ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

Team Udayavani, May 18, 2022, 1:20 AM IST

thumb 1

ಅಗಾಧ ಮಳೆಯಿಂದಾಗಿ ಜಲಾವೃತವಾಗಿರುವ ಅಸ್ಸಾಂನ ಹಾಫ್ಲಾಂಗ್‌ ರೈಲು ನಿಲ್ದಾಣ.

ಹೊಸದಿಲ್ಲಿ: “ದೇಶದ ಹಲವಾರು ರಾಜ್ಯಗಳಲ್ಲಿ ನಡೆಯುತ್ತಿರುವ ಮಳೆರಾಯನ ಅಬ್ಬರ ಮುಂದು­ವರಿದಿದೆ. ಮಳೆಯಿಂದ ತೊಯ್ದು ತೊಪ್ಪೆಯಾಗಿ­ರುವ ಕೇರಳದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದ್ದು, ಆ ರಾಜ್ಯದ ಎಂಟು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

“ಎರ್ನಾಕುಳಂ, ಇಡುಕ್ಕಿ, ತೃಶ್ಶೂರ್‌, ಪಾಲ­ಕ್ಕಾಡ್‌, ಮಲಪ್ಪುರಂ, ಕೋಯಿಕ್ಕೋಡ್‌, ವಯ­ನಾಡ್‌, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಟ್‌ ಅಲರ್ಟ್‌ ನೀಡಲಾಗಿದೆ.

ಈ ಪ್ರಾಂತ್ಯ­ಗಳಲ್ಲಿ 20 ಸೆಂ.ಮೀ.ನಷ್ಟು ಮಳೆಯಾಗುವ ಸಾಧ್ಯತೆಯಿದೆ’ ಎಂದು ಐಎಂಡಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ, ಕೇರಳದ ಕರಾವಳಿ ಪ್ರಾಂತ್ಯಗಳ­ಲ್ಲಿರುವ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಕೂಡದೆಂದು ಕೇರಳ ವಿಪತ್ತು ನಿರ್ವಹಣ ಪ್ರಾಧಿಕಾರ (ಎಸ್‌ಡಿಎಂಎ) ಹೇಳಿದೆ. ಲಕ್ಷದ್ವೀಪ ಸಮೂಹದಲ್ಲಿ ಕಾಣಿಸಿಕೊಂಡಿದ್ದ ಚಂಡ­ಮಾರುತವು ಕೇರಳದ ಕಡೆಗೆ ಸ್ಥಳಾಂತರಗೊಂಡಿದೆ.

ಚಂಡಮಾರುತದ ಅಲೆಗಳು ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬರುತ್ತಿವೆ ಎಂದು ಐಎಂಡಿ ತಿಳಿಸಿದೆ.

ಮಳೆ ಆವರಿಸಿರುವ ಹಾಗೂ ಆವರಿಸಲಿರುವ ಪ್ರಾಂತಗಳಲ್ಲಿ ಈಗಾಗಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇರಳ ಸರಕಾರ ಹೇಳಿದೆ. ಮಳೆ ಪೀಡಿತ ಪ್ರತೀ ಜಿಲ್ಲೆಯಲ್ಲೂ, ಪ್ರತೀ ಪ್ರಾಂತ್ಯ­ದಲ್ಲೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆಗಳನ್ನು (ಎನ್‌ಡಿಆರ್‌ಎಫ್) ನಿಯೋಜಿಸಲಾ­ಗಿದೆ. ಎನ್‌ಡಿಆರ್‌ಎಫ್ಗೆ ಎಸ್‌ಡಿಎಂಎ ಕೂಡ ಸಾಥ್‌ ನೀಡುತ್ತಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.

ಅಸ್ಸಾಂ: ರೈಲಿನಲ್ಲಿದ್ದವರ ಏರ್‌ಲಿಫ್ಟ್
ಅಸ್ಸಾಂನ ಡಿಮಾಹಸಾವೊ ಜಿಲ್ಲೆಯ ಹಾಫ್ಲಾಂಗ್‌ ಎಂಬಲ್ಲಿರುವ ರೈಲು ನಿಲ್ದಾಣದ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು, ಅದರ ಜತೆಯಲ್ಲೇ ಅಗಾಧ­ವಾದ ಮಳೆಯಾಗುತ್ತಿರುವ ಪರಿಣಾಮ, ಹಾಫ್ಲಾಂಗ್‌ ರೈಲು ನಿಲ್ದಾಣದಿಂದ ಹೊರಡಬೇಕಿದ್ದ ಗುವಾಹಾಟಿ- ಸಿಲ್ಚಾರ್‌ ಎಕ್ಸ್‌ಪ್ರೆಸ್‌ ರೈಲು ಸ್ಥಗಿತವಾಯಿತು.

ರೈಲು ನಿಲ್ದಾಣವೆಲ್ಲ ಜಲಾವೃತ್ತವಾದ ಹಿನ್ನೆಲೆಯಲ್ಲಿ ರೈಲಿನಲ್ಲಿದ್ದ ಸುಮಾರು 100 ಪ್ರಯಾಣಿಕರನ್ನು ಏರ್‌ಲಿಫ್ಟ್ ಮೂಲಕ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯಲಾಗಿದೆ. ಅಕ್ಕಪಕ್ಕದ ಬೆಟ್ಟಗ­ಳಿಂದ ರೈಲು ನಿಲ್ದಾಣಕ್ಕೆ ಮಳೆ ನೀರು ಪ್ರವಾಹ ರೀತಿಯಲ್ಲಿ ತುಂಬಿಕೊಳ್ಳುತ್ತಲೇ ಇದ್ದು, ಮಂಗಳ­ವಾರ­ದಂದು ಅಲ್ಲಿ ಕೆಲವು ರೈಲುಗಳ ಬೋಗಿಗಳು ಮಗುಚಿಕೊಂಡಿವೆ.

ಮುಂದುವರಿದ ಭೂಕುಸಿತ: ತೀವ್ರ ಮಳೆ­ಯಿಂದಾಗಿ ಅಸ್ಸಾಂನಲ್ಲಿ ಭೂಕುಸಿತ ಪ್ರಕರಣಗಳು ಇನ್ನೂ ಹೆಚ್ಚಾಗಿವೆ. ಭಾರತೀಯ ರೈಲ್ವೇಯ ಈಶಾನ್ಯ ಗಡಿ ರೈಲ್ವೆ (ಎನ್‌ಎಫ್ಆರ್‌) ಕಾರ್ಯಾಚರಣೆಯ ವ್ಯಾಪ್ತಿಯ­ಲ್ಲಿರುವ ಲಂಮ್‌ಡಿಂಗ್‌-ಬದಾರ್‌ಪುರದಲ್ಲಿ ವಲಯ­ದಲ್ಲಿ ಅತೀ ಹೆಚ್ಚು ಭೂಕುಸಿತಗಳು ಸಂಭವಿಸಿವೆ.

ತ್ರಿಪುರಾ, ಮೇಘಾಲಯ, ಮಿಜೋರಾಂ ಹಾಗೂ ಅಸ್ಸಾಂನ ದಕ್ಷಿಣದ ಪ್ರಾಂತ್ಯ­ಗಳಿಗೆ ರೈಲ್ವೇ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖವಾದ ಭಾಗವಾಗಿದೆ. ಆದರೆ ಇಲ್ಲಿ ಸಂಭವಿಸಿರುವ ಭೂ ಕುಸಿತಗಳಿಂದಾಗಿ ರೈಲ್ವೆ ಸಂಪರ್ಕ ಕಡಿತ­ಗೊಂಡಂತಾಗಿದೆ.

ಟಾಪ್ ನ್ಯೂಸ್

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.