ಇಂದು ಪ್ರಧಾನಿ ಮೋದಿ ನೇಪಾಲಕ್ಕೆ; ಬುದ್ಧನ ಜನ್ಮಸ್ಥಳದಲ್ಲೇ ಬುದ್ಧ ಪೂರ್ಣಿಮೆ ಆಚರಣೆ
ನೇಪಾಲ ಪ್ರಧಾನಿ ಜತೆಗೆ ದ್ವಿಪಕ್ಷೀಯ ಮಾತುಕತೆ
Team Udayavani, May 16, 2022, 7:30 AM IST
ಬುದ್ಧಪೂರ್ಣಿಮೆಯ ದಿನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಲಕ್ಕೆ ಭೇಟಿ ನೀಡಲಿದ್ದಾರೆ. ಬುದ್ಧನ ಜನ್ಮಸ್ಥಳವಾದ ಲುಂಬಿನಿಯಲ್ಲಿ ಬುದ್ಧ ಪೂರ್ಣಿಮೆ ಆಚರಿಸಿ, ನೇಪಾಲ ಪ್ರಧಾನಿ ಶೇರ್ ಬಹಾದ್ದೂರ್ ದೇಬಾ ಜತೆಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. 2014ರ ಬಳಿಕ ಮೋದಿ ಅವರ 5ನೇ ನೇಪಾಲ ಭೇಟಿ ಇದಾಗಿದೆ.
ಕಾರ್ಯಸೂಚಿಗಳೇನು?
– ನೇಪಾಲ ಪ್ರಧಾನಿ ಶೇರ್ ಬಹಾದ್ದೂರ್ ದೇಬಾ ಜತೆ ದ್ವಿಪಕ್ಷೀಯ ಮಾತುಕತೆ.
– ಮಾಯಾದೇವಿ ದೇಗುಲದಲ್ಲಿ ಪೂಜೆ.
– ಲುಂಬಿನಿಯಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ಭಾರತೀಯ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಶಿಲಾನ್ಯಾಸ.
– ವಿವಿಧ ಒಪ್ಪಂದಗಳಿಗೆ ಸಹಿ.
– ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಭಾಗಿ. ನೇಪಾಲ ಮತ್ತು ಭಾರತೀಯ ನಾಗರಿಕರನ್ನು ಉದ್ದೇಶಿಸಿ ಭಾಷಣ.
ಭೇಟಿಯ ಉದ್ದೇಶ
– ಭಾರತ-ನೇಪಾಲ ಬಾಂಧವ್ಯ ವೃದ್ಧಿಯ ಮೂಲಕ ಚೀನದ ಪ್ರಾಬಲ್ಯ ತಡೆಗೆ ಯತ್ನಿಸುವುದು.
-ಉಭಯ ದೇಶಗಳ ನಡುವೆ ವ್ಯಾಪಾರ ಮತ್ತು ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವುದು.
– ಮೂಲ ಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ಗಡಿ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಾಡುವುದು.
– ಬುದ್ಧಿಸಂ ನೊಂದಿಗೆ ಭಾರತದ ಜಾಗತಿಕ ಸಂಬಂಧವನ್ನು ಪುನಃಶ್ಚೇತನ ಗೊಳಿಸುವುದು.
ಚೀನ ಪ್ರಾಬಲ್ಯ ತಗ್ಗಿಸುವ ಯತ್ನ
ನೇಪಾಲದಲ್ಲಿ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಚೀನವು “ಸಾಫ್ಟ್ ಬುದ್ಧಿಸಂ’ ಧೋರಣೆ ಅನುಸರಿ ಸುತ್ತಿದೆ. ಈಗಾಗಲೇ ಆ ದೇಶದಲ್ಲಿ ಚೀನ ಭಾರೀ ಪ್ರಮಾಣದ ಹೂಡಿಕೆಯನ್ನೂ ಮಾಡಿದೆ. ಹೀಗಾಗಿ ಮಾಜಿ ಪ್ರಧಾನಿ ಓಲಿ ಅವಧಿಯಲ್ಲಿ ಹದಗೆಟ್ಟಿದ್ದ ಭಾರತ-ನೇಪಾಲ ಸಂಬಂಧವನ್ನು ಮತ್ತೆ ಗಟ್ಟಿಗೊಳಿಸಿ ಚೀನದ ಪ್ರಾಬಲ್ಯವನ್ನು ತಗ್ಗಿಸುವುದು ಭಾರತದ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ