ಬಿರುಗಾಳಿಗೆ ಉರುಳಿದ ವಿದ್ಯುತ್‌ ಕಂಬ-ಮರಗಳು


Team Udayavani, May 17, 2022, 12:57 PM IST

8rain

ಚಿಂಚೋಳಿ: ತಾಲೂಕಿನಲ್ಲಿ ರವಿವಾರ ಸಂಜೆ ಗುಡುಗು ಮಿಂಚು, ಸಿಡಿಲಿನ ಸಮೇತ ಬಿರುಗಾಳಿ ಬೀಸಿ ಸುರಿದ ಅಕಾಲಿಕ ಮಳೆಯಿಂದ ಅನೇಕ ಗ್ರಾಮಗಳಲ್ಲಿ ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ರಸ್ತೆ ಬದಿಯಲ್ಲಿರುವ ಗಿಡಮರಗಳು ಉರುಳಿದ್ದರಿಂದ ವಾಹನ ಸಂಚಾರಕ್ಕೆ ಜನರು ಪರದಾಡುವಂತೆ ಆಗಿತ್ತು.

ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಪೋಲಕಪಳ್ಳಿ, ಅಣವಾರ, ಕನಕಪುರ, ಸೇರಿ ಬಡಾ ತಾಂಡಾ, ಭಿಕ್ಕುನಾಯಕ ತಾಂಡಾ, ಏತಬಾರಪುರ ತಾಂಡಾ, ಭಿಕ್ಕುನಾಯಕ ತಾಂಡಾ ಇನ್ನಿತರ ಗ್ರಾಮಗಳಲ್ಲಿ ಬಿರುಗಾಳಿ ಬೀಸಿದ ಪರಿಣಾಮವಾಗಿ ಗಿಡ ಮರಗಳು ವಿದ್ಯುತ್‌ ಕಂಬಗಳ ಮೇಲೆ ಬಿದ್ದ ಪರಿಣಾಮವಾಗಿ ತಾಲೂಕಿನಲ್ಲಿ ಒಟ್ಟು 40 ವಿದ್ಯುತ್‌ ಕಂಬಗಳು ಮುರಿದು ನೆಲಕ್ಕುರುಳಿವೆ. ಒಂದು ಟಿಸಿಯೂ ನೆಲಕ್ಕೆ ಬಿದ್ದಿದೆ. ಒಟ್ಟು 4ಲಕ್ಷ ರೂ.ಗಳಷ್ಟು ಅಕಾಲಿಕ ಮಳೆಯಿಂದ ಹಾನಿ ಸಂಭವಿಸಿದೆ ಎಂದು ಜೆಸ್ಕಾಂ ಉಪ-ವಿಭಾಗದ ಎಇಇ ಉಮೇಶ ಗೋಳಾ ತಿಳಿಸಿದ್ದಾರೆ.

ರವಿವಾರ ಸಂಜೆ ಬೀಸಿದ ಭಾರಿ ಬಿರುಗಾಳಿಯಿಂದ ವಿದ್ಯುತ್‌ ಕಂಬಗಳು ಹಾಗೂ ವಿದ್ಯುತ್‌ ತಂತಿಗಳು ಕಡಿದು ಬಿದ್ದು ಹಾನಿಯಾಗಿರುವುದರಿಂದ ಲೈನ್‌ ಮನ್‌ಗಳು ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಶೀಘ್ರವೇ ವಿದ್ಯುತ್‌ ಪೂರೈಕೆ ಆಗಲಿದೆ ಎಂದು ಜೆಸ್ಕಾಂ ಎಇಇ ತಿಳಿಸಿದ್ದಾರೆ. ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಶಾಂತಕುಮಾರ ರೇವಣಸಿದ್ಧಪ್ಪ ಅವರಿಗೆ ಸೇರಿದ ತೊಗರಿ ಬೇಳೆ ಕಾರ್ಖಾನೆಯ (ದಾಲಮಿಲ್‌) ತಗಡುಗಳು ಗಾಳಿಗೆ ಹಾರಿ ಹೋಗಿವೆ. ಗೋಡೆ ಕುಸಿದು ಬಿದ್ದಿದೆ. ದಾಲ್‌ಮಿಲ್‌ದಲ್ಲಿದ್ದ ತೊಗರಿ ಬ್ಯಾಳಿ ಐದು ಕ್ವಿಂಟಲ್‌ ಮಳೆಯಿಂದ ಸಂಪೂರ್ಣ ಹಾಳಾಗಿದೆ. ಒಟ್ಟು 6.35ಲಕ್ಷ ರೂ. ಹಾನಿಯಾಗಿದೆ ಎಂದು ಶಾಂತಕುಮಾರ ಹಸರಗುಂಡಗಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಐನಾಪುರ ಕಂದಾಯ ನಿರೀಕ್ಷಕ ಆರೀಫ ಮತ್ತು ಗ್ರಾಮಲೆಕ್ಕಿಗ ಕಾರ್ತಿಕ ಭೇಟಿ ನೀಡಿ ಪರಿಶೀಲಿಸಿ ಹಾನಿ ಬಗ್ಗೆ ತಹಶೀಲ್ದಾರ್‌ಗೆ ವರದಿ ಸಲ್ಲಿಸಿದ್ದಾರೆ. ಪೋಲಕಪಳ್ಳಿ, ಅಣವಾರ, ದೇಗಲಮಡಿ, ಐನೋಳಿ, ಪಟಪಳ್ಳಿ, ಕನಕಪುರ, ಚಿಮ್ಮನಚೋಡ, ಪರದಾರ ಮೋತಕಪಳ್ಳಿ, ಗಂಗನಪಳ್ಳಿ, ಗರಗಪಳ್ಳಿ, ಕರ್ಚಖೇಡ ಗ್ರಾಮಗಳಲ್ಲಿ ಬಾಳೆಗಿಡಗಳು ಹಾನಿಯಾಗಿವೆ ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕ ರಾಜಕುಮಾರ ತಿಳಿಸಿದ್ದಾರೆ.

ಚಂದಾಪುರ, ಚಿಂಚೋಳಿ, ಕಲಭಾವಿ ತಾಂಡಾ, ಚಿಕ್ಕನಿಂಗದಳ್ಳಿ ತಾಂಡಾ, ಸೋಮಲಿಂಗದಳ್ಳಿ, ಮಿರಿಯಾಣ, ಕಲ್ಲೂರ ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಬಿದ್ದಿದೆ.

ಟಾಪ್ ನ್ಯೂಸ್

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.