ರಡ್ಡಿ ಸಮಾಜದವರು ಗುಲಾಮರಲ್ಲ


Team Udayavani, May 21, 2022, 3:18 PM IST

11socity

ದೇವದುರ್ಗ: ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ ಆಶೀರ್ವಾದದಿಂದ ರಾಜ್ಯದಲ್ಲಿ ಹೆಮ್ಮರವಾಗಿ ಬೆಳೆದಿರುವ ರಡ್ಡಿ ಸಮುದಾಯ ಯಾವುದೇ ಪಕ್ಷ, ವ್ಯಕ್ತಿ, ಸಂಘಟನೆಯ ಗುಲಾಮವಲ್ಲ. ರಾಜಕೀಯ ಆಡಳಿತವನ್ನೇ ಬುಡಮೇಲು ಮಾಡುವ ಶಕ್ತಿ ಸಮುದಾಯಕ್ಕಿದೆ ಎಂದು ಹೆಡಗಿಮದ್ರಾ ರಡ್ಡಿ ಗುರುಪೀಠದ ಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಸಾರ್ವಜನಿಕ ಕ್ಲಬ್‌ ಮೈದಾನದಲ್ಲಿ ಆಯೋಜಿಸಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹೇಮರಡ್ಡಿ ಮಲ್ಲಮ್ಮ ಸಮುದಾಯ ಯಾರ ಹಂಗಿಲ್ಲದೆ 600 ವರ್ಷಗಳ ಹಿಂದೆ ಬೆಳೆದಿದೆ. ನನ್ನ ಭಕ್ತರಿಗೆ ಬಡತನವೇ ನೀಡಬೇಡ ಎಂದು ಹೇಮರಡ್ಡಿ ಮಲ್ಲಮ್ಮ ಶ್ರೀಶೈಲ ಮಲ್ಲಿಕಾರ್ಜುನ ದೇವರ ಬೇಡಿಕೊಂಡಿದ್ದರು. ಅವರ ಭಕ್ತಿಯ ಫಲವೇ ಇಂದು ಸಮುದಾಯ ದೊಡ್ಡ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗಿದೆ ಎಂದರು. ಸಮುದಾಯ ಮುಖಂಡರು ರಾಜಕೀಯ ಪಕ್ಷಗಳ, ನಾಯಕರ ಗುಲಾಮರಾಗಬಾರದು. ಸ್ವಂತ ಸರ್ಕಾರ ಹಾಗೂ ಸಾಮ್ರಾಜ್ಯ ಸ್ಥಾಪಿಸುವ ಶಕ್ತಿ ಸಮುದಾಯಕ್ಕಿದೆ.

ರಾಜಕೀಯ ನಾಯಕರ ಹಿಂಬಾಲಕರಾಗದೆ, ಸ್ವಂತಶಕ್ತಿಯಿಂದ ರಾಜಕಾರಣಿಯಾಗಬೇಕು. ಸಾಹಿತ್ಯ, ಕಲೆ, ರಾಜಕೀಯದಲ್ಲಿ ಸಮುದಾಯ ಇನ್ನೂ ಎತ್ತರವಾಗಿ ಬೆಳೆಯಬೇಕಿದೆ. ಬಹುತೇಕ ಪಕ್ಷಗಳು ಹಾಗೂ ಸರ್ಕಾರಗಳು ರಡ್ಡಿ ಸಮಾಜವನ್ನು ರಾಜಕೀಯವಾಗಿ ಬೆಳೆಸಿಕೊಂಡಿವೆ ವಿನಃ ಸೂಕ್ತ ಸ್ಥಾನಮಾನ, ಗೌರವ, ಹುದ್ದೆ ನೀಡಿಲ್ಲ. ಇದು ಸಮುದಾಯಕ್ಕೆ ಮಾಡಿರುವ ಅವಮಾನ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಸ್ವಾವಲಂಬಿಯಾಗಿ ಬದುಕಬೇಕಿದೆ ಎಂದರು.

ಸಮುದಾಯದ ಹಿರಿಯ ಮುಖಂಡ ಸಿ.ಎಸ್‌. ಪಾಟೀಲ್‌ ಮಾತನಾಡಿ, ರಡ್ಡಿ ಸಮುದಾಯ ಆರ್ಥಿಕವಾಗಿ ಬಲಿಷ್ಠವಾಗಿದೆ. ಆದರೆ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿದೆ. ಶಿಕ್ಷಣ ಪಡೆಯುವ ಮೂಲಕ ಸಂಘಟನೆ ಮಾಡಿ, ರಾಜಕೀಯ ಹಿಡಿತ ಸಾಧಿಸಬೇಕು. ಅಧಿಕಾರ ಪಡೆಯಲು ಶಿಕ್ಷಣ ಬಹುಮುಖ್ಯ ಅಸ್ತ್ರವಾಗಿದೆ. ಈ ಹಿನ್ನೆಲೆಯಲ್ಲಿ ಸಮುದಾಯ ಮುಖಂಡರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು.

ಜಾಲಹಳ್ಳಿಯ ಜಯಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಖರಮಠದ ಕಪಿಲಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ, ನೀಲಗಲ್‌ವುಠದ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮುದಾಯ ತಾಲೂಕು ಅಧ್ಯಕ್ಷ ದೇವೀಂದ್ರಪ್ಪಗೌಡ ಹಂಚಿನಾಳ, ಸಂಜೀವರಡ್ಡಿ ಸಾಹುಕಾರ, ಆದನಗೌಡ ಪಾಟೀಲ್‌, ನಾಗರಾಜ ಪಾಟೀಲ್‌, ಶರಣಗೌಡ ಗೌರಂಪೇಟೆ, ಸೋಮಶೇಖರ ಮಂದಕಲ್‌, ರಾಜಶೇಖರ ಗೌಡ ಮುಷ್ಟೂರು, ವೆಂಕಟರಾಯ ಇದ್ದರು.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.