ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌: ಹೊಸಬರ ಕಿಕ್‌ ಸ್ಟಾರ್ಟ್‌


Team Udayavani, May 23, 2022, 4:18 PM IST

Yuvadheera’s Good Gooder Goodest film muhurtha

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಸಿನಿಮಾಕ್ಕೆ ಇತ್ತೀಚೆಗೆ ಚಾಲನೆ ದೊರೆಕಿತು. ಬೆಂಗಳೂರಿನ ವೀರಾಂಜನೇಯ ಸ್ವಾಮಿ ದೇಗುಲದಲ್ಲಿ ನಡೆದ “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ “ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌’ ರಿಯಾಲಿಟಿ ಶೋ ವಿನ್ನರ್‌ ಚೈತ್ರಾಲಿ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ಭರತನಾಟ್ಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಅಂಧ ಕಲಾವಿದ ಬೂಸೆ ಗೌಡ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಕಳೆದ ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿ ಸಂಭಾಷಣೆಕಾರನಾಗಿ ಗುರುತಿಸಿಕೊಂಡಿರುವ ಯುವಧೀರ, “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಸಿನಿಮಾ ಮೂಲಕ ನಿರ್ದೇಶನ ಮತ್ತು ನಾಯಕ ನಟನಾಗಿ ಸ್ಯಾಂಡಲ್‌ವುಡ್‌ ಗೆ ಪರಿಚಯವಾಗುತ್ತಿದ್ದಾರೆ.

ಮುಹೂರ್ತದ ಬಳಿಕ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಯುವಧೀರ, “ಕಳೆದ ಹದಿನೈದು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯನಾಗಿದ್ದೇನೆ. “ಮಿಂಚು’, “ಜಾನಿ ಜಾನಿ ಎಸ್‌ ಪಪ್ಪಾ’ ಸೇರಿದಂತೆ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ನನ್ನ ಮೊದಲ ಸಿನಿಮಾ. ಒಂದೇ ಕಥೆ ಮೂರು ಡಿಫ‌ರೆಂಟ್‌ ಟ್ರಾಫಿಕ್‌ನಲ್ಲಿ ನಡೆಯುತ್ತದೆ. ಇದು ಯಾವುದೋ ಒಂದು ಜಾನರ್‌ಗೆ ಸೀಮಿತವಾದ ಸಿನಿಮಾವಲ್ಲ. ಇದೊಂದು ಡಾರ್ಕ್‌ ಹ್ಯೂಮರ್‌ ಸೆಟೈರ್‌ ಕಾಮಿಡಿ ಸಿನಿಮಾವಾಗಿದ್ದು, ಜೊತೆಗೆ ರೊಮ್ಯಾನ್ಸ್‌, ಥ್ರಿಲ್ಲರ್‌, ಡ್ರಾಮಾ, ಕ್ರೈಂ, ಆ್ಯಕ್ಷನ್‌ ಕೂಡ ಒಳಗೊಂಡಿದೆ’ ಎಂದರು

ಇದನ್ನೂ ಓದಿ:‘ಓ ಮೈ ಲವ್‌’ ಗೆ ಕೆ.ರಾಘವೇಂದ್ರ ರಾವ್‌ ಮೆಚ್ಚುಗೆ

ಇನ್ನು ನಿರ್ದೇಶಕ ಯುವಧೀರ ಸಿನಿಮಾದಲ್ಲಿ ನಾಯಕನಾಗಿಯೂ ಅಭಿನಯಿಸುತ್ತಿದ್ದು, ಇವರಿಗೆ ಜೋಡಿಯಾಗಿ ಆದ್ಯಾ ಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಸೋನು ಗೌಡ, ಪ್ರಮೋದ್‌ ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ, ಸುಚೇಂದ್ರ ಪ್ರಸಾದ್‌, ವಿ. ಮನೋಹರ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

“ಶ್ರೀನಿಧಿ ಪಿಕ್ಚರ್’ ಬ್ಯಾನರ್‌ ತಯಾರಾಗುತ್ತಿರುವ “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಚಿತ್ರಕ್ಕೆ ಬಿಲ್ಡರ್‌ ಆಗಿರುವ ಸುರೇಶ್‌ ಬಿ. ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಚಿತ್ರಕ್ಕೆ ಸಂದೀಪ್‌ ಹೊಲ್ಲೂರಿ ಛಾಯಾಗ್ರಹಣ, ಕಿರಣ್‌ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಶಶಾಂಕ್‌ ಶೇಷಗಿರಿ ಸಂಗೀತ ಸಂಯೋಜನೆಯಿದೆ. ಬೆಂಗಳೂರು, ಮಂಗಳೂರು, ಮೈಸೂರು ಸುತ್ತಮುತ್ತ ಸುಮಾರು 45 ದಿನಗಳ ಕಾಲ “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಸಿನಿಮಾದ ಶೂಟಿಂಗ್‌ ನಡೆಸಲು ಚಿತ್ರ ಯೋಜನೆ ಹಾಕಿಕೊಂಡಿದೆ

ಟಾಪ್ ನ್ಯೂಸ್

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.