‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ


Team Udayavani, May 17, 2022, 8:51 AM IST

777 charlie

ತನ್ನ ಟೈಟಲ್‌, ಫ‌ಸ್ಟ್‌ಲುಕ್‌ ಪೋಸ್ಟರ್‌ ಮತ್ತು ಟೀಸರ್‌ ಮೂಲಕ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸಿದ್ದ “777 ಚಾರ್ಲಿ’ ಸಿನಿಮಾದ ಟ್ರೇಲರ್‌ ಸೋಶಿಯಲ್‌ ಮೀಡಿಯಾಗಳಲ್ಲಿ ಬಿಡುಗಡೆಯಾಗಿದೆ.

ಇನ್ನು ಮನುಷ್ಯ ಮತ್ತು ನಾಯಿಯ ನಡುವಿನ ಸಂಬಂಧವನ್ನು ನವಿರಾಗಿ ಟ್ರೇಲರ್‌ನಲ್ಲಿ ತರಲಾಗಿದ್ದು, ಸುಮಾರು 3 ನಿಮಿಷ 50 ಸೆಕೆಂಡ್‌ ಅವಧಿಯ ಟ್ರೇಲರ್‌ನಲ್ಲಿ ಧರ್ಮ ಎಂಬ ಪಾತ್ರದಲ್ಲಿ ನಟ ರಕ್ಷಿತ್‌ ಶೆಟ್ಟಿ, “ಚಾರ್ಲಿ’ ಎಂಬ ಪಾತ್ರದಲ್ಲಿ ನಾಯಿ ಕಾಣಿಸಿಕೊಂಡಿದೆ.

ಕೆಲಸ, ಸಿಗರೇಟ್‌, ಕುಡಿತ ಅಂತಿದ್ದ ಧರ್ಮನ ಜೀವನದಲ್ಲಿ “ಚಾರ್ಲಿ’ ಎಂಬ ನಾಯಿ ಎಂಟ್ರಿ ಕೊಟ್ಟ ಬಳಿಕ ಏನೆಲ್ಲ ನಡೆಯುತ್ತದೆ. ನೋಡು ನೋಡುತ್ತ ಧರ್ಮನ ಜೀವನ ಹೇಗೆ ಬದಲಾಗುತ್ತಾನೆ. ಧರ್ಮ ಮತ್ತು ಚಾರ್ಲಿಯ ನಡುವಿನ ಈ ಸಂಬಂಧವೇ ಸಿನಿಮಾ ಕಥೆ ಎನ್ನುವ ಸಣ್ಣ ಎಳೆಯೊಂದನ್ನು “777 ಚಾರ್ಲಿ’ ಟ್ರೇಲರ್‌ನಲ್ಲಿ ತೋರಿಸಲಾಗಿದೆ.

ಟ್ರೇಲರ್‌ನಲ್ಲಿ ಬರುವ ಧರ್ಮ ಮತ್ತು ಚಾರ್ಲಿ ಎರಡೂ ಪಾತ್ರಗಳು ಮತ್ತು ದೃಶ್ಯಗಳು ಆರಂಭದಲ್ಲಿ ನಗಿಸುತ್ತ, ನಡುವೆ ಗಂಭೀರವಾಗುತ್ತಾ, ಕೊನೆಯಲ್ಲಿ ನೋಡುಗರ ಕಣ್ಣಂಚಿನಲ್ಲಿ ನೀರು ತರುವಂತೆ ಮಾಡುತ್ತದೆ. ಟ್ರೇಲರ್‌ನಲ್ಲಿ ಕಾಣುವ ಕಲಾವಿದರು, ದೃಶ್ಯಗಳು, ಸಂಭಾಷಣೆ, ಹಿನ್ನೆಲೆ ಸಂಗೀತ, ಛಾಯಾಗ್ರಹಣ ಎಲ್ಲದರ ಸಣ್ಣ ಝಲಕ್‌ “777 ಚಾರ್ಲಿ’ಯ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ ಎನ್ನಲು ಅಡ್ಡಿಯಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಶ್ವಾನವನ್ನೇ ಪ್ರಮುಖ ಪಾತ್ರವನ್ನಾಗಿಟ್ಟುಕೊಂಡು ಕನ್ನಡದಲ್ಲಿ ಬಂದಿದ್ದು ಕೇವಲ ಬೆರಳೆಣಿಕೆಯಷ್ಟು ಸಿನಿಮಾಗಳು ಮಾತ್ರ. ಇಂಥ ತೀರಾ ವಿರಳ ಸಿನಿಮಾಗಳ ಸಾಲಿಗೆ, ಇದೀಗ “777 ಚಾರ್ಲಿ’ ಕೂಡ ಸೇರ್ಪಡೆಯಾಗುತ್ತಿದೆ. ಸದ್ಯ ಬಿಡುಗಡೆಯಾಗಿರುವ “777 ಚಾರ್ಲಿ’ ಟ್ರೇಲರ್‌ ಭಾವನಾತ್ಮಕವಾಗಿ ನೋಡುಗರಿಗೆ ಹತ್ತಿರವಾಗುವಂತಿದ್ದು, ಟ್ರೇಲರ್‌ ಬಿಡುಗಡೆಯಾದ ಎರಡೇ ಗಂಟೆಗಳಲ್ಲಿ ಬರೋಬ್ಬರಿ 1.3 ಮಿಲಿಯನ್‌ ಅಧಿಕ ವೀವ್ಸ್‌ ಪಡೆದುಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುಗರಿಂದ “777 ಚಾರ್ಲಿ’ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ “777 ಚಾರ್ಲಿ’ ಟ್ರೇಲರ್‌ಗೆ ಇದೇ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಪ್ರಿಯರ ಜೊತೆ ಅನೇಕ ಸ್ಟಾರ್‌ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಟಾಪ್ ನ್ಯೂಸ್

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.