ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ


Team Udayavani, May 20, 2022, 4:23 PM IST

ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ

ವಿಜಯಪುರ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರ ಅವಾಂತರ ಆರಂಭಿಸಿದೆ. ಶುಕ್ರವಾರ ಬೆಳಗಿನ ವರೆಗೆ ಒಂದೇ ದಿನ 39.06 ಎಂ.ಎಂ. ಮಳೆ ಸುರಿದಿದ್ದು, ಜಿಲ್ಲೆಯಾದ್ಯತ 25 ಮನೆಗಳು ಹಾನಿಯಾಗಿದ್ದು ಸಿಡಿಲಿಗೆ ಎರಡು 2 ಹಾಗೂ ವಿದ್ಯುತ್ ಅವಗಡದಲ್ಲಿ ಒಂದು ಜಾನುವಾರು ಬಲಿಯಾಗಿವೆ. ಬಾಳೆ ಸೇರಿದಂತೆ ಬೆಳೆದು ನಿಂತಿದ್ದ ತೋಟಗಾರಿಕೆ ಬೆಳೆ ಹಾನಿಹಾಗಿವೆ.

ಗುರುವಾರ ಮಧ್ಯಾಹ್ನದಿಂದ ಸುರಿಯಲು ಆರಂಭಿಸಿರುವ ಮಳೆ, ಶುಕ್ರವಾರ ಬೆಳಗಿನ ವರೆಗೆ ಒಂದೇ ದಿನ 39.06 ಮಿ.ಮೀ. ಮಳೆಯಾಗಿದೆ. ಕೊಲ್ಹಾರ ತಾಲೂಕಿನಲ್ಲಿ ಅತ್ಯಧಿಕ 79.4 ಮಿ.ಮೀ. ರಷ್ಟು ಮಳೆಯಾಗಿದ್ದರೆ, ಬಬಲೇಶ್ವರ ತಾಲೂಕಿನಲ್ಲಿ 55.7 ಮಿ.ಮೀ. ಮಳೆಯಾಗಿದೆ. ವಿಜಯಪ[ಉರ ತಾಲೂಕಿನಲ್ಲಿ 41.20 ಮಿ.ಮೀ., ಇಂಡಿ ತಾಲೂಕಿನಲ್ಲಿ 22.34 ಮಿ.ಮೀ., ತಾಳಿಕೋಟೆ ತಾಲೂಕಿನಲ್ಲಿ 33.35 ಮಿ.ಮೀ., ತಿಕೋಟಾ ತಾಲೂಕಿನಲ್ಲಿ 59.75 ಮಿ.ಮೀ., ನಿಡಗುಂದಿ ತಾಲೂಕಿನಲ್ಲಿ 36.10 ಮಿ.ಮೀ., ಮುದ್ದೇಬಿಹಾಳ ತಾಲೂಕಿನಲ್ಲಿ 33.45 ಮಿ.ಮೀ., ಸಿಂದಗಿ ತಾಲೂಕಿನಲ್ಲಿ 16.40 ಮಿ.ಮೀ., ಬಸವನಬಾಗೇವಾಡಿ ತಾಲೂಕಿನಲ್ಲಿ 28.03 ಮಿ.ಮೀ., ಚಡಚಣ ತಾಲೂಕಿನಲ್ಲಿ 43.10 ಮಿ.ಮೀ., ದೇವರಹಿಪ್ಪರಗಿ ತಾಲೂಕಿನಲ್ಲಿ 19 ಮಿ.ಮೀ. ರಷ್ಟು ಮಳೆಯಾಗಿದೆ.

ಕಳೆದ ಎರಡು ದಿನಗಳಿಂದ ಸುತಿಯುತ್ತಿರುವ ಮಳೆ ಇದೀಗ ಅವಾಂತರ ಸೃಷ್ಟಿಸಲು ಆUರಂಭಿಸಿದೆ. ಗುರುವಾರವೂ ಮಳೆಯಾಗಿದ್ದರೂ 9.94 ರಷ್ಟು ಸುರಿದಿದ್ದ ಮಳೆ ಯಾವ ಹಾನಿಯನ್ನೂ ಮಾಡಿರಲಿಲ್ಲ. ಆದರೆ ಶುಕ್ರವಾರ ಸುರಿದ ಮಳೆ ಹಾನಿ ಸೃಷ್ಟಿದೆ.

ಮಳೆಯ ಅವಾಂತರಕ್ಕೆ ಬಸವನಾಗೇವಾಡಿ ತಾಲೂಕಿನಲ್ಲಿ 5 ಮನೆಗಳು, ಬಬಲೇಶ್ವರ ತಾಲೂಕಿನಲ್ಲಿ 4, ಮುದ್ಧೇಬಿಹಾಳ ತಾಲೂಕಿನಲ್ಲಿ 9, ಕೊಲ್ಹಾರ ತಾಲೂಕಿನಲ್ಲಿ 2, ತಾಳಿಕೋಟೆ, ತಿಕೋಟಾ ತಾಲೂಕಿನಲ್ಲಿ ತಲಾ 1 ಮನೆ ಸೇರಿ ಒಂದೇ ದಿನ 25 ಮನೆಗಳು ಹಾನಿಹಾಗಿದೆ.

ಇದನ್ನೂ ಓದಿ : ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

ತಾಳಿಕೋಟೆ ತಾಲೂಕ ಸಾಲವಾಡಗಿ ಗ್ರಾಮದಲ್ಲಿ ಬಸನಗೌಡ ಹೊರಗಿನಮನಿ ಎಂಬವರಿಗೆ ಸೇರಿದ ಆಕಳು ವಿದ್ಯುತ್ ಅವಗಡದಿಂದ ಸಾವಿಗೀಡಾಗಿದೆ. ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಮದಲ್ಲಿ ಮಹಾಂತರಪ್ಪ ಹುಮನಾಬಾದಿ ಎಂಬವರಿಗೆ ಸೇರಿದ 1.20 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಹಾನಿಯಾಗಿದೆ.

ಈ ಮಧ್ಯೆ ಶಾಪೇಟೆ ಸೇರಿದಂತೆ ನರಗದ ವಿವಿಧ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು, ಕೆಲವೆಡೆ ಹಾನಿ ಉಂಟು ಮಾಡಿದೆ. ಮಳೆ ನೀರಿನಿಂದ ಹಾನಿಯಾದ ಪ್ರದೇಶಗಳಿಗೆ ಶಾಸಕ ದೇವಾನಂದ ಚವ್ಹಾಣ ಅವರು ಮಹಾನರ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯಾದ ಪ್ರದೇಶಗಳಲ್ಲಿ ಪರಿಶೀಲಿನೆ ನಡೆಸಿದರು.

ಮಹಾನಗರ ಪಾಲಿಕೆಯ ಇಇ ರಶ್ಮಿ ಮೂಲಗಾಂವಿ, ಎಇಇ ಸುನಿಲ ಹಿರೇನಿ, ಸುರೇಶ ಕುಂಬಾರ, ಪ್ರಶಾಂತ ಜಾಲಗೇರಿ, ಶಿವು ಹಿರೇಕುರುಬರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮಳೆಯ ಅವಾಂತರಕ್ಕೆ ಜಿಲ್ಲಾಡಳಿತ ಎಚ್ಚೆತ್ತಿದ್ದು, ಬಾಧಿತರ ನೆರವಿಗೆ ಧಾವಿಸಲು ಮುಂದಾಗಿದೆ. ಮನೆ, ಬೆಳೆ, ಪ್ರಾಣಿ ಹಾನಿ ಸೇರಿದಂತೆ ವಿವಿಧ ಹಾನಿಯಾದ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದೆ.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.