ಪಿಎಸ್ಐ ನೇಮಕಾತಿ ಅಕ್ರಮ : ಡಿವೈಎಸ್ಪಿ ಮಲ್ಲಿಕಾರ್ಜುನ್ ಸಾಲಿ ಸೇರಿ ಐವರಿಗೆ ಜೈಲೇ ಗತಿ
ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ
Team Udayavani, May 17, 2022, 8:23 PM IST
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಆರೋಪ ಮೇರೆಗೆ ಜೈಲು ಪಾಲಾಗಿರುವ, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಸೇರಿದಂತೆ ಇತರ ಐದು ಜನರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.
ಕಲಬುರಗಿಯ ಮೂರನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐವರು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ್ದು ಇದರೊಂದಿಗೆ ಜೈಲುವಾಸ ಮುಂದುವರೆದಿದೆ.
ಅಮಾನತ್ತುಗೊಂಡ ಡಿವೈಎಸ್ಪಿ ಮಲ್ಲಿಕಾರ್ಜುನ್ ಸಾಲಿ, ಶಹಾಬಾದ್ ನಗರಸಭೆ ಎಸ್ ಡಿಎ ಜ್ಯೋತಿ ಪಾಟೀಲ್, ಜ್ಞಾನಜ್ಯೋತಿ ಶಾಲೆಯ ಶಿಕ್ಷಕಿಯರಾದ ಸುನಂದಾ, ಅರ್ಚನಾ ಹಾಗೂ ಮಧ್ಯವರ್ತಿ ಶ್ರೀಧರ್ ಪವಾರ್ ಅವರ ಜಾಮೀನು ನ್ಯಾಯಾಲಯ ತಿರಸ್ಕರಿಸಲಾಗಿದೆ.
ನ್ಯಾಯಮೂರ್ತಿ ಬಸವರಾಜ್ ನೇಸರಗಿ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಿದರೆ ಸ್ವಾಗತ: ಡಿ.ಕೆ.ಸುರೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!