ಬಂಟ್ವಾಳ ಪುರಸಭೆ ಸಾಮಾನ್ಯ ಸಭೆ ಜಾರಿಯಾಗದ ನಿರ್ಣಯ: ಆಕ್ರೋಶ


Team Udayavani, May 19, 2022, 12:12 PM IST

outrage

ಬಂಟ್ವಾಳ: ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಸೇರಿದಂತೆ ಯಾವುದೇ ಕೆಲಸಗಳು ಸರಿಯಾದ ಸಮಯಕ್ಕೆ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪುರಸಭಾ ಸದಸ್ಯರು ಯಾರ್ಯಾರು ಯಾವ ಯಾವ ಕೆಲಸ ನಿರ್ವಹಿಸುತ್ತಾರೆ ಎಂಬ ಪಟ್ಟಿ ನೀಡುವಂತೆ ಆಗ್ರಹಿಸಿದರು.

ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್‌ ಶರೀಫ್‌ ಅಧ್ಯಕ್ಷತೆಯಲ್ಲಿ ಪುರಸಭೆಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಗಂಗಾಧರ ಪೂಜಾರಿ ವಿಷಯ ಪ್ರಸ್ತಾವಿಸಿ, ಪುರಸಭಾ ಪಂಪುಹೌಸ್‌ಗೆ ಸಿಬಂದಿ ನೇಮಕಕ್ಕೆ ಕಳೆದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಅದು ಏನಾಗಿದೆ ಎಂದರು. ಇನ್‌ವರ್ಟರ್‌ ಅಳವಡಿಕೆಯ ನಿರ್ಣಯವೂ ಪ್ರಸ್ತಾವವಾಯಿತು. ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದೇ ಇದ್ದಾಗ ಸದಸ್ಯರೆಲ್ಲರೂ ಆಕ್ರೋಶ ವ್ಯಕ್ತಪಡಿಸಿದರು. ಎಂಜಿನಿಯರ್‌ ಡೊಮಿನಿಕ್‌ ಡಿ’ಮೆಲ್ಲೊ ಮಾತನಾಡಿ, ತನಗೆ ಹಲವು ಜವಾಬ್ದಾರಿಗಳನ್ನು ನೀಡಿದ ಪರಿಣಾಮ ಯಾವುದೇ ಕೆಲಸಗಳನ್ನು ಮಾಡಲು ಆಗುತ್ತಿಲ್ಲ ಎಂದರು. ಇಲ್ಲಿ ಯಾವುದೇ ಕೆಲಸಕ್ಕೆ ಸಮರ್ಪಕ ಸಿಬಂದಿಯಿಲ್ಲ ಎಂದು ಸಿಬಂದಿ ರಝಾಕ್‌ ಹೇಳಿದರು. ನಿರ್ಣಯಗಳು ಅನುಷ್ಠಾನ ಆಗದೇ ಇರುವ ಕುರಿತು ಸದಸ್ಯ ಎ.ಗೋವಿಂದ ಪ್ರಭು ಅಧ್ಯಕ್ಷರ ವಿರುದ್ಧ ಆರೋಪಿಸಿದಾಗ, ಅಧಿಕಾರಿಗಳು ಯಾಕೆ ಇರುವುದು, ಕೇವಲ ಸಂಬಳ ತೆಗೆದುಕೊಳ್ಳುವುದಕ್ಕಾ ಎಂದು ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದರು.

ನಗರ ವ್ಯಾಪ್ತಿಯಲ್ಲಿ ಕಸ ಹಾಕುವುದನ್ನು ತಡೆಯಲು ಅಳವಡಿಸಿರುವ ಸಿಸಿ ಕೆಮರಾ ಕಾರ್ಯಾಚರಿಸದ ಕುರಿತು ಸದಸ್ಯ ಗೋವಿಂದ ಪ್ರಭು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಶೀಘ್ರ ಆ್ಯಕ್ಟಿವೇಟ್‌ ಆಗುತ್ತದೆ ಎಂದು ಎಂಜಿನಿಯರ್‌ ಉತ್ತರಿಸಿದರು.

ಬಿ.ಸಿ.ರೋಡ್‌ನ‌ ಕಟ್ಟಡವೊಂದರ ಪ್ರವೇಶ ಪತ್ರ ರದ್ದು ಪಡಿಸುವ ರಾಜ್ಯ ಅಗ್ನಿಶಾಮಕ ನಿರ್ದೇಶನಾಲಯದ ಮಹಾನಿರ್ದೇಶಕರ ಪತ್ರದ ಕುರಿತು ಸದಸ್ಯ ಗೋವಿಂದ ಪ್ರಭು ಪ್ರಸ್ತಾವಿಸಿ ಯಾವ ರೀತಿ ವ್ಯವಹಾರ ನಡೆದಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದಾಗ ಅಧ್ಯಕ್ಷರು ಹಾಗೂ ಅವರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಬಿ.ಸಿ.ರೋಡ್‌ ಸರ್ಕಲ್‌ನಲ್ಲಿ ಎಲ್ಲ ರಸ್ತೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಬ್ಯಾನರ್‌ ಅಳವಡಿಸಿರುವ ವಿರುದ್ಧ ಕ್ರಮಜರಗಿಸಬೇಕು ಎಂದು ಸಭೆಯಲ್ಲಿ ಆಗ್ರಹ ಕೇಳಿಬಂತು. ಪುರಸಭೆಗೆ ಕಾವಲುಗಾರ ನೇಮಕದ ಕುರಿತು ನಿರ್ಣಯ ಆಗಿದ್ದರೂ, ಅನುಷ್ಠಾನ ಆಗದೇ ಇರುವುದಕ್ಕೆ ಸದಸ್ಯ ವಾಸು ಪೂಜಾರಿ ಅವರು ಆಕ್ಷೇಪ ವ್ಯಕ್ತಪಡಿಸಿದರು. ಪಂಪ್‌ ಹೌಸ್‌ ನಿರ್ವಹಣೆ ಇಲ್ಲದಿರುವ ಕುರಿತು ಸದಸ್ಯ ಜನಾರ್ದನ ಚಂಡ್ತಿಮಾರ್‌ ಸಭೆಗೆ ತಿಳಿಸಿದರು. ಪುರಸಭೆಯ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸಂಸ್ಥೆಯೊಂದರ ಅಧಿಕಾರಿಗಳು ಸಭೆಗೆ ಬಂದು ಕೂತಿರುವ ಕುರಿತು ಗೋವಿಂದ ಪ್ರಭು ಆಕ್ಷೇಪಿಸಿ, ಈ ಹಿಂದೆ ರಾಮಕೃಷ್ಣ ಮಿಷನ್‌ ನವರು ಬಂದಾಗ ಗಣನೆಗೆ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಸಂಚಾರ ಸಮಸ್ಯೆ ಪ್ರಸ್ತಾವ

ಮೆಲ್ಕಾರ್‌ ಭಾಗದಲ್ಲಿ ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ಟ್ರಾಫಿಕ್‌ ಸಿಬಂದಿಯನ್ನು ನೇಮಿಸುವಂತೆ ಸದಸ್ಯ ಅಬೂಬಕ್ಕರ್‌ ಸಿದ್ದಿಕ್‌ ಆಗ್ರಹಿಸಿದರು. ಬಂಟ್ವಾಳ ಪೇಟೆಯಲ್ಲಿ ರಸ್ತೆಯಲ್ಲೇ ವಾಹನ ನಿಲ್ಲಿಸಿ ಸಮಸ್ಯೆಯಾಗುತ್ತಿದೆ ಎಂದು ಸದಸ್ಯ ಗೋವಿಂದ ಪ್ರಭು ಹೇಳಿದರು. ಜಕ್ರಿಬೆಟ್ಟು ಭಾಗದಲ್ಲಿ ಹೆಚ್ಚಿನ ಅಪಘಾತಗಳು ಉಂಟಾಗುತ್ತಿದೆ ಎಂದು ಸದಸ್ಯ ಜರ್ನಾರ್ದನ ಚಂಡ್ತಿಮಾರ್‌ ಪ್ರಸ್ತಾವಿಸಿದರು. ಟ್ರಾಫಿಕ್‌ ಜಾಮ್‌ ಹಾಗೂ ವಾಹನಗಳ ಪಾರ್ಕಿಂಗ್‌ ಸಮಸ್ಯೆಗಳ ಕುರಿತು ಸದಸ್ಯರ ದೂರುಗಳನ್ನು ದಾಖಲಿಸಿಕೊಂಡ ಸಂಚಾರ ಪೊಲೀಸ್‌ ಠಾಣೆಯ ವಿಜಯ್‌ ಗರಿಷ್ಠ ಪ್ರಮಾಣದಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.