ಸರಕಾರದಿಂದ ಗೂಂಡಾಗಿರಿಗೆ ಉತ್ತೇಜನ: ಖಾದರ್‌ ಆರೋಪ


Team Udayavani, May 18, 2022, 12:33 AM IST

ಸರಕಾರದಿಂದ ಗೂಂಡಾಗಿರಿಗೆ ಉತ್ತೇಜನ: ಖಾದರ್‌ ಆರೋಪ

ಮಂಗಳೂರು: ಮಕ್ಕಳ ಕೈಗೆ ಪೆನ್ನು ಪುಸ್ತಕ ಕೊಟ್ಟು ಸತ್ಪ್ರಜೆಗಳಾಗಿ ರೂಪಿಸಬೇಕಾಗಿರುವ ಶಾಲೆಗಳಲ್ಲಿ, ಶಾಸಕರ ಸಮ್ಮುಖದಲ್ಲೇ ರೈಫ‌ಲ್‌ ಟ್ರೈನಿಂಗ್‌, ಆಯುಧ ನೀಡಿರುವುದು ಸರಕಾರದ ತಾಲಿಬಾನ್‌ ಸಂಸ್ಕೃತಿಯನ್ನು ತೋರಿಸು
ತ್ತದೆ. ರಾಜ್ಯ ಸರಕಾರ ವಿವಿಧ ಸಂಘ ಸಂಸ್ಥೆಗಳಿಗೆ ಗೂಂಡಾಗಿರಿಯನ್ನು ಹೊರಗುತ್ತಿಗೆ ನೀಡಿರುವಂತೆ ತೋರುತ್ತದೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು. ಟಿ. ಖಾದರ್‌ ಆರೋಪಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಘಟನೆಯ ಕುರಿತಂತೆ ಗೃಹಸಚಿವರು ಮತ್ತು ಶಿಕ್ಷಣ ಸಚಿವರು ಜನರಿಗೆ ಉತ್ತರ ನೀಡಬೇಕು. ಈ ಶಸ್ತ್ರಾಸ್ತ್ರ ತರಬೇತಿಯನ್ನು ಆಯೋಜಿಸಿದ್ದು ಯಾರು, ಇದರ ಉದ್ದೇಶ ಏನು, ಅನುಮತಿ ಕೊಟ್ಟವರು ಯಾರು ಎನ್ನುವುದನ್ನು ಬಹಿರಂಗಪಡಿಸಬೇಕು. ಸರಕಾರ ಈ ಬಗ್ಗೆ ತನಿಖೆಗೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು. ಶಾಸಕ ಹರೀಶ್‌ ಪೂಂಜಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಖಾದರ್‌, ಬೆಳ್ತಂಗಡಿಯ ಜನರೇ ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಮಳಲಿಯ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಾಖಲೆ ನೋಡಿ ನ್ಯಾಯ ಒದಗಿಸಬೇಕು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಈಗಾಗಲೇ ಅವರಿಗೆ ಸಲ್ಲಿಸಲಾಗಿದೆ. ಹಳೇ ಮಸೀದಿ ಆಗಿರುವುದರಿಂದ ಅದರ ರಚನೆ ಅಂದಿನ ಕಾಲಕ್ಕೆ ತಕ್ಕಂತೆ ಇತ್ತು. ಇದು ಸ್ಥಳೀಯರಿಗೂ ಗೊತ್ತು. ಹೊರಗಿನಿಂದ ಬಂದವರು ಅದರ ಕುರಿತು ಸಂದೇಹ ವ್ಯಕ್ತಪಡಿಸುವುದು ಸರಿಯಲ್ಲ. ಆದ್ದರಿಂದ ಜಿಲ್ಲಾ ಧಿಕಾರಿ ಶೀಘ್ರ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಖಾದರ್‌ ಹೇಳಿದರು.

ಮುಖಂಡರಾದ ಶಶಿಧರ ಹೆಗ್ಡೆ, ಸದಾಶಿವ ಉಳ್ಳಾಲ್‌, ಶಾಹುಲ್‌ ಹಮೀದ್‌ ಉಪಸ್ಥಿತರಿದ್ದರು.

ಖಾದರ್‌ ಹೇಳಿಕೆಗೆ ಸುನಿಲ್‌ ತಿರುಗೇಟು
ಪುತ್ತೂರು: ರಾಜ್ಯದಲ್ಲಿ ತಾಲಿಬಾನ್‌ ಸಂಸ್ಕೃತಿಯ ಸರಕಾರ ಇದೆ ಎಂಬ ವಿಪಕ್ಷ ಉಪನಾಯಕ ಯು. ಟಿ. ಖಾದರ್‌ ಹೇಳಿಕೆಗೆ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌ ತಿರುಗೇಟು ನೀಡಿದ್ದಾರೆ. ಪತ್ರಕರ್ತರ ಜತೆ ಮಾತನಾಡಿದ ಅವರು, ಶಾಲಾ ವಿದ್ಯಾರ್ಥಿಗಳಿಗೆ ರೈಫ‌ಲ್‌ ತರಬೇತಿ ನೀಡುವಂತಹ ಸರಕಾರ ಇದೆ ಎಂಬ ಖಾದರ್‌ ಹೇಳಿಕೆಯನ್ನು ಖಂಡಿಸಿದರು. ತಾಲಿಬಾನ್‌ ಸಂಸ್ಕೃತಿಯ ಬಗ್ಗೆ ಮಾತನಾಡುವ ಖಾದರ್‌ ಜಿಲ್ಲೆಯ ಶಾಂತಿ ಕದಡಲು ಎಷ್ಟು ಕೊಡುಗೆ ನೀಡಿದ್ದಾರೆ ಎನ್ನುವುದು ಜನತೆಗೆ ಗೊತ್ತಿದೆ ಎಂದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.