ಉತ್ತಮ ಮಳೆ, ಕೃತಕ ನೆರೆ, ಕಾಂಕ್ರೀಟ್‌ ಸ್ಲ್ಯಾಬ್‌ ಬಿರುಕು


Team Udayavani, May 21, 2022, 11:03 AM IST

concrete-slab

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಶುಕ್ರವಾರವೂ ಮುಂದುವರಿಯಿತು. ಗುರುವಾರ ಸಂಜೆ ಬಳಿಕ ತುಸು ಬಿಡುವು ನೀಡಿದ್ದ ಮಳೆ ತಡರಾತ್ರಿ ಮತ್ತೆ ಆರಂಭವಾಗಿ ಪೂರ್ತಿ ಮಳೆಯಾಯಿತು.

ಉಡುಪಿ, ಬ್ರಹ್ಮಾವರ, ಕಾಪು ಭಾಗ ಗಳಲ್ಲಿಯೂ ಇದೇ ರೀತಿ ಮಳೆ ಮುಂದು ವರಿಯಿತು. ಉಡುಪಿ ನಗರದ ಕರಾವಳಿ ಜಂಕ್ಷನ್‌ ಬಳಿ ಕೃತಕ ನೆರೆಹಾವಳಿ ಸೃಷ್ಟಿ ಯಾಯಿತು. ನಗರದ ಅಂಬಾಗಿಲು, ಕಲ್ಸಂಕ, ಆದಿಉಡುಪಿ, ತೆಂಕಪೇಟೆ, ಬಡಗು ಪೇಟೆ ಭಾಗಗಳಲ್ಲಿಯೂ ಮಳೆನೀರು ರಸ್ತೆ ಯಲ್ಲಿಯೇ ಹರಿಯುತ್ತಿತ್ತು.

ಶಿರಿಬೀಡು ಬಳಿ ಕೃತಕ ಹೊಂಡ

ಕೃತಕ ಹೊಂಡದಲ್ಲಿ ನೀರು ಶೇಖರಣೆ ಯಾಗಿ ತ್ಯಾಜ್ಯ ತುಂಬಿಕೊಂಡ ಘಟನೆ ಶಿರಿಬೀಡು ಬಳಿ ನಡೆಯಿತು.ಕಾಮಗಾರಿ ಗೆಂದು ಅಗೆದು ಹಾಕಲಾಗಿದ್ದ ಈ ಗುಂಡಿ ಹಲವು ದಿನಗಳಿಂದಲೂ ಖಾಲಿ ಬಿದ್ದಿತ್ತು. ಈಗ ಇಲ್ಲಿ ನೀರು ಶೇಖರಣೆಯಾಗಿದ್ದು, ರೋಗ ರಜಿನಗಳು ಆವರಿಸುವ ಭೀತಿಯೂ ಕಾಡುತ್ತಿದೆ. ಇದನ್ನು ತೆರವುಗೊಳಿಸದಿದ್ದರೆ ಪಾದಚಾರಿಗಳೂ ಇದಕ್ಕೆ ಬೀಳುವ ಸಾಧ್ಯತೆಗಳಿವೆ ಎನ್ನುತ್ತಾರೆ ಸ್ಥಳೀಯರು.

ಬನ್ನಂಜೆಯಲ್ಲಿ ನೆರೆ ಹಾವಳಿ

ಬನ್ನಂಜೆ ಗರೋಡಿಯ ಒಳಭಾಗದ ತಗ್ಗು ಪ್ರದೇಶಗಳಲ್ಲಿ ರಸ್ತೆಯಲ್ಲಿಯೇ ನೀರು ನಿಂತ ಪರಿಣಾಮ ವಾಹನ ಸವಾರರು ಭಯದಿಂದಲೇ ಚಾಲನೆ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಶುಭಸಮಾರಂಭಗಳಿಗೆ ಮಳೆಕಾಟ

ನಗರದ ಬಹುತೇಕ ಕಡೆಗಳಲ್ಲಿ ಶುಭ ಸಮಾರಂಭಗಳಿಗೆ ಮುಹೂರ್ತ ನಿಗದಿ ಆಗಿದ್ದು, ಮಳೆಯಿಂದಾಗಿ ಎಲ್ಲವೂ ಅಸ್ತವ್ಯಸ್ತ ವಾಗಿದೆ. ಜೂನ್‌ ತಿಂಗಳಿನ ಮಳೆಗಾಲಕ್ಕೂ ಮೊದಲು ಶುಭಕಾರ್ಯ ಮುಗಿಸಲು ಹೊರಟವರಿಗೆ ಆಸಾನಿ ಚಂಡಮಾರುತ ತಲೆನೋವು ಉಂಟು ಮಾಡಿದೆ.

ಕಾಂಕ್ರಿಟ್‌ ಸ್ಲ್ಯಾಬ್‌ನಲ್ಲಿ ಬಿರುಕು

ನಗರದ ಕಲ್ಸಂಕ ಭಾಗದಲ್ಲಿ ವರ್ಷಗಳ ಹಿಂದಷ್ಟೆ ಸುಸಜ್ಜಿತವಾಗಿ ನಿರ್ಮಿಸಿದ್ದ ಕಾಂಕ್ರಿಟ್‌ ಸ್ಲ್ಯಾಬ್‌ನಲ್ಲಿ ಬಿರುಕು ಬಿಟ್ಟ ಪರಿಣಾಮ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಸ್ಮಾರ್ಟ್‌ಸಿಟಿ ಕಾಮಗಾರಿಯು ನಡೆಯುತ್ತಿದ್ದು, ನಿರಂತರ ಸುರಿದ ಮಳೆಗೆ ಕಾಂಕ್ರಿಟ್‌ ರಸ್ತೆಯ ಸ್ಲ್ಯಾಬ್‌ಗಳು ಬಿರುಕು ಬಿಟ್ಟಿದೆ. ಕಳಪೆ ಕಾಮಗಾರಿಯಿಂದಲೂ ಹೀಗಾಗಿರುವ ಸಾಧ್ಯತೆಯಿದೆ. ವಾಹನ ಸವಾರರಿಗೆ ಯಾವುದೇ ಸಮಸ್ಯೆಯಾಗದಂತೆ ಸಂಬಂಧಪಟ್ಟ ಇಲಾಖೆ, ಜನ ಪ್ರತಿನಿಧಿಗಳು ತುರ್ತಾಗಿ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.