ಪೊಲೀಸರ ಹೆಸರು ಬಳಸಿಕೊಂಡು ಸುಲಿಗೆ: ಆರೋಪಿ ಬಂಧನ


Team Udayavani, May 17, 2022, 1:30 PM IST

ಪೊಲೀಸರ ಹೆಸರು ಬಳಸಿಕೊಂಡು ಸುಲಿಗೆ: ಆರೋಪಿ ಬಂಧನ

ಬೆಂಗಳೂರು: ಕ್ಲಬ್‌ಗಳಲ್ಲಿ ಜೂಜಾಟ ನಡೆಸಲು ಒಪ್ಪಂದ ಮಾಡಿಕೊಂಡು ಪೊಲೀಸರಿಗೆ ಹಣ ಕೊಟ್ಟರೆ ರಕ್ಷಣೆ ನೀಡುತ್ತಾರೆ ಎಂದು ಮಾತ ನಾಡಿರುವ ಆಡಿಯೋ ವೈರಲ್‌ ಸಂಬಂಧ ಆರ್‌ ಟಿಐ ಕಾರ್ಯಕರ್ತ ಅಶೋಕ್‌ ಕುಮಾರ್‌ ಅಡಿಗ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಆರೋಪಿಯನ್ನು ಕೋರ್ಟಿಗೆ ಹಾಜರು ಪಡಿಸಿ 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ವೈರಲ್‌ ಆಗಿರುವ ಆಡಿಯೋದಲ್ಲಿ ಅಶೋಕ್‌ ಕುಮಾರ್‌ ಅಡಿಗ, “ಸಿಸಿಬಿ ಪೊಲೀಸರು ಹಾಗೂ ಠಾಣಾ ಮಟ್ಟದ ಪೊಲೀಸರಿಗೆ ತಿಂಗಳು ಅಥವಾ ವಾರಕ್ಕೆ ಇಂತಿಷ್ಟು ನಿಗದಿ ಮಾಡಲಾಗಿದೆ’ ಎಂದು ಕ್ಲಬ್‌ ಮಾಲೀಕರೊಬ್ಬರ ಜತೆ ಮಾತನಾಡಿದ್ದಾರೆ.

ಅಲ್ಲದೆ, ಕ್ಲಬ್‌ಗಳನ್ನು ತನ್ನ ಹೆಸರಿಗೆ ಅಗ್ರಿಮೆಂಟ್‌ ಮಾಡಿಕೊಟ್ಟರೆ, “ನಗರ ಪೊಲೀಸ ಆಯುಕ್ತರು, ಸಿಸಿಬಿ ಮುಖ್ಯಸ್ಥ ರಮಣಗುಪ್ತಾ ಸೇರಿ ಕಾನ್‌ಸ್ಟೇಬಲ್‌ ವರೆಗೂ ಯಾವೊಬ್ಬ ಅಧಿಕಾರಿಯೂ ತೊಂದರೆ ಕೊಡದಂತೆ ನೋಡಿಕೊಳ್ಳುತ್ತೇನೆ. ವಿಷಯ ಏನೆಂದರೆ, ಅಡಿಗ ಹೆಸರಿನಲ್ಲಿ ಕ್ಲಬ್‌ಗಳ ಅಗ್ರಿಮೆಂಟ್‌ಗಳಿದ್ದರೆ ಯಾವುದೇ ದಾಳಿ ನಡೆಸುವುದಿಲ್ಲ ಎಂದು ಪೊಲೀಸ್‌ ಇನ್‌ಸೆಕ್ಟರ್‌ಗಳೇ ಹೇಳುತ್ತಿದ್ದಾರೆ. ಹೀಗಾಗಿ ಕ್ಲಬ್‌ಗಳನ್ನು ತನ್ನ ಹೆಸರಿಗೆ ಅಗ್ರಿಮೆಂಟ್‌ ಮಾಡಿಕೊಡುವಂತೆ’ ಅಡಿಗ ಮಾತನಾಡಿದ್ದಾನೆ.

ಕ್ಲಬ್‌ ಮಾಲೀಕರಿಂದ ದೂರು: ಈ ಸಂಬಂಧ ಅಶೋಕ್‌ ಕುಮಾರ್‌ ಅಡಿಗ ಕಳೆದ ತಿಂಗಳು ಮಾಗಡಿ ರಸ್ತೆಯ ಕ್ಲಬ್‌ವೊಂದರಲ್ಲಿ ಇಸ್ಪೀಟ್‌ ಕ್ಲಬ್‌ ಮಾಲೀಕರ ಸಭೆ ನಡೆಸಿದ್ದ. ಈ ವೇಳೆ ತನ್ನ ಹೆಸರಿಗೆ ಕ್ಲಬ್‌ಗಳನ್ನು ಅಗ್ರಿಮೆಂಟ್‌ ಮಾಡಿಕೊಡುವಂತೆ ಕ್ಲಬ್‌ಗಳ ಮಾಲೀಕರಿಗೆ ಸೂಚಿಸಿದ್ದ. ಅದಕ್ಕಾಗಿ ಪ್ರತಿ ತಿಂಗಳು 50 ಸಾವಿರ ರೂ.ನೀಡ ಬೇಕು ಎಂದು ಬೇಡಿಕೆ ಇಟ್ಟಿದ್ದ. ಅದಕ್ಕೆ ಒಪ್ಪದ ರಮೇಶ್‌ ಹಾಗೂ ಇತರರು ಅಡಿಗಗೆ ಎಚ್ಚರಿಕೆ ನೀಡಿದ್ದರು.

ಅದರಿಂದ ಆಕ್ರೋಶಗೊಂಡ ಆರೋಪಿ, ತನ್ನ ಸಹಕಾರ ಇಲ್ಲದೆ ಕ್ಲಬ್‌ಗಳನ್ನು ಹೇಗೆ ನಡೆಸುತ್ತಿರಾ? ಎಂದು ಪಿಸ್ತೂಲ್‌ ತೋರಿಸಿ ಇನ್ನು ಅರ್ಧ ಗಂಟೆಯಲ್ಲಿ ಕ್ಲಬ್‌ ಮುಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಅದರಿಂದ ಹೆದರಿದ ಶ್ರೀನಿವಾಸ್‌ ಎಂಬ ಕ್ಲಬ್‌ ಮಾಲೀಕ 50 ಸಾವಿರ ರೂ. ಕೊಟ್ಟಿದ್ದರು ಎಂದು ರಮೇಶ್‌ ಮಾಗಡಿ ರಸ್ತೆ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರ್‌ಟಿಐ ಕಾರ್ಯಕರ್ತನ ಸೋಗಿನಲ್ಲಿ ವಂಚನೆ : ಅಶೋಕ್‌ ಕುಮಾರ್‌ ಅಡಿಗ ಆರ್‌ಟಿಐ ಕಾರ್ಯಕರ್ತನ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಅಮಾಯಕರ ಬಳಿ ಹಣ ಸುಲಿಗೆ ಮಾಡುತ್ತಿದ್ದ. ಪೊಲೀಸರ ಹೆಸರು ಬಳಸಿಕೊಂಡು ನಿರಂತರವಾಗಿ ಕ್ಲಬ್‌ ಮಾಲೀಕರು, ಹೋಟೆಲ್‌ ಮಾಲೀಕರಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಎಂಬ ಆರೋಪ ಕೂಡ ಇದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಈ ಸಂಬಂಧ 10 ದಿನಗಳ ಕಾಲ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.