇರೆ ಪ್ರಾದೇಶಿಕ ಹಿನ್ನೆಲೆಯಲ್ಲಿ ವಿಭಿನ್ನ ಮನಸ್ಥಿತಿಯ ನಾಲ್ಕು ಕಥೆಯನ್ನು ಒಂದೇ ಎಳೆಯಲ್ಲಿ ಜೋಡಿಸಿ ರುವ ನಿರ್ದೇಶಕರ ಪ್ರಯತ್ನ ಮೆಚ್ಚುವಂತದ್ದು.

ಸಿನಿಮಾದ ಮೊದಲರ್ಧ ಕಾಮಿಡಿಯಾಗಿ ಸಾಗುವ ಕಥೆ ಮತ್ತು ದೃಶ್ಯಗಳು, ದ್ವಿತಿಯಾರ್ಧದಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳು ತ್ತದೆ. ಕೆಲ ಸನ್ನಿವೇಶಗಳಿಗೆ ಮತ್ತು ಪಾತ್ರಗಳಿಗೆ ಕತ್ತರಿ ಹಾಕಿ, ಚಿತ್ರಕಥೆಗೆ ಇನ್ನಷ್ಟು ವೇಗ ಕೊಟ್ಟಿದ್ದರೆ, “ಕೀರ್ತನೆಗಳು’ ಇನ್ನಷ್ಟು ಪರಿಣಾಮಕಾರಿಯಾಗಿ ನೋಡುಗ ರನ್ನು ಮುಟ್ಟುವ ಸಾಧ್ಯತೆ ಗಳಿದ್ದವು.

ಅದೆಲ್ಲದರ ಹೊರತಾಗಿಯೂ ಅಂತಿಮವಾಗಿ, ನೋಡುಗರು ಕೆಲಹೊತ್ತು ಯೋಚಿಸುತ್ತ ಥಿಯೇಟರ್‌ನಿಂದ ಹೊರಗೆ ಬರುವಂತೆ ಮಾಡಲು “ಕ್ರಿಟಿಕಲ್‌ ಕೀರ್ತನೆ’ ಯಶಸ್ವಿಯಾಗಿದೆ.

ಇನ್ನು ತಬಲನಾಣಿ, ಸುಚೇಂದ್ರ ಪ್ರಸಾದ್‌, ರಾಜೇಶ್‌ ನಟರಂಗ, ತರಂಗ ವಿಶ್ವ, ಅಪೂರ್ವಾ ಭಾರದ್ವಾಜ್‌, ದೀಪಾ ತಮ್ಮ ಪಾತ್ರಗಳಲ್ಲಿ ನೋಡುಗರ ಗಮನ ಸೆಳೆಯುತ್ತಾರೆ. ಉಳಿದಂತೆ ಅರುಣಾ ಬಾಲರಾಜ್‌, ಧರ್ಮ, ಯಶ್ವಂತ್‌ ಶೆಟ್ಟಿ, ದಿನೇಶ್‌ ಮಂಗಳೂರು, ಮಾ. ಮಹೇಂದ್ರ, ಮಾ. ಪುಟ್ಟರಾಜು, ಅಪೂರ್ವಾ ಮೊದಲಾದ ಕಲಾವಿದರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಇನ್ನಿತರ ಕಲಾವಿದರು ಮತ್ತು ಪಾತ್ರಗಳ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ.

ಚಿತ್ರದ ಎರಡು ಹಾಡುಗಳು ಗುನುಗುವಂತಿದ್ದು, ಛಾಯಾಗ್ರಹಣ ಕಾರ್ಯ ಚಿತ್ರವನ್ನು ಸುಂದರವಾಗಿ ಕಾಣುವಂತೆ ಮಾಡಿದೆ. ಸಂಕಲನ, ಕಲರಿಂಗ್‌, ಹಿನ್ನೆಲೆ ಸಂಗೀತದ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಕೊಡಬಹುದಿತ್ತು. ಕೆಲವೊಂದು ಸಣ್ಣ ಲೋಪಗಳನ್ನು ಬದಿಗಿಟ್ಟು ನೋಡುವುದಾದರೆ, “ಕ್ರಿಟಿಕಲ್‌ ಕೀರ್ತನೆಗಳು’ ಫ್ಯಾಮಿಲಿ ಜೊತೆ ಕುಳಿತು ಆಸ್ವಾಧಿಸಬಹುದಾದ ಸಿನಿಮಾ ಎನ್ನಲು ಅಡ್ಡಿಯಿಲ್ಲ.

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.