ಪಪಂ ಆಗಿ ವರ್ಷವಾದ್ರೂ ಇನ್ನೂ ನಡೆಯದ ಚುನಾವಣೆ


Team Udayavani, May 21, 2022, 6:04 PM IST

17panchayath

ಶಿರೂರ: ಶಿರೂರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿ ಒಂದು ವರ್ಷ ಗತಿಸಿದರೂ ಇನ್ನೂ ಚುನಾವಣೆ ನಡೆದಿಲ್ಲ. ಪಪಂ ಸದಸ್ಯರಾಗಬೇಕೆಂಬ ಕನಸು ಕಾಣುತ್ತಿರುವ ಆಕಾಂಕ್ಷಿ ಯುವಕರು ಚುನಾವಣೆ ಯಾವಾಗ ನಡೆಯುತ್ತದೆ ಎಂಬುದನ್ನು ಕಾಯುತ್ತಿದ್ದಾರೆ.

ಶಾಸಕ ಡಾ|ವೀರಣ್ಣ ಚರಂತಿಮಠ ಅವರು ತಮ್ಮ ಕ್ಷೇತ್ರದಲ್ಲಿ ಬರುವ ಶಿರೂರನ್ನು ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸರಕಾರದ ಮೇಲೆ ಒತ್ತಡ ಹಾಕಿದ್ದರು. ಪರಿಣಾಮ 2021 ಏಪ್ರಿಲ್‌ 21ರಂದು ಶಿರೂರ, ನೀಲಾನಗರ, ಗುಂಡನಪಲ್ಲೆ ಗ್ರಾಮಗಳು ಸೇರಿ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೇರಿ ಕಾರ್ಯ ನಿರ್ವಹಿಸುತ್ತಿದೆ. ಆದರೆ ಚುನಾವಣೆ ಇಲ್ಲದ ಕಾರಣ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಚರ್ಚೆಗೆ ಕಾರಣವಾಗಿದೆ.

ಅಧಿಕಾರಿಗಳಿಂದ ಆಡಳಿತ: ಜನಪ್ರತಿನಿಧಿಗಳು ಇಲ್ಲದಿದ್ದರೂ ಅಧಿಕಾರಿಗಳ ನೇತೃತ್ವದಲ್ಲಿ ಆಡಳಿತ ನಡೆಯುತ್ತಿದೆ. ಪಟ್ಟಣದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಆಡಳಿತ ನಡೆಯುತ್ತಿದೆ.

ವಾರ್ಡ್ವಿಂಗಡನೆ: ಕಳೆದ ನಾಲ್ಕು ತಿಂಗಳಿಂದಲೇ ಪಪಂ ವಾರ್ಡ್‌ ವಿಂಗಡಣೆ ಮಾಡಲಾಗಿದ್ದು, ಶಿರೂರಲ್ಲಿ 12, ನೀಲಾನಗರದಲ್ಲಿ 04, ಗುಂಡನಪಲ್ಲೆ ಗ್ರಾಮದಲ್ಲಿ 01 ಸೇರಿ ಒಟ್ಟು 17 ವಾರ್ಡ್‌ಗಳನ್ನು ವಿಂಗಡಣೆ ಮಾಡಲಾಗಿದೆ. ಈಗಾಗಲೇ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಪಟ್ಟಣದಲ್ಲಿ ಸಂಚರಿಸಿ ನಿಯಮಾನುಸಾರವಾಗಿ ವಾರ್ಡ್‌ಗಳನ್ನು ಪರಿಶೀಲಿಸಿದ್ದಾರೆ.

ತಕರಾರು ಅರ್ಜಿ ಸಲ್ಲಿಕೆ: ಶಿರೂರ ಪಪಂ ವ್ಯಾಪ್ತಿಗೆ ಬರುವ ನೀಲಾನಗರ ಬಂಜಾರಾ ಸಮಾಜದವರು ನೀಲಾನಗರ ಗ್ರಾಮವನ್ನು ಶಿರೂರ ಪಪಂಗೆ ಸೇರಿಸಬಾರದು. ಇದರಿಂದ ಶಾಲಾ ಮಕ್ಕಳಿಗೆ ಗ್ರಾಮೀಣ ಅಂಕ ಇತ್ಯಾದಿ ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹೀಗಾಗಿ ಗ್ರಾಮ ಪಂಚಾಯಿತಿಯೇ ಇರಲಿ ಎಂದು ಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದಾರೆ.

2011ರ ಜನಗಣತಿಯ ಬ್ಲಾಕ್‌ಗಳ ಆಧಾರಿತ ಮೇಲೆ ರಚಿಸಿದ 17 ವಾರ್ಡ್‌ಗಳನ್ನು ಉಪ ವಿಭಾಗಾಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಲು ಪ್ರಸ್ತಾಪಿಸಿದ್ದೆವು. ಅದರ ಪ್ರಕಾರ ಉಪವಿಭಾಗಾಕಾರಿಗಳಾದ ಶ್ವೇತಾ ಬೀಡಿಕರ್‌ ಅವರು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿ ಯಾವುದೇ ವ್ಯಕ್ತಿಗಳು ಆಕ್ಷೇಪಣೆ- ಸಲಹೆಗಳನ್ನು ಪ್ರಕಟಣೆಗೊಂಡ 15 ದಿನಗಳೊಳಗೆ ಸಲ್ಲಿಸಲು ಸೂಚಿಸಿದ್ದಾರೆ. ಈ ಪ್ರಕ್ರಿಯೆ ಮುಗಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಐ.ಜಿ ಕೊಣ್ಣೂರ, ಪಪಂ ಅಧಿಕಾರಿ, ಶಿರೂರ.

ಪಟ್ಟಣ ಅಭಿವೃದ್ಧಿಗೆ ಜನಪ್ರತಿನಿಧಿಗಳ ಸಹಕಾರ ಅಗತ್ಯವಿದ್ದು, ಸರಕಾರ ಕಾನೂನು ತೊಡಕುಗಳನ್ನು ಸರಿಪಡಿಸಿ ಕೂಡಲೇ ಚುನಾವಣೆ ಘೋಷಿಸಬೇಕು. ಕಲ್ಲಪ್ಪ ಭಗವತಿ, ಶಿರೂರ

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.