ಸುಸಜ್ಜಿತ ಮಾದರಿ ಶಾಲೆ ನಿರ್ಮಾಣಕ್ಕೆ ನಿರ್ಣಯ

ಜಿಲ್ಲೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

Team Udayavani, May 17, 2022, 12:32 PM IST

model-school

ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮಾದರಿ ಶಾಲೆ ನಿರ್ಮಾಣಕ್ಕೆ ಮಂಡಳಿಯ ಸರ್ವ ಸದಸ್ಯರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ನಗರದ ತಮಟಕಲ್ಲು ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಂಡಳಿ ಅಧ್ಯಕ್ಷ ಎನ್‌.ಇ. ಜೀವನಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿಯ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ 2021-22 ನೇ ಸಾಲಿನ ವಾರ್ಷಿಕ ಆಡಳಿತ ವರದಿ, 2022-23 ನೇ ಸಾಲಿನ ಕ್ರಿಯಾ ಯೋಜನೆ ಹಾಗೂ 2015-16 ರಿಂದ 2020-21ನೇ ಸಾಲಿನ ವರಗಿನ ವಾರ್ಷಿಕ ಲೆಕ್ಕಪತ್ರಗಳ ತಪಾಸಣಾ ವರದಿಗಳನ್ನು ಅನುಮೋದಿಸಿ, ಇತರೆ ವಿಷಯಗಳನ್ನು ಚರ್ಚಿಸಲಾಯಿತು.

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ ಮಾದರಿ ಶಾಲೆಗಳನ್ನು ನಿರ್ಮಿಸುವ ಕುರಿತು ವಿಧಾನ ಪರಿಷತ್‌ ಶಾಸಕ ಕೆ.ಎಸ್.ನವೀನ್‌ ಸಭೆಯಲ್ಲಿ ವಿಷಯ ಮಂಡಿಸಿದರು. ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶದಲ್ಲಿ ಮಾದರಿ ಶಾಲೆ ನಿರ್ಮಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಂದ ವರದಿ ಪಡೆದುಕೊಂಡು, ಸೂಕ್ತ ಸ್ಥಳ ಆಯ್ಕೆ ಮಾಡಿ ಶಾಲೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪಂಗಡ, ಹಿಂದುಳಿದ ವರ್ಗದವರು ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ ಮಾದರಿ ಶಾಲೆ ನಿರ್ಮಿಸುವಂತೆ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಎಲ್ಲಾ ತಾಲೂಕಿನಲ್ಲಿಯೂ ಮಾದರಿ ಶಾಲೆ ನಿರ್ಮಿಸಲು ಯೋಜನೆ ರೂಪಿಸಬೇಕು ಎಂದರು.

ಕಾಮಗಾರಿಗಳ ಪರಿಶೀಲನೆಗೆ ತಂಡ ರಚನೆ

ಮಂಡಳಿ ಅನುದಾನದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಯನ್ನು ಮಂಡಳಿ ಅಧ್ಯಕ್ಷರು ಒಬ್ಬರೇ ಮಾಡಲು ಕಷ್ಟ ಸಾಧ್ಯ. ಈ ಹಿನ್ನಲೆಯಲ್ಲಿ ಮಂಡಳಿ ಕಾರ್ಯದರ್ಶಿ ಒಳಗೊಂಡಂತೆ ಅಧಿಕಾರಿಗಳ ತಂಡ ರಚಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ ಸಭೆಯಲ್ಲಿ ತಿಳಿಸಿದರು. ಮಂಡಳಿ ಅನುದಾನದಿಂದ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ನಾಮ ಫಲಕದಲ್ಲಿ ಕಡ್ಡಾಯವಾಗಿ ಮಂಡಳಿ ಹೆಸರು ನಮೂದಿಸುವಂತೆ ಅಧ್ಯಕ್ಷಕರು ಸೂಚನೆ ನೀಡಿದರು.

5 ಕೋಟಿ ನಬಾರ್ಡ ಅನುದಾನಕ್ಕೆ ಬೇಡಿಕೆ

ಈ ಹಿಂದೆ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ನಬಾರ್ಡ್‌ನಿಂದ ಅನುದಾನ ತರಲಾಗಿತ್ತು. ಇದೇ ರೀತಿ ಪ್ರತಿ ಕ್ಷೇತ್ರಕ್ಕೆ 5 ಕೋಟಿ ರೂ. ಅನುದಾನವನ್ನೂ ನಬಾರ್ಡ್‌ನಿಂದ ತರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಚಿತ್ರದುರ್ಗ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಸಭೆಯಲ್ಲಿ ಸಲಹೆ ನೀಡಿದರು.

ಮಂಡಳಿಯಿಂದ ನಿರ್ಮಿಸಿರುವ ಚೆಕ್‌ ಡ್ಯಾಂಗಳಲ್ಲಿ ತುಂಬಿರುವ ಹೂಳು ತೆಗೆಯಲು ನರೇಗಾದಲ್ಲಿ ಅವಕಾಶ ಕಲ್ಪಿಸಬೇಕು. ಮಂಡಳಿಯ ವಾರ್ಷಿಕ ಲೆಕ್ಕಪತ್ರ ವರದಿ ಹಾಗೂ ಆಡಿಟ್‌ಗಳನ್ನು ಆಯಾ ವರ್ಷವೇ ಪೂರ್ಣಗೊಳಿಸಬೇಕು. ಇದನ್ನು ವಾರ್ಷಿಕ ಸಭೆಯಲ್ಲಿ ಮಂಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೂಚಿಸಿದರು.

ಬ್ಯಾಡಗಿ ಶಾಸಕ ವಿರುಪಾಕ್ಷ ಬಳ್ಳಾರಿ ಮಾತನಾಡಿ, ಆಯಾ ವರ್ಷದ ಅನುದಾನವನ್ನು ಆಯಾ ವರ್ಷದಲ್ಲಿಯೇ ಬಳಸಿಕೊಳ್ಳಬೇಕು. ಕಾಮಗಾರಿಗಳ ಅನುಷ್ಠಾನ ತಡವಾದರೆ ಜನರಿಗೆ ಯೋಜನೆಗಳು ತಲುಪುವುದಿಲ್ಲ. ಯೋಜನೆಯ ವೆಚ್ಚವು ಅಧಿಕವಾಗುವುದು. ಅಧಿಕಾರಿಗಳು ಈ ಕುರಿತು ಎಚ್ಚರ ವಹಿಸಬೇಕು ಎಂದರು. ಸಭೆಯಲ್ಲಿ ಮಂಡಳಿ ಕಾರ್ಯದರ್ಶಿ ಅವರಿಗೆ ಆಯವ್ಯಯದ ಅನುದಾನದಲ್ಲಿ ಶೇ.2.5 ರಷ್ಟು ಅನುದಾನವನ್ನು ಕಾಯ್ದಿರಿಸಲು ಅನುಮೋದನೆ ನೀಡಲಾಯಿತು. ರಾಜ್ಯದ ಮುಖ್ಯಮಂತ್ರಿ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಹಣಕಾಸು ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ವರ್ಷಕ್ಕೆ ಒಮ್ಮೆ ಮಂಡಳಿ ಸಭೆಯನ್ನು ಬೆಂಗಳೂರಿನಲ್ಲಿ ಆಯೋಜಿ ಸುವಂತೆ ಸದಸ್ಯರು ಅಧ್ಯಕ್ಷರಿಗೆ ತಿಳಿಸಿದರು.

ಮಂಡಳಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಲೆಮಾರಿ ಜನಾಂಗಳಿಗೆ ಮೂಲಭೂತ ಸೌಕರ್ಯಗಳನ್ನು ಮಂಡಳಿ ನಿಯಮಗಳ ಪ್ರಕಾರ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆಯಿಂದ 10 ಕೊಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ತಿರ್ಮಾನಿಸಲಾಯಿತು.

ಮಂಡಳಿಯ ನಾಮನಿರ್ದೇಶಿತ ಸದಸ್ಯರಾದ ಶ್ಯಾಮಲಾ ಶಿವಪ್ರಕಾಶ್‌, ಸುಧೀರ್‌ ರಾಮಸಾ ಕಾಟಿಗರ್‌, ಕಾರ್ಯದರ್ಶಿ ಡಾ| ಶ್ರೀಧರ ಬಿ.ಭಜಂತ್ರಿ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜಿಲ್ಲಾಧಿಕಾರಿಗಳ ಪ್ರತಿನಿಗಳು, ಅಧಿಕಾರಿಗಳು ಸಭೆಯಲ್ಲಿದ್ದರು.

45 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮತಿ

ಈ ಬಾರಿ ಆಯವ್ಯಯದಲ್ಲಿ ಸರ್ಕಾರ 45 ಕೋಟಿ ರೂ.ಗಳನ್ನು ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿದೆ. ಈ ಅನುದಾನದಲ್ಲಿ 34.15 ಕೋಟಿ ರೂಪಾಯಿಗಳನ್ನು ಬಂಡವಾಳ ವೆಚ್ಚವಾಗಿ, ಮಂಡಳಿಯ ಈ ಹಿಂದೆ ಕೈಗೊಂಡ ಕಾಮಗರಿಗಳಿಗೆ, ವಿಶೇಷ ಘಟಕ ಯೋಜನೆಯಡಿ 7.18 ಕೋಟಿ ರೂಪಾಯಿ ಹಾಗೂ ಗಿರಿಜನ ಉಪಯೋಜನೆಯಡಿ 3.12 ಕೋಟಿ ರೂಪಾಯಿಗಳನ್ನು ಹೊಸ ಕಾಮಗಾರಿಗಳಿಗೆ ವೆಚ್ಚ ಮಾಡಲು ಮಂಡಳಿ ಅಧ್ಯಕ್ಷ ಎನ್‌.ಇ.ಜೀವನಮೂರ್ತಿ ವಿಷಯ ಮಂಡಿಸಿದರು

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.