ಅಧ್ಯಕ್ಷರಾದ್ರೆ ಕಲ್ಯಾಣ ನಿಧಿ ನೆರವು ಪ್ರಮಾಣ ಏರಿಕೆ


Team Udayavani, May 21, 2022, 4:38 PM IST

ಅಧ್ಯಕ್ಷರಾದ್ರೆ ಕಲ್ಯಾಣ ನಿಧಿ ನೆರವು ಪ್ರಮಾಣ ಏರಿಕೆ

ಮೈಸೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ತಾವು ಆಯ್ಕೆಯಾದರೆ ಮಂಡಳಿಯ ಕಲ್ಯಾಣ ನಿಧಿಯಿಂದ ಸಂಕಷ್ಟದಲ್ಲಿರುವ ಸದಸ್ಯರಿಗೆ ನೀಡುತ್ತಿರುವ 2.5 ಲಕ್ಷ ರೂ. ನೆರವನ್ನು ಐದು ಲಕ್ಷ ರೂ.ಗೆ ಏರಿಸುವು ದಾಗಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕನ್ನಡ ಚಲನಚಿತ್ರ ನಿರ್ಮಾಪಕ ಸಾ.ರಾ.ಗೋವಿಂದು ಹೇಳಿದರು.

ಕನ್ನಡ ಚಿತ್ರರಂಗದಲ್ಲಿ ಕಳೆದ 40 ವರ್ಷಗಳಿಂದ ಇದ್ದೇನೆ. ತಮ್ಮ ತಂಡ ಚುನಾಯಿತರಾದರೆ ಮಂಡಳಿಯ ಕಲ್ಯಾಣ ನಿಧಿಯಿಂದ ಸಂಕಷ್ಟದಲ್ಲಿರುವ ಸದಸ್ಯರಿಗೆ ನೀಡುತ್ತಿರುವ 2.5 ಲಕ್ಷ ರೂ. ನೆರವನ್ನು ಐದು ಲಕ್ಷ ರೂ.ಗೆ ಏರಿಸುತ್ತೇವೆ ಎಂದು ಭರವಸೆ ನೀಡಿದರು.

ಚುನಾವಣೆಯಲ್ಲಿ ಎದುರಾಳಿ ಭಾ.ಮ.ಹರೀಶ್‌ ಅವರ ಆರೋಪಕ್ಕೆ ಉತ್ತರಿಸಲಾರೆ. ಎದುರಾಳಿಗಳು ಮತದಾರರನ್ನು ತಪ್ಪುದಾರಿಗೆ ಎಳೆಯುವುದು ಬೇಡ. ಒಂದು ಸಿನಿಮಾವನ್ನೂ ಮಾಡಿರುವುದಿಲ್ಲ, ಸಿನಿಮಾ ಬಿಡುಗಡೆ ಮಾಡಿರುವುದಿಲ್ಲ. ವಾಣಿಜ್ಯ ಮಂಡಳಿಗೆ ಬಂದು ಬೀಗಹಾಕುತ್ತಾರೆ. ಏಕೆ ನಾಟಕ ಆಡ್ತೀರಿ? ಚುನಾವಣೆಯಲ್ಲಿ ನೇರವಾಗಿ ಹೋರಾಟ ನಡೆಸಬೇಕು. ನಮಗೂ ಹೇಳಲು ಸಾಕಷ್ಟು ವಿಷಯವಿದೆ. ಆದರೆ, ಹೇಳುವುದಿಲ್ಲ ಎಂದು ವಿವರಿಸಿದರು.

ಸ್ನೇಹಿತರ ಒತ್ತಾಯಕ್ಕೆ ಕಟ್ಟುಬಿದ್ದು ಅಧ್ಯಕ್ಷ ಸ್ಥಾನಕ್ಕೆ ಮತ್ತೂಮ್ಮೆ ಸ್ಫರ್ಧಿಸಿದ್ದೇನೆ. ಈವರೆಗೂಯಾವುದೇ ಚುನಾವಣೆಯಲ್ಲಿ ಯಾರನ್ನೂ ದೂಷಿಸಿರಲಿಲ್ಲ ಎಂದ ಸಾ.ರಾ.ಗೋವಿಂದು, ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ವಾಣಿಜ್ಯ ಮಂಡಳಿಯ ನಿವೇಶನದಲ್ಲಿ ಕಟ್ಟಡವನ್ನು ನಿರ್ಮಿಸಿ ಸದಸ್ಯರ ಉಪಯೋಗಕ್ಕೆ ನೀಡುವ ಉದ್ದೇಶವಿದೆ ಎಂದು ತಿಳಿಸಿದರು.

ಮೈಸೂರಿನಲ್ಲಿಯೇ ಚಿತ್ರನಗರಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರನಗರಿ ಸ್ಥಾಪನೆಗೆ ಶಂಕುಸ್ಥಾಪನೆನೆರವೇರಲಿದೆ. ರಾಜ್ಯ ಸರ್ಕಾರ ಕನ್ನಡ ಚಲನಚಿತ್ರ ರಂಗಕ್ಕೆ ಸಾಕಷ್ಟು ನೆರವು, ಉತ್ತೇಜನ ನೀಡುತ್ತಿದೆ. ನೆರೆಯ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರ ಈ ಪ್ರಮಾಣದಲ್ಲಿ ಅಲ್ಲಿನ ಚಲನಚಿತ್ರರಂಗಕ್ಕೆ ನೆರವಾಗುತ್ತಿಲ್ಲ ಎಂದರು.

ಮಂಡಳಿಯಲ್ಲಿ 1,750 ಮತದಾರರಿದ್ದಾರೆ. ನಿರ್ಮಾಪಕರು, ಪ್ರದರ್ಶಕರು, ವಿತರಕರ ವಲ ಯದಿಂದ ಚುನಾವಣೆ ನಡೆಯಲಿದೆ. ಮೇ 28ರಂದು ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ ಎಂದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎನ್‌.ಎಂ.ಸುರೇಶ್‌ ಮಾತನಾಡಿ, ಎದುರಾಳಿಗಳು ಸಾ.ರಾ.ಗೋವಿಂದು ಅವರವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ದ್ದಾರೆ. ಭಾ.ಮ.ಹರೀಶ್‌ ಇನ್ನೊಮ್ಮೆ ಇದೇ ರೀತಿಮಾತಾಡಿದರೆ ದಾಖಲೆಗಳ ಸಮೇತ ಅವರಬಗ್ಗೆ ನಾವೂ ಮಾತಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚುನಾವಣೆಗೆ ಸ್ಪರ್ಧಿಸಿರುವ ಕೆ.ಎಂ.ವೀರೇಶ್‌, ವಿ.ಸುಬ್ರಮಣಿ, ಪಿ.ಎಸ್‌.ಜ್ಞಾನೇಶ್ವರಐತಾಳ್‌, ಜಿ.ಪಿ.ಕುಮಾರ್‌, ಜಯಸಿಂಹ ಮುಸುರಿ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.