ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು


Team Udayavani, May 18, 2022, 4:01 PM IST

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಅರಸೀಕೆರೆ: ನಗರದ ಬಹುತೇಕ ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವಯೋವೃದ್ಧರು, ಮಹಿಳೆಯರು, ಮಕ್ಕಳು ಹಾಗೂ ಜಾನುವಾರುಗಳು ನಗರದ ರಸ್ತೆಗಳಲ್ಲಿ ಭಯ ಮುಕ್ತವಾಗಿ ಓಡಾಡಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ನಗರಸಭೆ ಆಡಳಿತ ಸಾರ್ವಜನಿಕರ ಈ ಸಮಸ್ಯೆಗೆ ಅತ್ಯಂತ ತ್ವರಿತವಾಗಿ ಪರಿಹಾರ ನೀಡಲು ಮುಂದಾಗಬೇಕಾಗಿದೆ.

ನಗರದ ಬಹುತೇಕ ವಾರ್ಡುಗಳಲ್ಲಿ 10 ರಿಂದ20ಕ್ಕೂ ಹೆಚ್ಚಿನ ಬೀದಿ ನಾಯಿಗಳು ಗುಂಪು-ಗುಂಪಾಗಿ ತಿರುಗಾಡುತ್ತಿದ್ದು, ರಸ್ತೆಗಳಲ್ಲಿ ವಯೋವೃದ್ಧರು, ಮಹಿಳೆಯರು ಹಾಗೂಮಕ್ಕಳು ತಿರುಗಾಡುವ ಸಂದರ್ಭದಲ್ಲಿಬೀದಿನಾಯಿಗಳ ಗುಂಪು ದಿಢೀರ್‌ ದಾಳಿಮಾಡಲು ಮುಂದಾಗುತ್ತಿರುವುದು ಜನರಲ್ಲಿ ಭಯದ ವಾತವರಣ ನಿರ್ಮಿಸಿದೆ. ಹಾಡುಹಗಲೇವಿದ್ಯಾನಗರದ ಬಡಾವಣೆಗಳಲ್ಲಿ ನಾಯಿಗಳ ಹಿಂಡು ಮನೆ ಮುಂದಿದ್ದ ಮೇಕೆ ಮೇಲೆ ದಾಳಿ ಮಾಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ನಾಯಿಗಳ ದಿಢೀರ್‌ ದಾಳಿ: ಬೀದಿ ನಾಯಿಗಳು ರಕ್ತ ಮತ್ತು ಮಾಂಸದ ರುಚಿ ಕಂಡಿ ರುವ ಕಾರಣ ವಯೋವೃದ್ಧರು ಮತ್ತು ಮಕ್ಕಳು ಹಾಗೂ ಮಹಿಳೆಯರ ಮೇಲೆ ದಾಳಿ ನಡೆಸಲು ಮುಂದಾಗುತ್ತಿವೆ. ಇಂತಹ ಗಂಭೀರ ಸಮಸ್ಯೆ ಕೇವಲಒಂದು ವಾರ್ಡ್‌ಗೆ ಮಾತ್ರ ಸೀಮಿತವಾಗದೆನಗರದ ಬಹುತೇಕ ವಾರ್ಡ್‌ಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಇದೆ.

ಸಮಸ್ಯೆ ಪರಿಹರಿಸಿ: ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಧಿಕಾರಿಗಳು ಹೆಚ್ಚಿನಜವಾಬ್ದಾರಿ ವಹಿಸುವ ಮೂಲಕ ಸೂಕ್ತಕ್ರಮಕೈಗೊಂಡು ಬೀದಿ ನಾಯಿಗಳ ಹಾವಳಿಗೆಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಾಣಿದಯಾ ಸಂಘದ ಪದಾಧಿಕಾರಿ ಗಳೊಂದಿಗೆ ಮಾತುಕತೆ ನಡೆಸುವ ಮೂಲಕ ಇಂತಹ ಗಂಭೀರಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಲು ಮುಂದಾಗಬೇಕಾಗಿದೆ. ತಪ್ಪಿದಲ್ಲಿ ಜನರ ಪ್ರತಿರೋಧ ಎದುರಿಸಬೇಕಾಗುತ್ತದೆ.

ನಗರಸಭೆ ಅಧ್ಯಕ್ಷರು ಏನಂತಾರೆ?: ನಗರಸಭೆಆಡಳಿತಕ್ಕೆ ಬೀದಿ ನಾಯಿಗಳ ಹಾವಳಿ ದಿನದಿಂದದಿನಕ್ಕೆ ತಲೆನೋವಾಗಿ ಪರಿಣಮಿಸಿದೆ. ಬೀದಿನಾಯಿಗಳನ್ನು ಸಾಯಿಸಲು ಅಥವಾ ಸ್ಥಳಾಂತರಕ್ಕೆಕಾನೂನಿನಲ್ಲಿ ಅವಕಾ ಶವಿಲ್ಲ. ಹಾಗಾಗಿ ಈ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆಗೆ ಮೂರುಬಾರಿ ಟೆಂಡರ್‌ ಕರೆಯಲಾಗಿದೆ. ಆದರೆ ಯಾರೂಟೆಂಡರ್‌ನಲ್ಲಿ ಭಾಗವಹಿಸದ ಕಾರಣ ಮೇಲಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಅವರ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸಮಸ್ಯೆ ಪರಿಹಾರ ಮುಖ್ಯ: ನಗರಸಭೆ ಆಡಳಿತ ಬೀದಿ ನಾಯಿಗಳನ್ನು ನಿಯಂತ್ರಿಸಲು ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಬೀದಿನಾಯಿಗಳಿಗೆ ಮಾಡಿಸುವುದು ಅನಿವಾರ್ಯ ಮಾರ್ಗವಾಗಿದೆ. ಆದರೆ ನಾವು ಟೆಂಡರ್‌ಕರೆದಿದ್ದೇವೆ, ಯಾರು ಟೆಂಡರ್‌ ಹಾಕಿಲ್ಲ ಎನ್ನುವ ನಗರಸಭೆ ಆಡಳಿತದ ಉತ್ತರದಿಂದ ಸಮಸ್ಯೆಗೆಸೂಕ್ತ ಪರಿಹಾರ ನೀಡಲು ಸಾಧ್ಯವಿಲ್ಲ,ಪರ್ಯಾಯ ಮಾರ್ಗದ ಬಗ್ಗೆ ಅತ್ಯಂತತ್ವರಿತವಾಗಿ ಕ್ರಮಕೈಗೊಳ್ಳುವ ಮೂಲಕ ಸಮಸ್ಯೆಗೆ ಇತಿಶ್ರೀ ಹೇಳಬೇಕೆಂದು ರೈತ ಸಂಘದ ಮುಖಂಡ ಪ್ರಸನ್ನ ಕುಮಾರ್‌ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.