ಬಯಲು ಬಹಿರ್ದೆಸೆ ಮುಕ್ತಿಗೆ ಜಾಗೃತಿ ಮೂಡಿಸಿ

ಶುಚಿತ್ವಕ್ಕೆ ಸಂಬಂಧಿಸಿದ ಕಾನೂನು ಕಾರ್ಯ ರೂಪಕ್ಕೆ ತರುವುದು ಪಿಡಿಒ ಹೊಣೆ  

Team Udayavani, May 19, 2022, 2:07 PM IST

9

ಕೊಪ್ಪಳ: ಬಯಲು ಬಹಿರ್ದೆಸೆ ಮುಕ್ತ ಗ್ರಾಮವನ್ನಾಗಿಸಲು ಪಿಡಿಒಗಳು ತಮ್ಮ ಅಧಿಕಾರ ಬಳಸಿ, ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶರಾದ ದೇವೇಂದ್ರ ಪಂಡಿತ್‌ ಹೇಳಿದರು.

ಜಿಪಂ, ಸ್ವತ್ಛ ಭಾರತ ಮಿಷನ್‌ (ಗ್ರಾಮೀಣ) ಯೋಜನೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲೆಯ ಇಒ, ಪಿಡಿಒ, ಕಾರ್ಯದರ್ಶಿಗಳಿಗೆ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಣೆ ಕುರಿತು ಕಾನೂನು ಸಲಹೆಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪಂಚಾಯತ್‌ ರಾಜ್‌ ಕಾಯ್ದೆ 1993ರಲ್ಲಿ ಪಿಡಿಒಗಳಿಗೆ ಗ್ರಾಮಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಅಧಿಕಾರಗಳನ್ನು ನೀಡಲಾಗಿದೆ. ಕಾಯ್ದೆಯನ್ನು ಸರಿಯಾಗಿ ಓದಿ, ಅರ್ಥೈಸಿಕೊಂಡು ಅದರಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತಂದರೆ ಗ್ರಾಮಗಳ ಅಭಿವೃದ್ಧಿ ಕಷ್ಟವೇನಲ್ಲ. ಅದರಂತೆ ಗ್ರಾಮಗಳ ಸ್ವಚ್ಛತೆ, ಸಮುದಾಯಿಕ ಹಾಗೂ ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮುಂತಾದ ಶುಚಿತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಾಂದರ್ಭಿಕವಾಗಿ ಕಾರ್ಯರೂಪಕ್ಕೆ ತರುವುದು ಪಿಡಿಒಗಳ ಜವಾಬ್ದಾರಿಯಾಗಿದೆ ಎಂದರು.

ಗ್ರಾಮ ಸಭೆ, ಸ್ಥಾಯಿ ಸಮಿತಿಗಳ ರಚನೆ ಇನ್ನೂ ಹಲವಾರು ವಿಷಯಗಳನ್ನು ಕಾಯ್ದೆಯಲ್ಲಿ ತಿಳಿಯಬಹುದು. ಯಾವುದೇ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಮಲ ವಿಸರ್ಜನೆ ಮಾಡಿದರೆ ದಂಡ ಹಾಕಬಹುದು. ಗ್ರಾಮದಲ್ಲಿ ಮುಖ್ಯವಾಗಿ ಸ್ವಚ್ಛತೆ, ವೈಯಕ್ತಿಕ ಶೌಚಾಲಯ ಮತ್ತು ಸಮುದಾಯ ಶೌಚಾಲಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಜನರ ವರ್ತನೆಯಲ್ಲಿ ಬದಲಾವಣೆ ತರಬೇಕು. ಸಮುದಾಯ ಶೌಚಾಲಯಗಳಲ್ಲಿ ಸ್ತ್ರೀ-ಪುರುಷರಿಗೆ ಬೇರೆ ಬೇರೆ ಕಡೆ ಶೌಚಾಲಯ ನಿರ್ಮಾಣ ಮಾಡಬೇಕೆಂದರು.

ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌ ಮಾತನಾಡಿ, ಹಿಂದಿನ ವರ್ಷ ಚಿಲುಮೆ ಕಾರ್ಯಕ್ರಮದ ಮೂಲಕ ಶೌಚಾಲಯಗಳ ಬಳಕೆ ಕುರಿತು ಅನೇಕ ಜಾಗೃತಿ ಕಾರ್ಯಕ್ರಮ ಮಾಡಿದ್ದೇವೆ. ಹಾಗೇ ಮಹಿಳೆಯರ ವೈಯಕ್ತಿಕ ಸ್ವತ್ಛತೆ ಬಗ್ಗೆ ಜಾಗೃತಿ ಮೂಡಿಸಲು ಹೆಚ್ಚಿನ ಗಮನ ಹರಿಸಿದ್ದೇವೆ. ಘನ ಮತ್ತು ಒಣ ತ್ಯಾಜ್ಯ, ಹಸಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಾಣ ಮಾಡಿದ್ದೇವೆ. ಪ್ರತಿ ಗ್ರಾಪಂನಲ್ಲಿ ಪ್ರತಿದಿನ ರಸ್ತೆ, ಸಾರ್ವಜನಿಕ ಸ್ಥಳ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಗ್ರಾಮದ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಇದರಿಂದ ಡೆಂಘೀ, ಚಿಕನ್‌ಗುನ್ಯಾ ದಂತಹ ಕಾಯಿಲೆಗಳಿಂದ ರಕ್ಷಿಸಿಕೊಳ್ಳಬಹುದು. ಒಡಿಎಫ್‌ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದರು.

ವಕೀಲ ಹನುಮಂತರಾಯ ಮಾತನಾಡಿದರು. ಜಿಪಂ ಉಪಕಾರ್ಯದರ್ಶಿ ಶರಣ ಬಸವರಾಜ, ಜಿಲ್ಲೆಯ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.