ಮಾಗಡಿ ಕಾಂಗ್ರೆಸ್ ನಲ್ಲಿ ಶುರುವಾದ ಜಟಾಪಟಿ: ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ
ಹೆಚ್.ಎಂ.ರೇವಣ್ಣ, ಶಾಸಕ ಹೆಚ್.ಸಿ.ಬಾಲಕೃಷ್ಣ ನಡುವೆ ಕೋಲ್ಡ್ ವಾರ್
Team Udayavani, May 20, 2022, 1:15 PM IST
ಮಾಗಡಿ : ಮಾಗಡಿ ಕಾಂಗ್ರೆಸ್ ನಲ್ಲಿ ಶೀತಲ ಸಮರ ಆರಂಭವಾಗಿದ್ದು, ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆಯುವ ಮೂಲಕ ಹೆಚ್.ಎಂ.ರೇವಣ್ಣ ವಿರುದ್ಧ ಬಹಿರಂಗ ಆಸಮಾಧಾನ ಹೊರ ಹಾಕಿದ್ದಾರೆ.
ಪತ್ರದಲ್ಲಿ ೨೫ ವರ್ಷಗಳಿಂದ ನಾನು ರಾಜಕೀಯದಲ್ಲಿದ್ದೇನೆ. ಕೆಲವು ಕಾರಣಗಳಿಂದ ಜೆಡಿಎಸ್ ತೊರೆದಿದ್ದು ಗೊತ್ತೇ ಇದೆ. ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರಿದ್ದೇನೆ. ಕಾಯಾ,ವಾಚ ಮನಸ ದುಡಿಯುತ್ತಿದ್ದೇನೆ. ಹೆಚ್.ಎಂ.ರೇವಣ್ಣನವರು ಪಕ್ಷದಲ್ಲಿ ಹಿರಿಯರು. ಮಾಗಡಿ ಕ್ಷೇತ್ರದ ಮೇಲೆ ಅಭಿಮಾನ ಇರುವವರು. ಆದರೆ ಜೆಡಿಎಸ್ ಶಾಸಕರ ಬಗ್ಗೆ ಹೊಗಳಿಕೆ. ಪದೇ ಪದೇ ಕ್ಷೇತ್ರದಲ್ಲಿ ಹೊಗಳುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ವಿರುದ್ಧವಾದುದು. ಅವರಿಗೆ ಮಾಗಡಿ ಮೇಲೆ ಆಸೆ ಇರಬಹುದು, ಹಾಗಾಗಿ ಅವರಿಗೆ ಟಿಕೆಟ್ ನೀಡಿ, ನಾನು ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಪತ್ರದಲ್ಲಿ ವ್ಯಂಗ್ಯವಾಗಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಸಿಎಂ ದಾವೋಸ್ ಪ್ರವಾಸ ಡೌಟು?; ಇಂದು ದಿಲ್ಲಿಗೆ ಹಠಾತ್ ಭೇಟಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!