ಇಲ್ಲದ ಗ್ರಂಥಾಲಯಕ್ಕೆ ವಾರ್ಷಿಕ 10 ಲಕ್ಷ ರೂ. ತೆರಿಗೆ ಪಾವತಿ!

ಕೂಡಲೇ ಕಾಂಕ್ರಿಟ್‌ ರಸ್ತೆ ಸ್ಥಗಿತಗೊಳಿಸಿ ಡಾಂಬರೀಕರಣಕ್ಕೆ ಮುಂದಾಗಬೇಕು

Team Udayavani, May 19, 2022, 5:06 PM IST

ಇಲ್ಲದ ಗ್ರಂಥಾಲಯಕ್ಕೆ ವಾರ್ಷಿಕ 10 ಲಕ್ಷ ರೂ. ತೆರಿಗೆ ಪಾವತಿ!

ವಾಡಿ: ಕಳೆದ 20 ವರ್ಷಗಳಿಂದ ಪುರಸಭೆ ಆಡಳಿತ ಸಾರ್ವಜನಿಕರಿಗೆ ಗ್ರಂಥಾಲಯ ಸೌಲಭ್ಯ ಒದಗಿಸದೇ ಸರ್ಕಾರಕ್ಕೆ ನಿರಂತರವಾಗಿ ವಾರ್ಷಿಕ 10 ಲಕ್ಷ ರೂ. ತೆರಿಗೆ ಪಾವತಿಸುತ್ತಿದೆ. ಪ್ರಸಕ್ತ ಸಾಲಿನಲ್ಲೂ ಹತ್ತು ಲಕ್ಷ ರೂ. ತೆರಿಗೆ ಪಾವತಿಗಾಗಿ ಪುರಸಭೆ ನಿಧಿಯಲ್ಲಿ ಹಣ ತೆಗೆದಿರಿಸಲಾಗಿದೆ.

ಬುಧವಾರ ಪುರಸಭೆಯಲ್ಲಿ ನಡೆದ 2022/ 23ನೇ ಸಾಲಿನ ಪುರಸಭೆ ಅನುದಾನ 283.15 ಲಕ್ಷ ರೂ., ಎಸ್‌ಎಫ್‌ಸಿ ಅನುದಾನ 99 ಲಕ್ಷ ರೂ. ಹಾಗೂ 15ನೇ ಹಣಕಾಸಿನ 252 ಲಕ್ಷ ರೂ. ಸೇರಿದಂತೆ ಒಟ್ಟು 6.34 ಕೋಟಿ ರೂ. ಅನುದಾನಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸುವ ಸಭೆಯಲ್ಲಿ ಗ್ರಂಥಾಲಯ ತೆರಿಗೆ ಪಾವತಿ ಚರ್ಚೆಗೆ ಬಂದು ಬಿಜೆಪಿ ಸದಸ್ಯರ ಆಕ್ರೋಶ ಕಾರಣವಾಯಿತು.

ಗ್ರಂಥಾಲಯವೇ ಇಲ್ಲ ತೆರಿಗೆ ಏಕೆ?: ಸರ್ಕಾರಕ್ಕೆ ತೆರಿಗೆ ಕೊಡುತ್ತೀರಿ ಎಂದಾದರೇ ಗ್ರಂಥಾಲಯ ಸೌಲಭ್ಯ ಏಕಿಲ್ಲ ಎಂದು ಬಿಜೆಪಿ ಸದಸ್ಯ, ಪ್ರತಿಪಕ್ಷದ ನಾಯಕ ಭೀಮಶಾ ಜಿರೊಳ್ಳಿ, ವೀರಣ್ಣ ಯಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗ್ರಂಥಾಲಯ ಇರಲಿ ಬಿಡಲಿ ಪ್ರತಿವರ್ಷ  ಸರ್ಕಾರಕ್ಕೆ ತೆರಿಗೆ ಕಟ್ಟಲೇಬೇಕು ಎಂದು ಮುಖ್ಯಾಧಿಕಾರಿ ಕಾಶೀನಾಥ ಧನ್ನಿ ಉತ್ತರಿಸಿ ಪೇಚಿಗೆ ಸಿಲುಕಿದರು.

ಕುಡಿಯುವ ನೀರಿನ ನಿರ್ವಹಣೆಗೆ ಪ್ರತಿವರ್ಷ ಹತ್ತು ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದೆ. ಆದರೂ ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ನೀರು ಶುದ್ಧೀಕರಣ ಘಟಕದಲ್ಲಿ ಬ್ಲೀಚಿಂಗ್‌ ಪೌಡರ್‌, ಪಿಒಸಿ ಪೌಡರ್‌ ಮತ್ತು ಆಲಂ ಸೇರಿದಂತೆ ಇತರ ಬಳಕೆ ದಾಸ್ತಾನು ಖರೀದಿಸದೆ ಹಣ ಲೂಟಿ ಮಾಡಲಾಗುತ್ತಿದೆ. ನೀರಿನಲ್ಲಿ ಮಿಶ್ರಣ ಮಾಡುವ ರಸಾಯನಿಕ ಬಳಕೆ ಕುರಿತು ಸಿಬ್ಬಂದಿಗೆ ತರಬೇತಿಯಿಲ್ಲ. ಕಲುಷಿತ ನೀರು ಕುಡಿದು ಜನರಿಗೆ ತೊಂದರೆಯಾದರೆ ಪುರಸಭೆಯೇ
ಹೊಣೆ ಎಂದು ಬಿಜೆಪಿಯ ಕಿಶನ್‌ ಜಧವ, ವೀರಣ್ಣ ಯಾರಿ ಎಚ್ಚರಿಕೆ ನೀಡಿದರು. ಇದೇ ವೇಳೆ ಜೆಇ ಅಶೋಕ ಪುಟ್‌ಪಾಕ್‌ ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ವಾಗ್ವಾದ ನಡೆಯಿತು.

ಮುಖ್ಯರಸ್ತೆ ಅಭಿವೃದ್ಧಿ ಅವೈಜ್ಞಾನಿಕ: ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ ಮುಖ್ಯ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಕೆಳಗಡೆ ಉತ್ತಮ ಸಿಸಿ ರಸ್ತೆಯಿದ್ದರೂ ಮತ್ತಷ್ಟು ಎತ್ತರದ ಸಿಸಿ ರಸ್ತೆ ನಿರ್ಮಿಸುತ್ತಿರುವುದು ಯಾವ ಕಾರಣಕ್ಕಾಗಿ ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದರು. ಅಭಿವೃದ್ಧಿ ಹೆಸರಿನಲ್ಲಿ ಕೋಟಿಗಟ್ಟಲೇ ಹಣ ಲಪಟಾಯಿಸುವ ಹುನ್ನಾರ ಅಡಗಿದೆ. ಕೂಡಲೇ ಕಾಂಕ್ರಿಟ್‌ ರಸ್ತೆ ಸ್ಥಗಿತಗೊಳಿಸಿ ಡಾಂಬರೀಕರಣಕ್ಕೆ ಮುಂದಾಗಬೇಕು. ರಸ್ತೆಯುದ್ದಕ್ಕೂ ಹಾಕಲಾಗಿರುವ ಜಲ್ಲಿಕಲ್ಲು, ಮರಳಿನ ರಾಶಿ ಸ್ಥಳಾಂತರಿಸಬೇಕು. ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಾಧಿಕಾರಿಯನ್ನು ಆಗ್ರಹಿಸಿದರು.

ಪಟ್ಟಣಕ್ಕೆ ಮಂಜೂರಾಗಿದ್ದ ವಿವಿಧ ವೃತ್ತಗಳ ಐದು ಮಿನಿ ಬಸ್‌ ನಿಲ್ದಾಣಗಳನ್ನು ಸ್ಥಾಪಿಸಲು ಕಾಂಗ್ರೆಸ್‌ ಕಾರ್ಯಕರ್ತರೇ ಅಡ್ಡಿಪಡಿಸಿದ್ದಾರೆ ಎಂದು ಗೊತ್ತಾಗಿದೆ. ಶಾಸಕ ಪ್ರಿಯಾಂಕ್‌ ಖರ್ಗೆ ನಾನು ಅಭಿವೃದ್ಧಿಪರ ಎನ್ನುತ್ತಾರೆ. ಆದರೆ ಪುರಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರೇ ಬಸ್‌ ನಿಲ್ದಾಣ ಅಭಿವೃದ್ಧಿ ವಿರೋ ಧಿಸಿದ್ದಾರೆ ಎಂದು ಬಿಜೆಪಿಯ ವೀರಣ್ಣ ಯಾರಿ ವ್ಯಂಗ್ಯವಾಡಿದರು.

ಪುರಸಭೆ ಅಧ್ಯಕ್ಷೆ ಝರೀನಾಬೇಗಂ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ದೇವಿಂದ್ರ ಕರದಳ್ಳಿ, ಮುಖ್ಯಾಧಿ ಕಾರಿ ಕಾಶೀನಾಥ ಧನ್ನಿ, ಸಮುದಾಯ ಸಂಘಟನಾ ಧಿಕಾರಿ ಚಂದ್ರಕಾಂತ ಪಾಟೀಲ, ಕಂದಾಯ ಅಧಿಕಾರಿ ಎ.ಪಂಕಜಾ, ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕಿ ಲತಾಮಣಿ, ಲೆಕ್ಕಾಧಿಕಾರಿ ಕೆ.ವಿರೂಪಾಕ್ಷಿ, ನೂಡಲ್‌ ಅಭಿಯಂತರ ಮನೋಜಕುಮಾರ ಹಿರೋಳಿ, ಮಲ್ಲಿಕಾರ್ಜುನ ಯಳಸಂಗಿ, ಬಸವರಾಜ ಪೂಜಾರಿ, ಕಾಂಗ್ರೆಸ್‌ನ ಮಲ್ಲಯ್ಯ ಗುತ್ತೇದಾರ, ಶರಣು ನಾಟೇಕರ, ಮಹ್ಮದ್‌ ಗೌಸ್‌, ಮೈನಾಬಾಯಿ ರಾಠೊಡ, ಸುಗಂದಾ ಜೈಗಂಗಾ, ಗುಜ್ಜಾಬಾಯಿ ಸಿಂಗೆ, ಅಫ್ಸರಾಬೇಗಂ, ಬಿಜೆಪಿಯ ಭೀಮರಾಯ ನಾಯ್ಕೋಡಿ,
ರವಿ ಜಾಧವ ಪಾಲ್ಗೊಂಡಿದ್ದರು. ವ್ಯವಸ್ಥಾಪಕ ಮಲ್ಲಿಕಾರ್ಜುನ ಹಾರಕೂಡ ಕ್ರಿಯಾಯೋಜನೆ ಮಂಡಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.