ಹಳ್ಳಿ ಹಳ್ಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

ವಿದ್ಯಾರ್ಥಿಗಳಿಗೆ ಅಂತರ್ಜಾಲದ ಮೂಲಕ ಸಂಪೂರ್ಣ ಮಾಹಿತಿ ಲಭ್ಯ: ಸಹಾಯಕ ಆಯುಕ್ತೆ ಮಮತಾದೇವಿ

Team Udayavani, May 23, 2022, 12:38 PM IST

9

ಭಟ್ಕಳ: ನಗರದ ನ್ಯೂ ಇಂಗ್ಲೀಷ್‌ ಶಾಲೆಯ ಕಮಲಾವತಿ ರಾಮನಾಥ ಶಾನಭಾಗ ಸಭಾಂಗಣದಲ್ಲಿ ಸ್ಪಂದನಾ ಚ್ಯಾರಿಟೇಬಲ್‌ ಟ್ರಸ್ಟ್‌ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಯನ್ನು ಸಹಾಯಕ ಆಯುಕ್ತೆ ಮಮತಾ ದೇವಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ನಿಖರವಾದ ಗುರಿ ಹೊಂದುವುದರ ಮೂಲಕ ಕಠಿಣ ಪರಿಶ್ರಮದಿಂದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಉತ್ತಿರ್ಣರಾಗಬಹುದು. ಐಎಎಸ್‌, ಐಪಿಎಸ್‌ ಪರೀಕ್ಷೆಯ ತರಬೇತಿ ಪಡೆಯಲು ದೊಡ್ಡ ನಗರಗಳಿಗೆ ಹೋಗಬೇಕೆಂದೇನೂ ಇಲ್ಲ. ಸ್ಥಳೀಯವಾಗಿಯೇ ಅಂತಹ ತರಬೇತಿ ಪಡೆದು ಉತ್ತೀರ್ಣರಾಗಬಹುದು, ಅಂತರ್ಜಾಲದ ಮೂಲಕ ನಮ್ಮ ಕೈಯಲ್ಲೆ ಎಲ್ಲ ಮಾಹಿತಿಗಳೂ ದೊರಕುತ್ತಿದ್ದು ಅದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರದಲ್ಲಿರುವ ವಿದ್ಯಾರ್ಥಿಗಳೇ ತರಬೇತಿ ಪಡೆಯುತ್ತಿದ್ದು ಈಗ ಅದನ್ನು ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ತಿಳಿಸಿ ತರಬೇತಿ ನೀಡುತ್ತಿರುವ ಭಟ್ಕಳ ಸ್ಪಂದನ ಸಂಸ್ಥೆ ಕಾರ್ಯ ಶ್ಲಾಘಿಸಿದ ಅವರು, ಮುಂದಿನ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕುರಿತು ತರಬೇತಿ ನೀಡಲು ನಾನೂ ಕೂಡಾ ಸಿದ್ಧಳಿದ್ದೇನೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಬೇಕು ಎನ್ನುವ ಭಾವನೆ ಬಿಟ್ಟು ಸತತ ಪ್ರಯತ್ನ ಮಾಡಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಎಂದು ಕಿವಿ ಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸ್ಪಂದನ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರಿನ ಇಂಡಿಯಾ ಫಾರ್‌ ಐಎಎಸ್‌ ಸಂಸ್ಥೆಯ ಸೈಯದ್‌ ಸದತ್‌ ಮತ್ತು ಅಮನ್‌ ಜೈನ್‌ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ನೀಡಿದರು.

ಸ್ಪಂದನೆ ಸಂಸ್ಥೆ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ ವಂದಿಸಿದರು. ಶಿಕ್ಷಕ ಪರಮೇಶ್ವರ ನಾಯ್ಕ ನಿರೂಪಿಸಿದರು. ಸ್ಪಂದನ ಸಂಸ್ಥೆಯ ಪಾಂಡುರಂಗ ನಾಯ್ಕ, ಭಾಸ್ಕರ ನಾಯ್ಕ, ಶಿವಾನಂದ ನಾಯ್ಕ, ರಾಜೇಶ ನಾಯ್ಕ, ಮಹೇಶ ನಾಯ್ಕ ಮತ್ತಿತರರು ಸಹಕರಿಸಿದರು. ತರಬೇತಿಯಲ್ಲಿ ತಾಲೂಕಿನ ವಿವಿಧ ಪ್ರದೇಶದಿಂದ 300ಕ್ಕೂ ಅಧಿಕ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.