ಅರೆಹೊಳೆ ರಾಜಕಾಲುವೆ: ಶಾಶ್ವತ ತಡೆಗೋಡೆ ಮರೀಚಿಕೆ

ಹತ್ತಾರು ಎಕರೆ ಗದ್ದೆಗೆ ಕಾಲುವೆಯಿಂದ ನೀರು ನುಗ್ಗುವ ಭೀತಿ

Team Udayavani, May 20, 2022, 10:38 AM IST

barrier

ನಾವುಂದ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಎರಡನೇ ವಾರ್ಡಿನ ಅರೆಹೊಳೆ ಸಮೀಪ ಕಳೆದ 5-6 ವರ್ಷಗಳಿಂದ ಮಳೆಗಾಲದಲ್ಲಿ ರಾಜು ಕಾಲುವೆ ಒಡೆದು ಹೋಗಿ, ಕೃಷಿಗೆ ಹಾನಿಯಾಗುತ್ತಿದ್ದು, ಇಲ್ಲಿನ ರೈತರು ತಡೆಗೋಡೆಗೆ ಒತ್ತಾಯಿಸುತ್ತಿದ್ದರೂ, ಶಾಶ್ವತ ಪರಿಹಾರ ಮಾತ್ರ ಮರೀಚಿಕೆಯಾಗಿದೆ.

ಅರೆಹೊಳೆ ಮದಗ ಹಾಗೂ ಅಲ್ಲಿನ ಸುತ್ತಮುತ್ತಲಿನ ಹಾಡಿಯ ನೀರು ಈ ರಾಜಕಾಲುವೆಯಲ್ಲಿ ಹರಿದು ಬಂದು, ಸೌಪರ್ಣಿಕ ನದಿ ಸೇರಬೇಕು. ಆದರೆ ಈ ಕಾಲುವೆ ಮಣ್ಣಿನಿಂದ ನಿರ್ಮಿಸುವುದರಿಂದ ಭಾರೀ ಮಳೆಗೆ ಅಲ್ಲಲ್ಲಿ ಒಡೆದು ಹೋಗಿ ಕೃಷಿ ಭೂಮಿಗಳಿಗೆ ಗುಡ್ಡದ ಮಣ್ಣು ನುಗ್ಗಿ, ಕೃಷಿ ಚಟುವಟಿಕೆ ತುಂಬಾ ತೊಂದರೆ ಆಗುತ್ತಿದೆ.

50 ಎಕರೆಗೂ ಮಿಕ್ಕಿ ಭೂಮಿ

ಅರೆಹೊಳೆಯ ಈ ರಾಜುಕಾಲುವೆ ಒಡೆದ ಪ್ರದೇಶದಲ್ಲಿ ಸುಮಾರು 50 – 60 ಎಕರೆ ಕೃಷಿ ಭೂಮಿಯಿದ್ದು, ಇಲ್ಲಿ ಹತ್ತಾರು ಮಂದಿ ಕೃಷಿಕರು ಭತ್ತದ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ.

ಕಳೆದ 5 ವರ್ಷಗಳಿಂದಲೂ ಈ ಭಾಗದ ರೈತರು ಈ ಸಮಸ್ಯೆಯನ್ನು ಅನುಭವಿಸುತ್ತಲೇ ಇದ್ದಾರೆ. ಗುಡ್ಡದಿಂದ ಭಾರೀ ಪ್ರಮಾಣದಲ್ಲಿ ಹರಿದು ಬರುವ ನೀರು ಮಾತ್ರವಲ್ಲದೆ, ಕಸ-ಕಡ್ಡಿ, ಮಣ್ಣು, ಮರಳು ಎಲ್ಲವೂ ನಾಟಿ ಮಾಡಿದ ಗದ್ದೆಗಳಿಗೆ ಸೇರುತ್ತಿದೆ. ಇದರಿಂದ ಬೆಳೆದ ಬೆಳೆ ಅರ್ಧಕರ್ಧ ನಾಶವಾಗುತ್ತದೆ.

ಶೀಘ್ರ ತಡೆಗೋಡೆ ನಿರ್ಮಿಸಿ

ಈ ರಾಜಕಾಲುವೆಗೆ 100 ವರ್ಷಗಳ ಇತಿಹಾಸವಿದೆ. ಹಿಂದೆ ಗುಡ್ಡದಿಂದ ಹರಿದು ಬರುವ ನೀರಿನ ಪ್ರಮಾಣ ಅಷ್ಟೊಂದು ಇರಲಿಲ್ಲ. ಹಾಗಾಗಿ ಸಮಸ್ಯೆ ಯಾಗುತ್ತಿರಲಿಲ್ಲ. ಈಗ ಅಂದರೆ ಕಳೆದ 5 ವರ್ಷಗಳಿಂದ ನೀರಿನ ಹರಿವು ಹೆಚ್ಚಿದ್ದು, ಮಣ್ಣಿನಿಂದ ನಿರ್ಮಿಸುವ ತಡೆಗೋಡೆ ಭಾರೀ ಮಳೆ ಬಂದಾಗ ಒಡೆದು ಹೋಗುತ್ತದೆ. ಅದಕ್ಕಾಗಿ ಶಾಶ್ವತ ಅಂದರೆ ಕಲ್ಲುಗಳನ್ನು ಕಟ್ಟಿ, ಸಿಮೆಂಟ್‌ (ರಿವಿಟ್‌ಮೆಂಟ್‌) ಹಾಕಿ ತಡೆಗೋಡೆ ನಿರ್ಮಿಸಿದರೆ ಈ ಸಮಸ್ಯೆ ಇರುವುದಿಲ್ಲ. ಈಗಿನ್ನು ಮುಂಗಾರು ನಾಟಿ ಕಾರ್ಯ ಆರಂಭವಾಗಲಿದ್ದು, ತಡೆಗೋಡೆ ನಿರ್ಮಿಸ ದಿದ್ದರೆ ಮತ್ತೆ ಕೃಷಿಗೆ ಹಾನಿಯಾಗುವ ಭೀತಿಯಿದೆ ಎಂದು ಇಲ್ಲಿನ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಸುದಿನ ವರದಿ

ಅರೆಹೊಳೆಯ ರಾಜಕಾಲುವೆ ಒಡೆದು, ಇಲ್ಲಿನ ಕೃಷಿ ಪ್ರದೇಶಗಳಿಗೆ ಹಾನಿಯಾಗುತ್ತಿರುವ ಬಗ್ಗೆ, ಶಾಶ್ವತ ತಡೆಗೋಡೆ ಬೇಕು ಎನ್ನುವ ಕುರಿತಂತೆ ‘ಉದಯವಾಣಿ ಸುದಿನ’ವು ಕಳೆದ ವರ್ಷದ ಜು. 20ರಂದು ವಿಶೇಷ ವರದಿ ಪ್ರಕಟಿಸಿತ್ತು.

ಮನವಿ ನೀಡಿದರೂ ಪ್ರಯೋಜನವಾಗಿಲ್ಲ

ಈ ಕಾಲುವೆ ಅಲ್ಲಲ್ಲಿ ಒಡೆದು ಹೋಗಿ ಕೃಷಿ ಭೂಮಿಗಳಿಗೆ ಗುಡ್ಡದ ಮಣ್ಣು ನುಗ್ಗಿ ಕೃಷಿ ಚಟುವಟಿಕೆಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾ.ಪಂ. ಅಧ್ಯಕ್ಷರ ಸಹಿತ ಎಲ್ಲರಿಗೂ ಮನವಿ ಮಾಡಿದರೂ, ಏನೂ ಪ್ರಯೋಜನವಾಗಿಲ್ಲ. -ಮಂಜುನಾಥ್‌ ನಾವುಂದ ಕೆಳಾಬದಿ, ಕೃಷಿಕರು

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.