ಕೇರಳದಲ್ಲಿ ಮಳೆ ಅಬ್ಬರ; ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌


Team Udayavani, May 16, 2022, 12:59 AM IST

thumb 2

ತಿರುವನಂತಪುರ: ಕೇರಳದ ಹಲವು ಜಿಲ್ಲೆಗಳಲ್ಲಿ ರವಿವಾರದಂದು ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಶನಿವಾರ ರಾತ್ರಿಯಿಂದಲೇ ಮಳೆ ಸುರಿಯುತ್ತಿದ್ದು, ಈ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ರವಿವಾರ ಕೇರಳಕ್ಕೆ ಎಚ್ಚರಿಸಿದೆ. ಐದು ಜಿಲ್ಲೆಗಳಿಗೆ ಸೋಮವಾರವೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

“ಅರೇಬಿಯನ್‌ ಸಮುದ್ರದಿಂದ ದಕ್ಷಿಣ ಭಾರತದ ಕರಾವಳಿ ಭಾಗದ ಕಡೆಗೆ ಬಲವಾದ ಮಾರುತಗಳು ಬೀಸುತ್ತಿದ್ದು, ಕರ್ನಾಟಕದ ಕರಾವಳಿ ಭಾಗ, ಕೇರಳ, ತಮಿಳುನಾಡು ಮತ್ತು ಮಾಹೆ ಪ್ರದೇಶಗಳಲ್ಲಿ ಮೇ 16ರವರೆಗೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ’ ಎಂದು ರವಿವಾರ ಐಎಂಡಿ ಎಚ್ಚರಿಸಿದೆ. ಈ ಪ್ರದೇಶಗಳಲ್ಲಿ 64ಮಿ.ಮೀ.ನಿಂದ 204.4ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಅದೇ ಹಿನ್ನೆಲೆ ಎರ್ನಾಕುಲಂ, ಇಡುಕ್ಕಿ, ತೃಶ್ಶೂರ್‌, ಕೋಯಿಕೋಡ್‌ ಮತ್ತು ಕಣ್ಣೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಈ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವರಾಗಿರುವ ಕೆ.ರಂಜನ್‌ ತಿಳಿಸಿದ್ದಾರೆ. “ಗುಡ್ಡಗಾಡು ಪ್ರದೇಶಗಳಿರುವ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿರುವುದರಿಂದಾಗಿ ಅಂತಹ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಿಶೇಷ ನಿರ್ದೇಶನ ನೀಡಲಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮ ರೀತಿಯಲ್ಲಿ ಗಮನಿಸಲು ಆಪತ್ತು ವಿಶ್ಲೇಷಕರಿಗೆ ಸೂಚಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್‌ ಅವರು ಶನಿವಾರವೇ ಸಭೆ ನಡೆಸಿದ್ದು, ವಿಪತ್ತು ನಿರ್ವಹಣ ಸಿದ್ಧತೆಗಳನ್ನು ತೀವ್ರಗೊಳಿಸಲು ಸೂಚಿಸಿದ್ದರು. ಎಲ್ಲ ನಗರಗಳಲ್ಲಿ ಕಂಟ್ರೋಲ್‌ ರೂಂಗಳನ್ನು ಆರಂಭಿಸಲಾಗಿದ್ದು, ಆವಶ್ಯಕತೆ­ಯಿದ್ದರೆ ಗಂಜಿ ಕೇಂದ್ರಗಳನ್ನು ಸ್ಥಾಪಿಸಲು ತಿಳಿಸಲಾಗಿದೆ. ಜಲಾವೃತ ಪ್ರದೇಶಗಳಿಂದ ನೀರನ್ನು ತೆಗೆಯಲೆಂದು ಪಂಪಿಂಗ್‌ ವ್ಯವಸ್ಥೆ ಮಾಡಲಾಗಿದೆ. ಕೇರಳದ 5 ಜಿಲ್ಲೆಗಳಿಗೆ ರವಿವಾರವೂ ರೆಡ್‌ ಅಲರ್ಟ್‌ ಘೋಷಿಸಲಾಗಿತ್ತು.

ಕೊಚ್ಚಿಯಲ್ಲಿ ಅವಾಂತರ: ರವಿವಾರ ಸುರಿದ ಭಾರೀ ಮಳೆಯಿಂದಾಗಿ ಕೊಚ್ಚಿ ನಗರದ ಬಹುತೇಕ ಭಾಗಗಳು ಜಲಾವೃತವಾಗಿದ್ದವು. ನಗರದ ಸರಕಾರಿ ಬಸ್‌ ನಿಲ್ದಾಣವೂ ಸಂಪೂರ್ಣ ಜಲಾವೃತವಾಗಿದ್ದ­ರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿತ್ತು. ಇನ್ನೊಂದೆಡೆ ಎರ್ನಾಕುಲಂ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು, ಜನಜೀವನಕ್ಕೆ ಅಡ್ಡಿಯಾಗಿದೆ. ಹಲವು ಮನೆಗಳು ಜಲಾವೃತವಾದ ಹಿನ್ನೆಲೆ, 2 ಗಂಜಿ ಕೇಂದ್ರಗಳನ್ನು ತೆರೆದು 9 ಕುಟುಂಬಗಳಿಗೆ ಆಶ್ರಯ ನೀಡಲಾಗಿದೆ.

ಶೇ.43 ಹೆಚ್ಚುವರಿ ಮಳೆ: ಭಾರತದ ದಕ್ಷಿಣ ಭಾಗದಲ್ಲಿ ಮಾ.1ರಿಂದ ಮೇ 14ರ ವರೆಗೆ 109 ಮಿ.ಮೀ. ಮಳೆಯಾಗಿದೆ. ಇದು ಅಂದಾಜು ಮಳೆಗಿಂತ ಶೇ.43 ಹೆಚ್ಚಿದೆ. ಈ ಅವಧಿಯಲ್ಲಿ ಕೇರಳದಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಮೊದಲೇ ಅಂದಾಜಿಸಿದ್ದ ಪೂರ್ವ ಮುಂಗಾರು ಮಳೆ ಪ್ರಮಾಣದಲ್ಲಿ ಈಗಾಗಲೇ ಕರ್ನಾಟಕವು ಶೇ.82 ಮಳೆ ಕಂಡಿದೆ. ಅಂಡಮಾನ್‌ ಮತ್ತು ನಿಕೋಬಾರ್‌ನಲ್ಲಿ ಶೇ.79, ಕೇರಳದಲ್ಲಿ ಶೇ.73, ಪುದುಚೇರಿಯಲ್ಲಿ ಶೇ.59, ಲಕ್ಷದ್ವೀಪದಲ್ಲಿ ಶೇ.39 ಮತ್ತು ತಮಿಳುನಾಡಿನಲ್ಲಿ ಶೇ.21 ಪೂರ್ವ ಮುಂಗಾರಿನ ಮಳೆಯಾಗಿದೆ.

ಅಂಡಮಾನ್‌ ನಿಕೋಬಾರ್‌ಗೆ ಮುಂಗಾರು ಪ್ರವೇಶ
ಪ್ರತೀ ವರ್ಷಕ್ಕಿಂತ ಈ ವರ್ಷ ಬಹುಬೇಗನೆ ಆಗಮಿಸಿರುವ ಮುಂಗಾರು ರವಿವಾರವೇ ಅಂಡಮಾನ್‌ ನಿಕೋಬಾರ್‌ ದ್ವೀಪ ಮತ್ತು ಆಗ್ನೇಯ ಬಂಗಾಲ ಕೊಲ್ಲಿಗೆ ಕಾಲಿಟ್ಟಿದೆ. ದಿನಕಳೆದಂತೆ ಮುಂಗಾರು ಬಿರುಸಾಗಲಿದ್ದು, ಈ ಪ್ರದೇಶಗಳಲ್ಲಿ ಮುಂದಿನ 5 ದಿನಗಳ ಕಾಲ 64.55ಮಿ.ಮೀ.ನಿಂದ 115.4ಮಿ.ಮೀ. ಮಳೆಯಾಗಲಿದೆ ಎಂದು ಐಎಂಡಿ ರವಿವಾರ ಎಚ್ಚರಿಸಿದೆ.

ಅಸ್ಸಾಂನಲ್ಲಿ ಭೂಕುಸಿತ, ರೈಲು ಸೇವೆ ಸ್ಥಗಿತ
ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯು­ ತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ. ದಿಮಾ ಹಸಾವೋ ಜಿಲ್ಲೆಯಲ್ಲಿ ರವಿವಾರ ಉಂಟಾದ ಭೂಕುಸಿತ ದಿಂದಾಗಿ ಬರಾಕ್‌ ಕಣಿವೆ ಪ್ರದೇಶ ರೈಲು ಮತ್ತು ವಾಹನ ಸಂಚಾರ ಸ್ಥಗಿತ­ಗೊಂಡಿತ್ತು. 76ಕಿ.ಮೀ ರೈಲು ಮಾರ್ಗದಲ್ಲಿ 26 ಸ್ಥಳಗಳಲ್ಲಿ ಭೂಕುಸಿತ ಉಂಟಾಗಿದ್ದ­ರಿಂದಾಗಿ 17 ರೈಲುಗಳ ಸಂಚಾರ ನಿಷೇಧಿಸಲಾಗಿತ್ತು. ಅದಾಗಲೇ ಹಳಿಗಿಳಿದಿದ್ದ ಎರಡು ರೈಲುಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗಿದ್ದು, ಅದರಲ್ಲಿದ್ದ 2,645 ಜನರನ್ನು ಬಸ್‌, ಹೆಲಿಕಾಪ್ಟರ್‌ಗಳನ್ನು ಬಳಸಿ ಸ್ಥಳಾಂತರ ಮಾಡಲಾಗಿದೆ.

 

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.