ಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ ಸ್ಥಿತಿ
Team Udayavani, May 22, 2022, 6:02 PM IST
ಶಿವಮೊಗ್ಗ: ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಗಳೇ ನಗರದ ಪ್ರವಾಹ ಪರಿಸ್ಥಿತಿಗೆ ಕಾರಣ. ಇದರ ಹಿಂದೆ ಭಾರೀ ಭ್ರಷ್ಟಾಚಾರ ನಡೆದಿದ್ದು, ನೂರಾರು ಕೋಟಿ ಲೂಟಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ಮಳೆ ಸುರಿದಿದ್ದು, ಇಡೀ ನಗರದಲ್ಲಿ ಪ್ರವಾಹ ಉಂಟಾಗಿದೆ. ಚರಂಡಿಗಳಲ್ಲಿ ನೀರು ಸರಾಗವಾಗಿ ಸಾಗದೇ ರಸ್ತೆ ಮೇಲೆ ಹರಿಯುತ್ತಿದೆ. ಒಳಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳೆಲ್ಲವೂ ಅವೈಜ್ಞಾನಿಕವಾಗಿದ್ದು, ಭ್ರಷ್ಟತೆಯನ್ನು ಎತ್ತಿ ತೋರಿಸುತ್ತಿದೆ. ಪಾಲಿಕೆ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಶಾಸಕರ ಬೇಜವಾಬ್ದಾರಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.
ಕಳೆದ ಎರಡು ದಿನಗಳ ಮಳೆಯಿಂದ ಅನೇಕ ಮನೆಗಳು ಕುಸಿದು ಬಿದ್ದಿವೆ. ಬಡವರ ಮನೆಯ ಆಹಾರ ಸಾಮಗ್ರಿಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿ ಉಪವಾಸ ಬೀಳುವಂತಾಗಿದೆ. ಸ್ಮಾರ್ಟ್ ಸಿಟಿಯ ಕಿಕ್ ಬ್ಯಾಕ್ ಎದ್ದು ಕಾಣುತ್ತಿದೆ. ಬಿಜೆಪಿಯವರು ಮಸೀದಿ, ಮಂದಿರದ ವಿಷಯಗಳ ಕಡೆ ತಿರುಗಿ ಅಭಿವೃದ್ಧಿಯನ್ನೇ ಮರೆತಿದ್ದಾರೆ ಎಂದು ಆರೋಪಿಸಿದರು.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಸ್ಮಾರ್ಟ್ ಸಿಟಿಯಲ್ಲಿದ್ದ ಅಧಿಕಾರಿಗಳು ಕೋಟ್ಯಂತರ ರೂ. ಹಣ ಸಂಗ್ರಹಣೆ ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ತನಿಖೆ ನಡೆಸಲು ಸಿದ್ಧವಿದೆ. ಆದರೆ, ಅಧಿಕಾರಿಗಳು ಯಾವುದೇ ಮಾಹಿತಿ ನೀಡದೇ ವಿಫಲವಾಗುತ್ತಿದ್ದಾರೆ. ನಿರ್ಮಿತಿ ಕೇಂದ್ರದ ಅಧಿಕಾರಿಯನ್ನು ಬಿಜೆಪಿ ಸಂರಕ್ಷಿಸುತ್ತಿದೆ. ಜಿಲ್ಲಾ ಮಂತ್ರಿಯವರಂತೂ ಪತ್ತೆಯೇ ಇಲ್ಲ. ಸಂಸದರು ಬಂದರೂ ಸಚಿವರು ಬಾರಲಿಲ್ಲ ಎಂದರು.
ಇನ್ನಾದರೂ ಆಡಳಿತ ಯಂತ್ರ ಚುರುಕು ಗೊಳ್ಳಬೇಕು. ಹಾನಿಗೊಳಗಾದವರಿಗೆ ಪರಿಹಾರ ನೀಡಬೇಕು. ಬಡವರಿಗೆ ಆಹಾರದ ಕಿಟ್ ನೀಡಬೇಕು. ಅವೈಜ್ಞಾನಿಕವಾಗಿ ವಿಧಿಸಿರುವ ಆಸ್ತಿ ತೆರಿಗೆ, ನೀರಿನ ಕಂದಾಯ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುತ್ತದೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಪ್ರಮುಖರಾದ ಚಂದ್ರಭೂಪಾಲ್, ರಾಮೇಗೌಡ, ರೇಖಾ ರಂಗನಾಥ್, ಯಮುನಾ ರಂಗೇಗೌಡ, ವೈ.ಎಚ್. ನಾಗರಾಜ್, ಡಾ| ಶ್ರೀನಿವಾಸ ಕರಿಯಣ್ಣ, ವಿನಾಯಕ ಮೂರ್ತಿ, ಚಂದನ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
MUST WATCH
ಹೊಸ ಸೇರ್ಪಡೆ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ
Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ
Desi Swara:ಸಿಟಿ ಆಫ್ ವಿಂಡ್ಸ್ ಕ್ಯಾಸ್ಪಿಯನ್: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ
Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ