ಕಲಬುರಗಿಯಲ್ಲಿ ರಸ್ತೆ ಒತ್ತುವರಿ ಕಾರ್ಯಾಚರಣೆ: ಮಾತಿನ ಚಕಮಕಿ
Team Udayavani, May 19, 2022, 2:48 PM IST
ಕಲಬುರಗಿ: ನಗರದಲ್ಲಿ ಇತ್ತೀಚೆಗೆ ರಸ್ತೆ, ಫುಟಪಾತ್ ಅತಿಕ್ರಮಣ ಹಾಗೂ ಒತ್ತುವರಿ ಹೆಚ್ಚಾಗುತ್ತಿರುವುದನ್ನು ಮನಗಂಡಿರುವ ಪಾಲಿಕೆ ಅಧಿಕಾರಿಗಳು ಈಗ ತೆರವಿಗೆ ಮುಂದಾಗಿದ್ದಾರೆ.
ನಗರದ ರಾಮಮಂದಿರ ವೃತ್ತದ ಬಳಿ ರಸ್ತೆ ಅತಿಕ್ರಮಿಸಿದ್ದ ಗೂಡಂಗಡಿಗಳನ್ನು ಬುಲ್ಡೋಜರ್ದಿಂದ ತೆರವುಗೊಳಿಸಲಾಯಿತು.
ಈ ಮೊದಲು ನೊಟೀಸ್ ನೀಡಿ ತೆರವುಗೊಳಿಸಲಾಗಿದ್ದರೂ ಮತ್ತೆ ಗೂಡಂಗಡಿ ಹಾಕಿದ್ದರಿಂದ ಪಾಲಿಕೆ ಅಧಿಕಾರಿಗಳು ಪೊಲೀಸ್ ಸಮ್ಮುಖದಲ್ಲಿ ತೆರವುಗೊಳಿಸಿದರು.
ಈ ಸಂದರ್ಭದಲ್ಲಿ ವ್ಯಾಪಾರಿಗಳು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ವ್ಯಾಪಾರಿಗಳು ಇನ್ನೊಂದಿಷ್ಟು ಸಮಯ ಕೊಡಬೇಕಿತ್ತು ಎಂದು ಹೇಳಿದರು.
ಈ ಹಿಂದೆ ತೆರವುಗೊಳಿಸಲಾಗಿ ಮತ್ತೆ ಒಳಚರಂಡಿ ಹಾಗೂ ರಸ್ತೆ ಮೇಲೆ ಗೂಡಂಗಡಿ ಹಾಕಿರುವುದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಮಯ ನೀಡುವ ಪ್ರಮೆಯ ಎದುರಾಗುವುದಿಲ್ಲ ಎಂದು ಪಾಲಿಕೆ ಅಧಿಕಾರಿಗಳು ಸಮಜಾಯಿಷಿ ನೀಡಿದರು.
ಕಾರ್ಯಾಚರಣೆ ಮುಂದುವರಿಕೆ: ರಾಮ ಮಂದಿರವಲ್ಲದೇ ಇತರ ರಸ್ತೆಗಳಲ್ಲೂ ರಸ್ತೆ ಹಾಗೂ ಒಳಚರಂಡಿ ಅತಿಕ್ರಮಣ ಆಗಿರುವ ತೆರವು ಕಾರ್ಯಾಚರಣೆ ಪಾಲಿಕೆ ಆಯುಕ್ತರ ನಿರ್ದೇಶನ ಮೇರೆಗೆ ಕೈಗೊಳ್ಳಲಾಗಿದೆ. ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಇಂಜಿನಿಯರುಗಳಾದ ಸುಧೀರ ಮೇತ್ರೆ ಹಾಗೂ ಪ್ರಭಾಕರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ