ಬದುಕಿಗೆ ವಚನ ದಾರಿದೀಪ: ಹಂದ್ರಾಳ
Team Udayavani, May 15, 2022, 5:02 PM IST
ಲಿಂಗಸುಗೂರು: ಸುಂದರ ಬದುಕಿಗೆ ವಚನಗಳು ದಾರಿದೀಪವಾಗಿವೆ ಎಂದು ಸಜ್ಜಲಗುಡ್ಡ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಬಸಪ್ಪ ಹಂದ್ರಾಳ ಹೇಳಿದರು.
ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಸಮಾನತೆ ತರಲು ವಚನಗಳು ಸಾಕಷ್ಟು ಪ್ರಭಾವ ಬೀರಿವೆ. ಬಸವಣನವರು ಮೂರು ಸಾಲುಗಳ ವಚನಗಳಲ್ಲಿ ವ್ಯಕ್ತಿ ಹಾಗೂ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ ಎಂದರು.
ಉಪನ್ಯಾಸಕ ಡಾ| ಮಹಾದೇವಪ್ಪ ನಾಗರಾಳ ಮಾತನಾಡಿ, ಜನರು ಆಡುವ ಭಾಷೆಗೆ ಹತ್ತಿರವಾಗಿಸುವ, ಜನರ ಜೀವನ ಗಟ್ಟಿಗೊಳಿಸುವಲ್ಲಿ ವೀರಶೈವ ಸಾಹಿತ್ಯ ಅಗ್ರಗಣ್ಯವಾಗಿದೆ. ವೀರಶೈವ ತತ್ವ ಸಿದ್ಧಾಂತಗಳನ್ನು ಸೈದ್ಧಾಂತಿಕ ನಿಲುವುಗಳನ್ನು ವೀರಶೈವ ಸಾಹಿತ್ಯ ಒಳಗೊಂಡಿದೆ ಎಂದರು.
ಶ್ರೀಶೈಲ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ ಆಡಳಿತಾಧಿ ಕಾರಿ ದೇವರಡ್ಡಿ ಮೇಟಿ, ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಗೌಡೂರು, ಪ್ರಭಾರಿ ಪ್ರಚಾರ್ಯ ರಾಮುಬಾಬು, ದತ್ತಿದಾನಿಗಳಾದ ದೊಡ್ಡಪ್ಪ ಸಾಹುಕಾರ, ಮಂಜುನಾಥ ಕಾಮಿನ್, ಶಂಕ್ರಪ್ಪ ಸಕ್ರೀ, ಗಿರಿರಾಜ ಹೊಸಮನಿ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು