ಸೂಡಿಯಲ್ಲಿ ಬೀಡುಬಿಟ್ಟ ಗ್ರಾಮೀಣಾಭಿವೃದ್ಧಿ ವಿವಿ ತಂಡ

ಗ್ರಾಮೀಣ ಸಮಗ್ರ ಅಧ್ಯಯನಕ್ಕೆ ವಿದ್ಯಾರ್ಥಿಗಳಿಂದ ಸರ್ವೇ

Team Udayavani, May 17, 2022, 1:26 PM IST

13

ಗಜೇಂದ್ರಗಡ: ಐತಿಹಾಸಿಕ ಹಿನ್ನೆಲೆಯ ಜೊತೆಗೆ ಚಾಲುಕ್ಯರ ಆಳ್ವಿಕೆಗೆ ಒಳಪಟ್ಟಿದ್ದ ಸೂಡಿ ಗ್ರಾಮದಲ್ಲಿ ಗ್ರಾಮೀಣ ಸಮಗ್ರ ಅಧ್ಯಯನಕ್ಕಾಗಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ತಂಡ ಬೀಡುಬಿಟ್ಟಿದೆ.

ಸುಸ್ಥಿರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ಜನತೆಯ ಜೀವನ ಗುಣಮಟ್ಟ ಸುಧಾರಿಸಿ ಗ್ರಾಮೀಣ ಸಮಾಜವನ್ನು ಉತ್ಕೃಷ್ಟ ಕೇಂದ್ರವಾಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾಗಿರುವ ವಿವಿಯ ವಿದ್ಯಾರ್ಥಿಗಳ ತಂಡ ಸೂಡಿಯಲ್ಲಿ ವಾಸ್ತವ್ಯ ಮಾಡಿ ಗ್ರಾಮ ಅಧ್ಯಯನ ನಡೆಸುತ್ತಿದೆ. ವಿವಿಯ 10 ವಿಭಾಗಗಳ ವಿದ್ಯಾರ್ಥಿಗಳನ್ನು ಒಳಗೊಂಡ 9 ತಂಡಗಳು ಕುಲಪತಿ ಪ್ರೊ| ವಿಷ್ಣುಕಾಂತ ಚಟಪಲ್ಲಿ ಹಾಗೂ ಕುಲಸಚಿವ ಪ್ರೊ| ಬಸವರಾಜ ಲಕ್ಕಣ್ಣವರ ಅವರ ಮಾರ್ಗದರ್ಶನದಲ್ಲಿ ಸೂಡಿ, ಲಕ್ಕುಂಡಿ, ಅಸುಂಡಿ, ಕಣವಿ, ಹೊಸಳ್ಳಿ, ಗೋಜನೂರ, ಬರದೂರ, ದೇವರ ಹುಬ್ಬಳ್ಳಿ, ಡಂಬಳ ಗ್ರಾಮಗಳಲ್ಲಿ ಮೇ 4ರಿಂದ 31ರ ವರೆಗೆ ಗ್ರಾಮ ವಾಸ್ತವ್ಯ ಮತ್ತು ಅಧ್ಯಯನ ಶಿಬಿರ ಹಮ್ಮಿಕೊಂಡಿವೆ.

ಸಮೀಪದ ಸೂಡಿ ಗ್ರಾಮದಲ್ಲಿ ನಡೆಯುತ್ತಿರುವ ಶಿಬಿರದಲ್ಲಿ ವಿಶ್ವವಿದ್ಯಾಲಯದ ಮುಖ್ಯ ಸಂಯೋಜಕ ಶಶಿಭೂಷಣ ಹಾಗೂ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮದ ಸಂಯೋಜಕಿ ಡಾ| ನಾಗವೇಣಿ ಎಸ್‌.ಜೆ. ನೇತೃತ್ವದಲ್ಲಿ 21 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿದ್ದು, ಗ್ರಾಮದ ತುಂಬೆಲ್ಲ ಸಂಚರಿಸಿ ದೇವಸ್ಥಾನಗಳು, ಮಠಗಳು, ಅಂಗನವಾಡಿ, ಶಾಲೆ, ಚರಂಡಿ ವ್ಯವಸ್ಥೆ, ನೀರಿನ ಸೌಲಭ್ಯ, ಜನರ ಆರೋಗ್ಯ ಸ್ಥಿತಿ-ಗತಿ, ರಾಜಕೀಯ ಸ್ಥಿತಿ, ಜನರ ಆರ್ಥಿಕತೆ, ಬ್ಯಾಂಕ್‌, ಅಂಚೆ ಕಚೇರಿಗಳಲ್ಲಿ ಜನರಿಗೆ ಸಿಗುತ್ತಿರುವ ಸೌಲಭ್ಯಗಳು, ಸರ್ಕಾರದ ಯೋಜನೆಗಳ ಸದುಪಯೋಗ ಹೀಗೆ ಹಲವು ವಿಷಯಗಳ ಕುರಿತು ಸರ್ವೇ ನಡೆಸಿ, ಜನರೊಂದಿಗೆ ಸೇರಿಕೊಂಡು ಗ್ರಾಮದ ಸಾಮಾಜಿಕ ನಕ್ಷೆ ಸಿದ್ಧಪಡಿಸಿದ್ದಾರೆ.

ವಿದ್ಯಾರ್ಥಿಗಳ ತಂಡ ಶ್ರಮದಾನದ ಮೂಲಕ ಸೂಡಿ ಗ್ರಾಮದಲ್ಲಿರುವ ಅತ್ಯಂತ ಪುರಾತನ ಹಾಗೂ ಸುಂದರ ಕೆತ್ತನೆ ಹೊಂದಿರುವ ನಾಗಕುಂಡ ಪುಷ್ಕರಣಿ ಸ್ವತ್ಛಗೊಳಿಸುವ ಕಾರ್ಯ ನಡೆಸಿದೆ. ಬಾವಿಯಲ್ಲಿರುವ ಗಿಡ-ಗಂಟಿ, ಕಸ ತೆರವುಗೊಳಿಸಿ ಸ್ಮಾರಕಗಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂಬ ಸಂದೇಶ ಸಾರಿದೆ.

ಮೂಲ ಸೌಲಭ್ಯಗಳು, ಸರ್ಕಾರದ ಯೋಜನೆಗಳು ಜನರಿಗೆ ತಲುಪಿವೆಯೇ ಎಂದು ಸರ್ವೇ ನಡೆಸಲು ಗ್ರಾಮದಲ್ಲಿ ಸಂಚರಿಸಿ ಜನರೊಂದಿಗೆ ಚರ್ಚಿಸಿದಾಗ ಜನರ ಪ್ರತಿಕ್ರಿಯೆ ವಿಭಿನ್ನವಾಗಿತ್ತು. ಈ ಸರ್ವೇಯಿಂದ ನಮಗೇನು ಲಾಭ, ನಿಮಗೇನೋ ಲಾಭ ಇದೆ ಹೀಗಾಗಿ ಇಷ್ಟೆಲ್ಲ ಕೇಳುತ್ತಿದ್ದೀರಿ ಎಂಬಿತ್ಯಾದಿ ಪ್ರಶ್ನೆಗಳು ಕೇಳಿ ಬಂದವು. ಕಾಲೇಜಿನಲ್ಲಿ ಕಲಿಕೆ, ಗ್ರಾಮೀಣ ಪ್ರದೇಶದ ಸ್ಥಿತಿಗತಿ ವಿಭಿನ್ನವಾಗಿದೆ. ವಿಜಯ ಕಮಾಟ್ರ, ಆರ್‌ಡಿಪಿಆರ್‌ ವಿದ್ಯಾರ್ಥಿ, ಗ್ರಾಮೀಣಾಭಿವೃದ್ಧಿ ವಿವಿ

ಗ್ರಾಮೀಣಾಭಿವೃದ್ಧಿ ವಿವಿ ಗುರಿ ಗ್ರಾಮಗಳ ಸುಸ್ಥಿರ ಅಭಿವೃದ್ಧಿಯಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಗ್ರಾಮ ಅಂದರೇನು ಎಂಬುದರ ಕುರಿತು ಅರಿವು ಮೂಡಿಸುವುದರ ಜೊತೆಗೆ ಅಲ್ಲಿನ ವಾಸ್ತವಿಕತೆ, ಸಮಸ್ಯೆಗಳ ಕುರಿತು ಆಳವಾದ ಅಧ್ಯಯನ ನಡೆಸಿ ಅವುಗಳಿಗೆ ತಮ್ಮ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸಿ ಮೂರು ಪ್ರತಿಗಳಲ್ಲಿ ವರದಿ ತಯಾರಿಸಿ ಗ್ರಾಪಂ, ಜಿಪಂ ಮತ್ತು ವಿವಿಗೆ ಸಲ್ಲಿಸುವ ಉದ್ದೇಶವಾಗಿದೆ.  –ಡಾ| ನಾಗವೇಣಿ ಎಸ್‌.ಜೆ., ಗ್ರಾಮೀಣ ವಿವಿ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮದ ಸಂಯೋಜಕಿ

ಗ್ರಾಮದಲ್ಲಿ ಚಾಲುಕ್ಯರ ಕಾಲದ ಅತ್ಯಂತ ಸುಂದರ ಕೆತ್ತನೆ ಹೊಂದಿರುವ ಹಲವು ದೇವಸ್ಥಾನ, ಪುಷ್ಕರಣಿ, ಸ್ಮಾರಕಗಳಿವೆ. ಆದರೆ ಅವುಗಳಿಗೆ ರಕ್ಷಣೆ, ಕಾಯಕಲ್ಪ ಸಿಗದ ಕಾರಣ ನಶಿಸಿ ಹೋಗುತ್ತಿರುವುದು ದುರದೃಷ್ಟಕರ. ಸ್ಮಾರಕಗಳ ರಕ್ಷಣೆಗೆ ಯುವ ಜನತೆ ಮುಂದಾಗಬೇಕು.  –ತನ್ವೀರ ದೊಡ್ಡಮನಿ, ಎಂಎ ಆರ್‌ಡಿಪಿಆರ್‌ ವಿದ್ಯಾರ್ಥಿ, ಗ್ರಾಮೀಣಾಭಿವೃದ್ಧಿ ವಿವಿ

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.