ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ


Team Udayavani, May 17, 2022, 5:36 PM IST

21school

ದೇವದುರ್ಗ: ತಾಲೂಕು ವ್ಯಾಪ್ತಿಯಲ್ಲಿ 193 ಶಿಥಿಲಗೊಂಡ ಶಾಲಾ ಕೊಠಡಿಗಳಿವೆ. ಜಾಲಹಳ್ಳಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು, ನೂರು ವರ್ಷ ಪೂರೈಸಿದ ಶಾಲೆ ಇದಾಗಿದ್ದು, ಬಹುತೇಕ ಕೋಣೆಗಳು ಶಿಥಿಲಗೊಂಡಿವೆ.

ಶಿಕ್ಷಕರು ಬಯಲಲ್ಲೇ ಬೋಧಿಸಬೇಕಿದೆ. ಶಾಲೆಯ ಮೇಲ್ಛಾವಣಿ ಉದುರಿ ಬೀಳುತ್ತಿದ್ದು, ಬಳಕೆಗೆ ಯೋಗ್ಯವಿಲ್ಲದ ಹಿನ್ನೆಲೆಯಲ್ಲಿ ಬೀಗ ಜಡಿಯಲಾಗಿದೆ. ಸರಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಬಯಲಲ್ಲೇ ಪಾಠ ಹೇಳಬೇಕಿದೆ.

ತಾಲೂಕು ವ್ಯಾಪ್ತಿಯಲ್ಲಿ 25 ಕ್ಲಸ್ಟರ್‌ಗಳು ಇದ್ದು, ಒಂದೊಂದು ಕ್ಲಸ್ಟರ್‌ನಲ್ಲಿ ಒಂದೊಂದೇ ಸಮಸ್ಯೆ ಇದೆ. ಕೊಪ್ಪರ ಕ್ಲಸ್ಟರ್‌ ವ್ಯಾಪ್ತಿಯ ಯಮನಾಳ ಸರಕಾರಿ ಶಾಲೆಯಲ್ಲಿ ಒಂದೇ ಕೋಣೆ ಇದ್ದು, 1ರಿಂದ 5 ತರಗತಿಗಳನ್ನು ನಡೆಸಲಾಗುತ್ತಿದೆ. ಕಮದಾಳ ಶಾಲೆಯಲ್ಲೂ ಇದೇ ಪರಿಸ್ಥಿತಿ ಇದ್ದು, ಮಕ್ಕಳನ್ನು ಕುರಿಗಳಂತೆ ಕೂಡಿ ಹಾಕಿ ಪಾಠ ಹೇಳಲಾಗುತ್ತಿದೆ.

ಕೆ.ಇರಬಗೇರಾ ಕ್ಲಸ್ಟರ್‌ ವ್ಯಾಪ್ತಿ ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಕುಡಿವ ನೀರು, ಶೌಚಾಲಯ ಸೇರಿದಂತೆ ಸಮಸ್ಯೆ ಶಿಕ್ಷಕರನ್ನು ಕಾಡಲಾರಂಭಿಸಿದೆ. ಕ್ವಾರರೇದೊಡ್ಡಿ, ತುಗ್ಲರೇದೊಡ್ಡಿ, ಎಚ್‌. ಎನ್‌.ತಾಂಡಾ, ಮಜ್ಜಿಗೇರದೊಡ್ಡಿ ಸೇರಿ ಇತರೆ ಶಾಲೆಯಲ್ಲಿ ಒಬ್ಬರೇ ಶಿಕ್ಷಕರಿದ್ದು, ಐದು ತರಗತಿಗಳ ಮಕ್ಕಳಿಗೆ ಪಾಠ ಹೇಳಲಾಗುತ್ತಿದೆ.

ಕೊತ್ತಿಗುಡ್ಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರ್‍ನಾಲ್ಕು ಕೊಠಡಿಗಳಿದ್ದು, ಛತ್ತು ಉದರಿ ಕಬ್ಬಿಣದ ರಾಡುಗಳು ಕಾಣುತ್ತಿವೆ. ಒಂದು ಕೋಣೆಗೆ ಬೀಗ ಜಡಿಯಲಾಗಿದೆ. ನೀರಿನ ಅಭಾವ ಹಿನ್ನೆಲೆ ಶೌಚಾಲಯ ಪಾಳು ಕೊಂಪೆಯಾಗಿದೆ.

ತಾಲೂಕಿನಲ್ಲಿ 317 ಪ್ರಾಥಮಿಕ ಹಾಗೂ 33 ಪ್ರೌಢಶಾಲೆ ಸೇರಿ ಒಟ್ಟು 350 ಶಾಲೆಗಳಿವೆ. 591 ಶಾಲೆ ಕೊಠಡಿಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕಿದ್ದು, 193 ಶಾಲೆಗಳು ಸಂಪೂರ್ಣ ನೆಲಸಮಗೊಳಿಸಿ ಮರು ನಿರ್ಮಿಸಬೇಕಿದೆ. 62 ಶಾಲೆಗಳಿಗೆ ಕಾಂಪೌಂಡ್‌ ನಿರ್ಮಿಸಬೇಕಿದೆ. ಒಟ್ಟು 810 ಶೌಚಾಲಯಗಳ ಕೊರತೆ ಇದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಕಟ್ಟಡಗಳ ದುರಸ್ತಿ ಮರು ನಿರ್ಮಾಣ, ಕುಡಿವ ನೀರು, ಶೌಚಾಲಯ ಸಮಸ್ಯೆ ಕುರಿತು ಪಟ್ಟಿ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಮೇಲಧಿಕಾರಿಗಳಿಗೆ ನೀಡಲಾಗಿದೆ. ಆರ್‌.ಇಂದಿರಾ, ಕ್ಷೇತ್ರ ಶಿಕ್ಷಣಾಧಿಕಾರಿ

ನಾಗರಾಜ ತೇಲ್ಕರ್

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.