ಕಾಡಿಗೆ ಲಾರಿಗಳ ಪ್ರವೇಶ ನಿರ್ಬಂಧಿಸಲು ತಾಕೀತು

ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಹರತಾಳು ಹಾಲಪ್ಪ ಸೂಚನೆ

Team Udayavani, May 18, 2022, 3:11 PM IST

hard

ಸಾಗರ: ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಕೇಶಿಯಾ ಸೇರಿದಂತೆ ಇತರ ಮರ ಕಡಿತಲೆಗೆ ಅರಣ್ಯ ಇಲಾಖೆ ಲಾರಿಗಳು ಕಾಡಿನೊಳಗೆ ಪ್ರವೇಶ ಮಾಡುವುದನ್ನು ನಿಷೇಧಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.

ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಒಂದೊಮ್ಮೆ ಲಾರಿಗಳನ್ನು ಅರಣ್ಯದೊಳಗೆ ಬಿಟ್ಟರೆ ಸಂಬಂಧಪಟ್ಟ ಇಲಾಖೆ ಅರಣ್ಯ ಇಲಾಖೆಗೆ ನೋಟಿಸ್‌ ನೀಡುವಂತೆ ಆದೇಶ ನೀಡಿದರು.

ನಾಟಾ ತುಂಬಿಕೊಂಡು ಬಂದ ಲಾರಿ ರಸ್ತೆಯ ಮೇಲೆ ಸಂಚಾರ ಮಾಡುವುದರಿಂದ ರಸ್ತೆ ಗುಂಡಿ ಬೀಳುವ ಜೊತೆಗೆ ಕಸಕಡ್ಡಿಗಳು ಚರಂಡಿಯಲ್ಲಿ ತುಂಬಿ ನೀರು ರಸ್ತೆಯ ಮೇಲೆ ಹರಿದು ಡಾಂಬರು ಕಿತ್ತುಕೊಂಡು ಹೋಗಿ ರಸ್ತೆ ಹಾಳಾಗುತ್ತಿದೆ. ಆದ್ದರಿಂದ ಜೂನ್‌ನಿಂದ ಮಳೆಗಾಲ ಮುಗಿಯುವ ತನಕ ಕಾಡಿಗೆ ವಾಹನಗಳನ್ನು ಬಿಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೂ.5ರಿಂದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಮರಗಳನ್ನು ಕಡಿತಲೆ ಮಾಡಲಾಗಿದೆ. ಮರ ಕಡಿತಲೆ ಮಾಡಿದ್ದಕ್ಕೆ 10 ಪಟ್ಟು ಜಾಸ್ತಿ ಸಸಿಗಳನ್ನು ನೆಟ್ಟು ಅದನ್ನು ಪೋಷಣೆ ಮಾಡುವತ್ತ ಚಿಂತನೆ ನಡೆಸಲಾಗಿದ್ದು, ಜೂನ್‌ ತಿಂಗಳು ಪೂರ್ಣ ಸಸಿ ನೆಡಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲ ಇಲಾಖೆಯ ಅಭಿಯಂತರರು ಸಸಿ ನೆಡುವ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಗ್ರಾಮೀಣ ರಸ್ತೆ ಅಭಿವೃದ್ಧಿಗೆ 50 ಕೋಟಿ ರೂ. ಮಂಜೂರಾಗಿದೆ. ರಸ್ತೆ ಕಾಮಗಾರಿಗೆ ಸಂಬಂಧಪಟ್ಟ ಟೆಂಡರ್‌ ತಕ್ಷಣ ಕರೆದು ಕಾಮಗಾರಿ ಪ್ರಾರಂಭಿಸಿ ಎಂದು ಸೂಚನೆ ನೀಡಿದ ಶಾಸಕರು, ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಕೃಷಿ ಕುರಿತು ಅಗತ್ಯ ಮಾಹಿತಿ ನೀಡಬೇಕು. ಗೊಬ್ಬರ, ಬಿತ್ತನೆ ಬೀಜ ಸಂಗ್ರಹ ಮಾಡಿಕೊಳ್ಳುವ ಜೊತೆಗೆ ರೈತರಿಗೆ ಕಾಲ- ಕಾಲಕ್ಕೆ ಪೂರೈಕೆ ಮಾಡುವತ್ತ ಗಮನ ಹರಿಸಬೇಕು. ಜೂನ್‌ನಿಂದ ಮೂರು ತಿಂಗಳ ಕಾಲ ನದಿ- ಕೆರೆಕಟ್ಟೆಗಳಲ್ಲಿ ಮೀನು ಹಿಡಿಯದಂತೆ ಕ್ರಮ ತೆಗೆದುಕೊಳ್ಳಿ. ಸ್ಲಂ ಬೋರ್ಡ್‌ನಿಂದ ನನಗೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಮನೆ ನಿರ್ಮಾಣ ಕಾಮಗಾರಿ ಈತನಕ ಮುಗಿದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು.

ಶಾಲೆ- ಅಂಗನವಾಡಿಗಳು ಪ್ರಾರಂಭ ಗೊಂಡಿವೆ. ಶಾಲಾ ಅಂಗನವಾಡಿ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿರಿಸಿಕೊಳ್ಳುವತ್ತ ಗಮನ ಹರಿಸಬೇಕು. ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಶಾಲೆಯ ಸುತ್ತಮುತ್ತಲಿನ ಗಿಡಗಂಟಿಗಳನ್ನು ತೆರವುಗೊಳಿಸಿ. ವಿದ್ಯಾರ್ಥಿ ನಿಲಯ ನಿರ್ವಹಣೆ ಬಗ್ಗೆ ಸಹ ಹೆಚ್ಚಿನ ಗಮನ ಹರಿಸಿ. ಶಾಲಾ- ಕಾಲೇಜು ಅಕ್ಕಪಕ್ಕ ದ್ವಿಚಕ್ರ ವಾಹನದಲ್ಲಿ ಮೂರರಿಂದ ನಾಲ್ಕು ಜನರು ಅತಿವೇಗವಾಗಿ ಸಂಚರಿಸುತ್ತಿದ್ದಾರೆ. ಕಾಲೇಜು ಆಸುಪಾಸಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ, ಸವಾರರು ಪರವಾನಗಿ ಹೊಂದಿದ್ದಾರೋ ಎಂದು ಪರಿಶೀಲನೆ ನಡೆಸಿ. ಇಲ್ಲವಾದಲ್ಲಿ ದ್ವಿಚಕ್ರ ವಾಹನ ಸವಾರರು ಅಪ್ರಾಪ್ತರಾಗಿದ್ದರೆ ಅವರ ಪೋಷಕರಿಗೆ ನೋಟಿಸ್‌ ಕೊಡಿ ಎಂದು ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದರು.

ಸಭೆಯಲ್ಲಿ ತಾಪಂ ಇಒ ಪುಷ್ಪಾ ಎಂ. ಕಮ್ಮಾರ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.