ಯೋಗ್ಯತೆ ಇದ್ದರೆ ಬೆಂಗಳೂರು ನಗರದ ಆರೋಗ್ಯ ಸರಿಪಡಿಸಿ: ಸೋಮಣ್ಣಗೆ ಕುಮಾರಸ್ವಾಮಿ ಟಾಂಗ್


Team Udayavani, May 21, 2022, 3:19 PM IST

ಯೋಗ್ಯತೆ ಇದ್ದರೆ ಬೆಂಗಳೂರು ನಗರದ ಆರೋಗ್ಯ ಸರಿಪಡಿಸಿ: ಸೋಮಣ್ಣಗೆ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ನಮ್ಮ ಆರೋಗ್ಯದ ಬಗ್ಗೆ ಸೋಮಣ್ಣ ಅವರಿಗೆ ಕಾಳಜಿ ಬೇಡ, ಆರೋಗ್ಯ ಯಾವ ರೀತಿ ಇಟ್ಟುಕೊಳ್ಳಬೇಕೆಂದು ವೈದ್ಯರು ನಮಗೆ ಹೇಳಿದ್ದಾರೆ. ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ವಿ.ಸೋಮಣ್ಣ ಅವರಿಗೆ ತಿರುಗೇಟು ನೀಡಿದ್ದಾರೆ.

ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ ಮತ್ತಿತರ ಕಡೆ ಇಂದು ಮಳೆ ಹಾನಿ ವೀಕ್ಷಣೆ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ನಗರ ಏನು ಅಂತ ಸೋಮಣ್ಣ ಅವರಿಂದ ಕಲಿಯಬೇಕಿಲ್ಲ ಎಂದು ಅವರು ಹೇಳಿದರು.

ಜೆಡಿಎಸ್ ನಲ್ಲಿ ಯಾವ ರೀತಿ ಬೆಳೆದಿರಿ, ದೇವೇಗೌಡರ ಹೆಸರಲ್ಲಿ ಯಾವ ರೀತಿ ಬೆಳವಣಿಗೆ ಕಂಡಿರಿ ಎನ್ನುವುದು ಎಲ್ಲಾ ಗೊತ್ತಿದೆ. ಬಿಡುವಿದ್ದರೆ ಬರುವುದಕ್ಕೆ ಹೇಳಿ ಪಾಠ ಮಾಡುತ್ತೇನೆ ಎಂದು ಸಚಿವ ಸೋಮಣ್ಣ ಹೇಳಿಕೆಗೆ ಕುಮಾರಸ್ವಾಮಿ ಅವರು ಗುಡುಗಿದರು.

ರಾಜಕಾಲುವೆ, ರಸ್ತೆ ಕೆಲಸ ಮಾಡದೆ ಕೋಟ್ಯಂತರ ರೂಪಾಯಿ ಲೂಟಿ ಮಾಡಿದಿರಿ. ನಾನು 1973 ರಿಂದ ಬೆಂಗಳೂರಿನಲ್ಲೇ ಬದುಕಿ ಕೆಲಸ ಮಾಡಿದ್ದೇನೆ. ಮತ ಕೊಟ್ಟ ಜನರಿಗೆ ಮೋಸ ಮಾಡಿಲ್ಲ. ಅಧಿಕಾರಿಗಳಿಗೆ ಹಿಂದೆ ನೀರು ನಿಲ್ಲಿಸಲು ಹೇಳಿ ಮುಂದೆ ಬೈಯುವ ಕೆಲಸ ಮಾಡಿಲ್ಲ ಎಂದು ಅವರು ಟಾಂಗ್ ನೀಡಿದರು.

ಸೋಮಣ್ಣ ಅವರಿಗೆ ಹೊಟ್ಟೆ ಉರಿ ಶುರುವಾಗಿರಬೇಕು. ದುಡ್ಡು, ಅಧಿಕಾರದ ಮತ್ತಲ್ಲಿ ಅವರಿದ್ದಾರೆ. ನರೇಂದ್ರ ಮೋದಿ‌ ಅವರ ಮುಖ ನೋಡಿ ಮತ ಹಾಕ್ತಾರೆ ಅಂದುಕೊಂಡಿದ್ದರೆ ಅದು ಸುಳ್ಳು. ಇಡೀ ಬೆಂಗಳೂರು ನಗರವನ್ನೇ ಅವರಿಸಿಕೊಳ್ಳುತ್ತೇವೆ ಎಂದರೆ ಅದು ಸುಳ್ಳು ಅಷ್ಟೇ. ಬನ್ನಿ ಜನರ ನೋವು ನೋಡಿ. ಅಭಿವೃದ್ಧಿ ಹೆಸರಲ್ಲಿ ತಿಂದಿದ್ದು ಸಾಕು. ರಾಜಕಾಲುವೆಗೆ ಹಣ ಕೊಡುತ್ತೇವೆ ಎಂದು ಸಿಎಂ ಹೇಳುತ್ತಿದ್ದಾರೆ. ಅದನ್ನಾದರೂ ಸರಿಯಾಗಿ ಉಪಯೋಸಿಕೊಳ್ಳಿ. ಚಕ್ರ ತಿರುಗುತ್ತದೆ, ಅವರಿಗೆ ಕುಮಾರಸ್ವಾಮಿಯನ್ನು ಅರಗಿಸಿಕೊಳ್ಳಲು ಆಗುವುದಿಲ್ಲ ಎಂದರು.

ಇದನ್ನೂ ಓದಿ:ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ: ಎಚ್. ವಿಶ್ವನಾಥ್

ಬೆಂಗಳೂರು ನಗರ ಜನತೆಗೆ ಹೊಸ ಪ್ರಣಾಳಿಕೆ ಅಂತ ಕಾಂಗ್ರೆಸ್ ಹೇಳುತ್ತಿದೆ. ಐದು ವರ್ಷ ಅಧಿಕಾರದಲ್ಲಿ ಇದ್ದಾಗ ಅವರು ಯಾವ ಕೆಲಸವನ್ನೂ ಮಾಡಲಿಲ್ಲ. 2006ರಲ್ಲಿಯೇ ಬೆಂಗಳೂರಿನ ಬೆಳವಣಿಗೆ ನಿಲ್ಲಿಸಿ ಐದು ಟೌನ್ ಶಿಪ್ ಮಾಡಲು ನೀಲನಕ್ಷೆ ತಯಾರು ಮಾಡಿದ್ದೆ. ಆದರೆ, ನಮಗೆ ಸಹಕಾರ ಸಿಗಲಿಲ್ಲ. ಕೊರಿಯನ್ ಕಂಪನಿ ಮುಂದೆ ಬಂದಿತ್ತು. ಯೋಜನೆಗೆ ಕ್ಲಿಯರೆನ್ಸ್ ಕೊಡಲು ಮುಂದಾಗಿದ್ದೆ ನಾನು. ಬಿಜೆಪಿಯವರು ಬೆಂಬಲ ಕೊಡಲಿಲ್ಲ. ಕೆರೆ ಕಟ್ಟೆಗಳನ್ನು ನುಂಗಿದ ನೀವು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಆರ್. ಅಶೋಕ್ ಗೆ ತಿರುಗೇಟು: ನಾವು ಟೀ ಮಾರುವವರಿಗೂ ಟಿಕೆಟ್ ಕೊಡುತ್ತೇವೆ, ಜೆಡಿಎಸ್ ನವರು ಮನೆಯವರಿಗೆ ಮಾತ್ರ ಕೊಡುತ್ತಾರೆ ಎಂದು ಹೇಳಿಕೆ ನೀಡಿರುವ ಸಚಿವ ಆರ್ ಅಶೋಕ್ ಗೆ ತಿರುಗೇಟು ಕೊಟ್ಟ ಎಚ್ ಡಿಕೆ, ಯಾರು ಟೀ ಮಾರುವವರಿಗೆ ಟಿಕೆಟ್ ಕೊಡುತ್ತಾರೆ. ಯಾರು ಮನೆಯವರಿಗೆ ಟಿಕೆಟ್ ಕೊಡುತ್ತಾರೆ ಎನ್ನುವುದು ಗೊತ್ತಿದೆ. ಬಿಜೆಪಿಯಲ್ಲಿ ಇರುವ ಕುಟುಂಬ ರಾಜಕರಣದ ಬಗ್ಗೆ ಇಡೀ ಜಗತ್ತಿಗೆ ಗೊತ್ತಿದೆ. ಅವರಂತೆಯೇ ನಾನು ಲೂಟಿ ಮಾಡಿಲ್ಲ. ಹಲೋ ಕಂದಾಯ ಸಚಿವರು ಎಂದರೆ ಪೋಡಿ, ಪಹಣಿ ಬಂದು ಮನೆ ಮುಂದೆ ಬೀಳುತ್ತಂತೆ. ಜನರನ್ನು ಯಾಮರಿಸುವುದಕ್ಕೂ ಒಂದು ಮಿತಿ ಬೇಡವಾ? ಇಂಥ ವ್ಯಕ್ತಿ ನಮ್ಮ ಕುಟುಂಬದ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಕನ್ನಡಿಗರ ಸ್ವಾಭಿಮಾನ, ಪ್ರಾದೇಶಿಕ ಪಕ್ಷ ಉಳಿಸಬೇಕು ಟೀ ಮಾರುವವರು ನಮ್ಮಲ್ಲಿ ಇಲ್ಲದೇ ಇರಬಹುದು. ಆದರೆ ಜನರ ಕಷ್ಟ ಅರಿಯುವವರನ್ನು ಆಯ್ಕೆ ಮಾಡುತ್ತೇವೆ. ಟೀ ಮಾರುವವರ ಹೆಸರಿನಲ್ಲಿ ಲೂಟಿ ಮಾಡುವವರನ್ನು ಆಯ್ಕೆ ಮಾಡಿಲ್ಲ ಎಂದು ತಿರುಗೇಟು ನೀಡಿದರು.

ಮಾಗಡಿ ಶಾಸಕರ ಸ್ಥಾನ ಖಾಲಿ ಇಲ್ಲ: ಮಾಗಡಿ ಕ್ಷೇತ್ರದ ಗುದ್ದಾಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ವೈಯಕ್ತಿಕವಾಗಿ ಕ್ಷೇತ್ರಗಳಲ್ಲಿ ಯಾರನ್ನು ಯಾರು ಹೊಗಳಿರುತ್ತಾರೋ ಗೊತ್ತಿಲ್ಲ. ಮಾಗಡಿ ಕ್ಷೇತ್ರ ವಿಚಾರದಲ್ಲಿ ನನ್ನ ಬಳಿ ಚರ್ಚೆ ಆಗಿಲ್ಲ‌. ಯಾವ ದೃಷ್ಟಿಯಿಂದ ಬಾಲಕೃಷ್ಣ ಅವರು ಪತ್ರ ಬರೆದಿದ್ದಾರೆ ಗೊತ್ತಿಲ್ಲ. ಆಗ ನನ್ನ ಆತ್ಮೀಯ ಸ್ನೇಹಿತರು. ಆದರೆ ಅವರ ನಿರ್ಧಾರದಿಂದ ಹೋಗಿದ್ದಾರೆ. ಯಾರು ಅವರ ಆತ್ಮೀಯರು ನನ್ನ ಬಳಿ ಮಾತಾಡಲ್ಲ. ಶಾಸಕರ ಸ್ಥಾನ ಖಾಲಿ‌ ಇಲ್ಲ ಏನಂತ ಚರ್ಚೆ ಮಾಡಲಿ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಟಿ.ಎ.ಶರವಣ, ರಮೇಶ್ ಗೌಡ, ಜೆಡಿಎಸ್ ನಗರ ಅಧ್ಯಕ್ಷ ಆರ್. ಪ್ರಕಾಶ್, ಸ್ಥಳೀಯ ಜೆಡಿಎಸ್ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.