ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ.. ಎಂಬಂತಾಗಿದೆ ಶಿರಗುಂಪಿ ಗ್ರಾ.ಪಂ. ಉದ್ಯೋಗ ಖಾತ್ರಿ ಯೋಜನೆ
Team Udayavani, May 18, 2022, 4:49 PM IST
ಕುಷ್ಟಗಿ : ಕುಷ್ಟಗಿ ತಾಲೂಕಿನ ಶಿರಗುಂಪಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಾಲಾದಲ್ಲಿ ಮುಳ್ಳುಗಂಟಿ ತೆರವು, ಹೂಳೆತ್ತುವ ಕೆಲಸದಲ್ಲಿ ಕೂಲಿಕಾರರಿಗೆ ಕುಡಿಯಲು ನೀರು, ನೆರಳಿನ ವ್ಯವಸ್ಥೆ ಇಲ್ಲದೇ ಎರಡು ದಿನ ಕೆಲಸ ನಡೆದಿದೆ ಎಂದು ಕರ್ನಾಟಕ ಪ್ರಾಂತ ಕೂಲಿಕಾರರ ಸಂಘದ ಅದ್ಯಕ್ಷ ಆರ್.ಕೆ.ದೇಸಾಯಿ ದೂರಿದ್ದಾರೆ.
ಶಿರಗುಂಪಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಉದ್ಯೋಗ ಖಾತ್ರಿ ಯೋಜನೆ ಕೆಲಸ ಆರಂಭಿಸಲಾಗಿದೆ. ಈ ಕೆಲಸ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವಂತಾಗಿದೆ. 150 ಕ್ಕೂ ಅಧಿಕ ಕೂಲಿಕಾರರು ಇರುವ ಈ ಕೆಲಸದಲ್ಲಿ ಸರಿಯಾದ ಅಳತೆ ನೀಡದೇ ಕೆಲಸ ನಡೆಯುತ್ತಿದ್ದು ಸರ್ಕಾರದ ಹಣ ಲೂಟಿ ಮಾಡುವ ಸಾಧ್ಯತೆ ಇದೆ. ಈ ಕೆಲಸದಲ್ಲಿ ಯಾವುದೇ ಉದ್ಯೋಗ ಖಾತ್ರಿ ನಿಯಮ ಅನುಸರಿಸದೇ ಬೇಕಾಬಿಟ್ಟಿ ಕೆಲಸ ಮಾಡಲಾಗುತ್ತಿದೆ, ಸಿಇಓ ಗಮನಿಸಿ ಕ್ರಮ ಕೈಗೊಳ್ಳಬೇಕೆಂದು ಆರ್.ಕೆ.ದೇಸಾಯಿ ಒತ್ತಾಯಿಸಿದ್ದಾರೆ.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ಆಗುತ್ತಿರುವ ಮೋಸ ಖಂಡಿಸಿ ಕೆಲವೇ ದಿನಗಳಲ್ಲಿ ಜಿಲ್ಲೆಯ ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಕ್ಕೆ ಕೂಲಿಕಾರರು ಪಾದಯಾತ್ರೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.
ಇದನ್ನೂ ಓದಿ : ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಅಪ್ಪಾಜಿ ಕ್ಯಾಂಟೀನ್ ಗೆ ನಿಖಿಲ್ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್