ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಪೈಪ್ ಲೈನ್ ಜೋಡಣೆ : ಅಧಿಕಾರಿಗಳಿಂದ ತಡೆ


Team Udayavani, May 23, 2022, 11:27 AM IST

5

ಗಂಗಾವತಿ: ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ನಿಯಮಗಳನ್ನು ಉಲ್ಲಂಘಿಸಿ ಖಾಸಗಿ ಲೇಔಟ್ ಗಳ ಮಾಲೀಕರು ನಗರದಲ್ಲಿ ನಡೆಯುತ್ತಿರುವ ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಚರಂಡಿ ನೀರು ಹೋಗುವ ಪೈಪ್ ಜೋಡಿಸುವ ಕಾರ್ಯಕ್ಕೆ ಸಾರ್ವಜನಿಕರ ಆಕ್ಷೇಪದ ಹಿನ್ನೆಲೆ ನಗರಸಭೆಯ ಅಧಿಕಾರಿಗಳು ಕಾಮಗಾರಿಯನ್ನು ತಡೆ ಹಿಡಿದಿದ್ದಾರೆ.

ನಗರಸಭೆ ವ್ಯಾಪ್ತಿಯ ಸಿದ್ದಿಕೇರಿ ಬೈಪಾಸ್ ನಲ್ಲಿ ಹಲವು ಲೇಔಟ್ ಗಳಿದ್ದು ಇದರಲ್ಲಿ ಕೆಲ ಲೇಔಟ್ ಮಾಲೀಕರು ಪೌರಾಡಳಿತ ಮತ್ತು ನಗರ ಯೋಜನಾ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿ ಶೇಕಡಾ 100 ರಷ್ಟು ಲೇಔಟ್ ಗಳ ಅಭಿವೃದ್ಧಿ ಮಾಡದೆ ಖಾಸಗಿ ಲೇಔಟ್ ನ ಚರಂಡಿ ನೀರು ಹೋಗುವ ಪೈಪ್ ಗಳನ್ನು ಸರ್ಕಾರದ ಯುಜಿಡಿ ಪೈಪ್ ಲೈನ್ ಗೆ ಜೋಡಿಸುತ್ತಿದ್ದು ಇದನ್ನು ಸಾರ್ವಜನಿಕರು ವಿರೋಧಿಸಿದ್ದಾರೆ.

ಕೆಲ ಖಾಸಗಿ ಲೇಔಟ್ ಮಾಲೀಕರು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಕೋಟ್ಯಂತರ ರೂ. ಲಾಭ ಮಾಡಿಕೊಳ್ಳುತ್ತಿದ್ದು, ನಗರಸಭೆಯ ಶುಲ್ಕವನ್ನು ಭರಿಸದೆ ಶೇಕಡಾ 100ರಷ್ಟು ಲೇಔಟ್ ಗಳ ಅಭಿವೃದ್ಧಿ ಮಾಡದೆ ಅಕ್ರಮವಾಗಿ ಲೇಔಟ್ ನ  ಚರಂಡಿ ನೀರಿನ ಪೈಪ್ ಲೈನುಗಳನ್ನು ನಗರಸಭೆಯ ಒಳಚರಂಡಿ ಮತ್ತು ನೀರು ಸರಬರಾಜು ಇಲಾಖೆ ನಡೆಸುತ್ತಿರುವ ಪೈಪ್ ಲೈನ್ ಗೆ ಜೋಡಣೆ ಮಾಡುತ್ತಾರೆ. ಇದರಿಂದ ಈಗಿರುವ ಯೋಜನೆಯ ಪೈಪ್ ಗಳಿಗೆ ಹೆಚ್ಚಿನ ಒತ್ತಡ ಬಿದ್ದು ಇಡೀ ಯುಜಿಡಿಯ ಯೋಜನೆ ಹಾಳಾಗುವ ಸಂಭವವಿದೆ.

ನಿಯಮದಂತೆ ಖಾಸಗಿ ಲೇಔಟ್ ಮಾಲೀಕರು ಶೇಕಡಾ 100 ರಷ್ಟು ರಸ್ತೆ, ಚರಂಡಿ, ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಮಾಡಿ ನಗರಸಭೆ ಶುಲ್ಕವನ್ನು ಭರಿಸಿ ಖಾಸಗಿ ಲೇಔಟ್ ನ ಪೈಪ್ ಗಳನ್ನು ಯುಜಿಡಿ ಪೈಪ್ ಗೆ ಜೋಡಣೆ ಮಾಡಬೇಕು. ಆದರೆ ಕೆಲವು ಲೇಔಟ್ ಗಳ ಮಾಲೀಕರು ನಿಯಮಗಳನ್ನು ಗಾಳಿಗೆ ತೂರಿ ನಗರಸಭೆಗೆ ಸರಿಯಾಗಿ ಶುಲ್ಕವನ್ನು ಬರೆಸದೆ ತಮ್ಮ ಲೇಔಟ್ ನ ಚರಂಡಿ ನೀರು ಇತರೆ ನೀರಿನ ಪೈಪ್ ಗಳನ್ನು ಯುಜಿಡಿಗೆ ಜೋಡಣೆ ಮಾಡುತ್ತಿದ್ದಾರೆ. ಪರವಾನಗಿ ಇಲ್ಲದೆ ರಸ್ತೆ ಅಗೆದು ಪೈಪ್ ಗಳನ್ನು ಹಾಕುವ ಕಾರ್ಯ ಮಾಡುತ್ತಿದ್ದಾರೆ.

ಸಿದ್ದಿಕೇರಿ ಬೈಪಾಸ್ ರಸ್ತೆಯಲ್ಲಿ ರವಿವಾರ ರಸ್ತೆ ಖಾಸಗಿ ಲೇಔಟ್ ನ ನೀರಿನ ಪೈಪ್ ಗಳನ್ನು ಯುಜಿಡಿಗೆ ಜೋಡಿಸುವ ಕಾರ್ಯ ನಡೆಸಲಾಗುತ್ತಿದ್ದು ಇದನ್ನು ಕಂಡು ಸಾರ್ವಜನಿಕರು ನಗರಸಭೆಯ ಪೌರಾಯುಕ್ತರಿಗೆ ದೂರು ನೀಡಿದ್ದರಿಂದ ನಗರಸಭೆಯ ನೈರ್ಮಲ್ಯ ಮತ್ತು ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕಾಮಗಾರಿಯನ್ನು ನಿಲ್ಲಿಸಿದ್ದಾರೆ.

ಎಚ್ಚರಿಕೆ: ನಗರದಲ್ಲಿರುವ ಖಾಸಗಿ ಲೇಔಟ್ ನ ಮಾಲೀಕರು ಕೂಡಲೇ ಸರ್ಕಾರದ ನಿಯಮದಂತೆ ಶೇಕಡ ನೂರರಷ್ಟು ಅಭಿವೃದ್ಧಿ ಮಾಡಿ ನಂತರ ನಗರಸಭೆಯ ಶುಲ್ಕವನ್ನು ಭರಿಸಿ ನಗರಸಭೆಯ ಪರವಾನಗಿಯೊಂದಿಗೆ ಯುಜಿಡಿ ಸಂಪರ್ಕ ಜೋಡಣೆ ಮಾಡಬೇಕು. ಅದನ್ನು ಬಿಟ್ಟು ಏಕಾಏಕಿ ನಿಯಮ ಉಲ್ಲಂಘಿಸಿ ಖಾಸಗಿ ಲೇಔಟ್ ನ ನೀರಿನ ಪೈಪ್ ಗಳನ್ನು ಚರಂಡಿಯ ಪೈಪ್ ಗಳನ್ನು ಯುಜಿಡಿಗೆ ಜೋಡಣೆ ಮಾಡಿದರೆ ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಸಿದ್ದಿಕೇರಿ ಬೈಪಾಸ್ ರಸ್ತೆಯಲ್ಲಿ ಖಾಸಗಿ ಲೇಔಟ್ ನ ಮಾಲಿಕರು ಯುಜಿಡಿ ಪೈಪ್ ಗೆ ತಮ್ಮ ಲೇಔಟ್ ನ ಪೈಪ್ ಜೋಡಣೆ ಕಾರ್ಯ ಮಾಡುತ್ತಿದ್ದರು. ಈ ಕುರಿತು ಪೌರಾಯುಕ್ತರು ಸೂಚನೆ ನೀಡಿದ್ದರಿಂದ ಸ್ಥಳಕ್ಕೆ ಆಗಮಿಸಿ ಕಾಮಗಾರಿ ನಿಲ್ಲಿಸಲಾಗಿದೆ ಎಂದು ನಗರಸಭೆಯ ಎಂಜಿನಿಯರ್ ಗುರುರಾಜ್ ದಾಸನಾಳ ಉದಯವಾಣಿ ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.