ಅಂಗವಿಕಲರಿಗೆ ಉದ್ಯೋಗ ಖಾತ್ರಿ ಆಸರೆ

ಬದುಕಿಗೆ ಹೊಸ ಭರವಸೆ ಮೂಡಿಸಿದ ನರೇಗಾ

Team Udayavani, May 22, 2022, 3:04 PM IST

10

ಕಾರಟಗಿ: ತಾಲೂಕಿನ ಯರಡೊಣಾ ಗ್ರಾಮದ ಒಬ್ಬೊಬ್ಬ ಅಂಗವಿಕಲರದ್ದು ಒಂದೊಂದು ಕಥೆ. ಅವರ ಎಲ್ಲ ಸಮಸ್ಯೆಗಳ ಪಯಣಕ್ಕೆ ನರೇಗಾ ಯೋಜನೆ ಊರುಗೋಲು ಆಗಿದೆ.

ತಾಲೂಕಿನ ಯರಡೋಣ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ 62 ಅಂಗವಿಕಲರಿಗೆ ಪ್ರತ್ಯೇಕವಾಗಿ ಎನ್‌ಎಂಆರ್‌ ತೆಗೆದು ಕಾಲುವೆ ಹೂಳೆತ್ತುವ ಕೆಲಸ ನೀಡಲಾಗಿತ್ತು. ಈ ಕೆಲಸದಲ್ಲಿ ದೈಹಿಕ ನ್ಯೂನ್ಯತೆ ಎದುರಿಸುತ್ತಿರುವ ಅಂಧರು, ಬುದ್ಧಿಮಾಂದ್ಯರು, ಕಾಲು ಇಲ್ಲದವರು, ಕುಷ್ಠರೋಗ ನಿವಾರಿತರು, ಮೂಗರು, ಕಿವುಡರು, ಕುಬ್ಜರು ಹೀಗೆ ಕಷ್ಟದ ಬದುಕು ಸವೆಸುತ್ತಿರುವ ವಿಕಲಚೇತನರು ನರೇಗಾದಡಿ ಕೆಲಸ ನಿರ್ವಹಿಸಿದರು.

ಈ ವಿಕಲಚೇತನರು ತಿಂಗಳ ಮಾಸಾಶನದಲ್ಲೇ ಜೀವನ ನಡೆಸುತ್ತಿದ್ದರು. ಇವರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಯರಡೋಣ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಐಇಸಿ ಚಟುವಟಿಕೆಯಡಿ ವಿಕಲಚೇತನರಿಗೆ ಇರುವ ಸೌಲಭ್ಯಗಳ ಕುರಿತು ವ್ಯಾಪಕ ಪ್ರಚಾರ ಹಾಗೂ ವಿಕಲಚೇತನರ ಸರ್ವೇ ನಡೆಸಿ ಉದ್ಯೋಗ ಚೀಟಿ ಇಲ್ಲದವರಿಗೆ ಉದ್ಯೋಗ ಚೀಟಿ ನೀಡಲಾಗಿತ್ತು. ಇದರಿಂದ ಅಂಗವಿಕಲರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾದಡಿ ಕೆಲಸ ಮಾಡಲು ಅನುಕೂಲವಾಯಿತು.

ಇವರಲ್ಲಿ ಕೆಲವರಿಗೆ ಮನೆ ಪ್ರೀತಿ, ಕಾಳಜಿ ಇಲ್ಲವಾಗಿದೆ. ಇನ್ನೂ ಕೆಲವರಿಗೆ ಯಾರ ಪೋಷಣೆ, ಸಹಾಯ ಸಿಗುತ್ತಿಲ್ಲ. ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದಾರೆ. ಕಷ್ಟದ ಜೀವನ ನಡೆಸುತ್ತಿರುವ ಕೆಲವರಿಗೆ, ನಾನು ವಿಕಲಾಂಗನಾಗಿ ಹುಟ್ಟಿದ್ದೇ ತಪ್ಪಾಯ್ತಾ ಎಂಬ ಭಾವ ಮೂಡಿತ್ತು. ಆದರೆ ನರೇಗಾ ಯೋಜನೆ ಅವರಲ್ಲಿ ಬದುಕಿನ ಭರವಸೆ, ಪ್ರೀತಿ ಜೊತೆಗೆ ಕಾಳಜಿ ನೀಡಿದೆ. ಈ ಗ್ರಾಪಂ ವ್ಯಾಪ್ತಿಯ ವಿಕಲಚೇತನರು ಒಟ್ಟಾಗಿ ನರೇಗಾ ಕೆಲಸ ಮಾಡುತ್ತಾರೆ. ನರೇಗಾ ಕೆಲಸ ನೀಡಿದ ದಿನಗಳಲ್ಲಿ ಕೆಲಸ ಮುಗಿದ ನಂತರ ತಲಾ 20 ರೂ. ಹಣ ಹಾಕಿ ತಾವೇ ಊಟ ಸಿದ್ಧಪಡಿಸಿಕೊಂಡು ಗುಂಪಾಗಿ ಕುಳಿತು ಊಟ ಮಾಡುತ್ತ ಒಬ್ಬರಿಗೊಬ್ಬರು ಪರಸ್ಪರ ಕಾಳಜಿ ತೋರುತ್ತಾರೆ. ನರೇಗಾ ಯೋಜನೆ ನಮಗೆ ಕೆಲಸ ಹಾಗೂ ಹೆಚ್ಚಿನ ಕೂಲಿ ನೀಡುವುದರ ಜೊತೆಗೆ ನೆಮ್ಮದಿಯೂ ನೀಡುತ್ತಿದೆ ಎಂದು ಖುಷಿ ಹಂಚಿಕೊಳ್ಳುತ್ತಾರೆ ಈ ಅಂಗವಿಕಲರು.

ಬೇಸಿಗೆ ಅವಧಿಯಲ್ಲಿ ದುಡಿಯೋಣ ಬಾ ಅಭಿಯಾನದಡಿ ನಿರಂತರ ನರೇಗಾ ಕೆಲಸ ನೀಡುತ್ತಿದ್ದರಿಂದ ವಿಕಲಚೇತನರಿಗೆ ಇದ್ದೂರಲ್ಲೇ ಕೆಲಸ ಸಿಗುತ್ತಿದೆ. ಜೊತೆಗೆ ಅರ್ಧ ಕೆಲಸ ಪೂರ್ತಿ ಕೂಲಿಯೂ ಸಿಗುತ್ತಿದೆ. ನರೇಗಾ ಕೂಲಿ ದಿನಕ್ಕೆ 309 ರೂ.ಗೆ ಹೆಚ್ಚಿಸಿದ್ದರಿಂದ ಅಂಗವಿಕಲರು ಖುಷಿಯಿಂದ ನರೇಗಾ ಕೆಲಸ ಮಾಡುತ್ತಾ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.

ಮನೆಯಲ್ಲಿ ನಾನು, 85 ವರ್ಷದ ನಮ್ಮ ತಾಯಿ ಇದ್ದೇವೆ. ಅವ್ವ ಊರಲ್ಲಿ ಕಟ್ಟಿಗೆ ತರಲು ಹೋದಾಗ ಬಿದ್ದು ಗಾಯ ಮಾಡಿಕೊಂಡು ಮನೆಯಲ್ಲೇ ಇದ್ದಾರೆ. ಅಣ್ಣಂದಿರು ಬೇರೆಯಾಗಿದ್ದಾರೆ. ನನಗೆ ಕಾಲುಗಳಿಲ್ಲ. ಎರಡು ಸ್ಟಿಕ್‌ನಿಂದಲೇ ನಡೆಯೋದು, ನರೇಗಾ ಯೋಜನೆ ದುಡಿಯಲು ಅವಕಾಶ ನೀಡಿದೆ. ಜೀವನ ನಿರ್ವಹಣೆ ಹಾಗೂ ಅವ್ವನ ಔಷಧಿ ಗೆ ಕೂಲಿ ಹಣ ಖರ್ಚು ಮಾಡುತ್ತಿರುವೆ. –ಹೆಸರೇಳಲಿಚ್ಛಿಸದ ಅಂಗವಿಕಲ ಮಹಿಳೆ, ಯರಡೋಣ

ನಾನು ವಿಕಲಚೇತನಳಾಗಿದ್ದು, ಡಿಇಡಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೆ. ಕೋವಿಡ್‌ ವೇಳೆ ಕೆಲಸ ಹೋಯ್ತು. ಪತಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದು, ಅವರ ಸಂಬಳದಲ್ಲೇ ಜೀವನ ನಡೆಯುತ್ತಿತ್ತು. ನಾನು ಮನೆಯಲ್ಲಿ ಖಾಲಿ ಇರುತ್ತಿದ್ದೆ. ನರೇಗಾದಡಿ ವಿಕಲಚೇತನರಿಗೆ ದುಡಿಯಲು ಅವಕಾಶ ಕಲ್ಪಿಸಿದ್ದರಿಂದ ನಾನು ಕೆಲಸ ಮಾಡುತ್ತಾ ಸ್ವಾವಲಂಬಿಯಾಗಿ ಬದುಕುತ್ತಿರುವೆ. -ಶೋಭಾ, ಅಂಗವಿಕಲ ಮಹಿಳೆ, ಯರಡೋಣ

ಕಾರಟಗಿ ತಾಲೂಕಿನ ಯರಡೋಣ ಗ್ರಾಪಂ ವ್ಯಾಪ್ತಿಯ ಅಂಗವಿಕಲರಿಗೆ ನರೇಗಾದಡಿ ಪ್ರತ್ಯೇಕ ಎನ್‌ಎಂಆರ್‌ ತೆಗೆದು ಕೆಲಸ ನೀಡಲಾಗಿದೆ. ಅಂಗವಿಕಲರು ಖುಷಿಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಮಾಡಬಹುದಾದ ಕೆಲಸಗಳನ್ನು ಮಾತ್ರ ನರೇಗಾದಡಿ ನೀಡಲಾಗುತ್ತಿದೆ. ಅವರ ಸ್ವಾವಲಂಬಿ ಜೀವನಕ್ಕೆ ನರೇಗಾ ಆಸರೆಯಾಗಿದೆ. -ಡಾ| ಡಿ. ಮೋಹನ್‌, ತಾಪಂ ಇಒ

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.