ವಿವಿಧ ಗ್ರಾಪಂ ಉಪಚುನಾವಣೆ: ನಿಷೇಧಾಜ್ಞೆ ಜಾರಿ
Team Udayavani, May 17, 2022, 3:17 PM IST
ಮಂಡ್ಯ: ಜಿಲ್ಲೆಯಲ್ಲಿ ಖಾಲಿ ಇರುವ ಮುದಗಂದೂರು, ಮಂಡ್ಯ ಗ್ರಾಮಾಂತರ, ಕೊಪ್ಪ, ಕದಲೂರು, ಅಣ್ಣೂರುಗ್ರಾಪಂಗಳಿಗೆ ಮೇ 20ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಮತಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಸ್.ಅಶ್ವತಿ ಆದೇಶ ಹೊರಡಿಸಿದ್ದಾರೆ.
ಮತದಾನದ ಸಂದರ್ಭದಲ್ಲಿ ಅಹಿತಕರ ಕೃತ್ಯ ಕೈಗೊಳ್ಳಬಹುದಾದ ಸಾಧ್ಯತೆಗಳಿದ್ದು, ಇಂತಹ ಕೃತ್ಯಗಳನ್ನು ನಿಯಂತ್ರಿಸಲು ಮತ್ತು ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮೇ 20ರ ಬೆಳಗ್ಗೆ 5ರಿಂದ ಸಂಜೆ 6ರವರೆಗೆ ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ.
ಅಣಕು ಪ್ರದರ್ಶನ ನಿಷಿದ್ಧ: ಮತದಾನ ನಡೆಯುವ ಗ್ರಾಪಂ ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿ ಯಲ್ಲಿ ಯಾವುದೇ ಅಂಗಡಿ ಮುಂಗಟ್ಟು ತೆರೆಯುವಂತಿಲ್ಲ. ನಿಷೇಧಾಜ್ಞೆ ಇರುವ ಯಾವುದೇ ಪ್ರದೇಶದಲ್ಲಿಯೂ ಜನ ಮಾರಕಾಸ್ತ್ರ ಹಿಡಿದು ತಿರುಗಾಡುವಂತಿಲ್ಲ. ಯಾವುದೇ ಮೆರವಣಿಗೆ ಸಭೆ-ಸಮಾರಂಭ ಮಾಡುವಂತಿಲ್ಲ. ಪಟಾಕಿ ಸಿಡಿಮದ್ದು ಹಾಗೂ ಇತರೆ ಸ್ಫೋಟಕಗಳನ್ನು ಉಪಯೋಗಿಸುವಂತಿಲ್ಲ. ಮನುಷ್ಯ ಶವಗಳ ಅಥವಾ ಪ್ರತಿಕೃತಿ ಅಣುಕುಗಳ ಪ್ರದರ್ಶನಮಾಡುವುದನ್ನು ನಿರ್ಬಂಧಿಸಲಾಗಿದೆ.
ಅನ್ವಯಿಸುವುದಿಲ್ಲ: ಬಹಿರಂಗವಾಗಿ ಘೋಷಣೆ ಮಾಡುವುದು, ಪ್ರಚೋಧನಾತ್ಮಕ ಮತ್ತು ಉದ್ರೇಕಕಾರಿ, ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿ ಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು. ಈ ನಿಷೇಧಾಜ್ಞೆಯೂ ಸದುದ್ದೇಶದ ಮದುವೆ, ಶವಸಂಸ್ಕಾರ ಕಾರ್ಯಗಳಿಗೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಮತ್ತು ಚುನಾವಣೆ ಕಾರ್ಯಕ್ಕೆ ನೇಮಿಸಲ್ಪಟ್ಟಿರುವ ಅಧಿಕಾರಿ-ಸಿಬ್ಬಂದಿ ವರ್ಗದವರಿಗೆ ಮತ್ತು ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸಂತೆ ಜಾತ್ರೆ ನಿಷೇಧ: ಉಪಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ಮೇ 20ರಂದು ಯಾವುದೇ ಜಾತ್ರೆ(ದನಗಳ ಜಾತ್ರೆ ಸೇರಿದಂತೆ), ಸಂತೆ ಹಾಗೂ ಇತ್ಯಾದಿ ಉತ್ಸವ ನಿಷೇ ಧಿಸಿ ಜಿಲ್ಲಾಧಿಕಾರಿ ಎಸ್.ಅಶ್ವತಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್