ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ


Team Udayavani, May 23, 2022, 10:30 PM IST

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಪ್ಯಾರಿಸ್‌: ಮಾಜಿ ನಂಬರ್‌ ವನ್‌ ಜಪಾನಿನ ನವೋಮಿ ಒಸಾಕಾ ಮಾತ್ರವಲ್ಲದೇ ಹಾಲಿ ಚಾಂಪಿಯನ್‌ ಮತ್ತು ದ್ವಿತೀಯ ಶ್ರೇಯಾಂಕದ ಕ್ರೆಜಿಸಿಕೋವಾ ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ ಕೂಟದ ಮೊದಲ ಸುತ್ತಿನಲ್ಲಿಯೇ ಸೋಲನ್ನು ಕಂಡಿದ್ದಾರೆ.

ಬಹಳಷ್ಟು ಅನಗತ್ಯ ತಪ್ಪುಗಳನ್ನು ಮಾಡಿದ ಒಸಾಕಾ ಅವರನ್ನು ಅಮೆರಿಕದ ಅಮಂಡಾ ಅನಿಸಿಮೋವಾ 7-5, 6-4 ಸೆಟ್‌ಗಳಿಂದ ಸುಲಭವಾಗಿ ಮಣಿಸಿದರು. ಅನಿಸಿಕೋವಾ 2019ರಲ್ಲಿ ಇಲ್ಲಿ ಸೆಮಿಫೈನಲ್‌ ತಲುಪಿದ್ದರು.
ಒಸಾಕಾ ಕಳೆದ ವರ್ಷ ಕಡ್ಡಾಯ ಮಾಧ್ಯಮ ಬದ್ಧತೆಯ ಗೌರವ ಪಾಲಿಸಲು ನಿರಾಕರಿಸಿದ್ದರಿಂದ ಅವರಿಗೆ ದಂಡ ವಿಧಿಸಲಾಗಿತಲ್ಲದೇ ಆ ವರ್ಷ ಫ್ರೆಂಚ್‌ ಓಪನ್‌ ಆಡದಂತೆ ನಿಷೇಧ ಹೇರಲಾಗಿತ್ತು. ಖನ್ನತೆಯಿಂದ ಬಳಲುತ್ತಿದ್ದ ಕಾರಣ ಮಾಧ್ಯಮದ ಜತೆ ಮಾತನಾಡಲು ಸಾಧ್ಯವಾಗಿರಲಿಲ್ಲ ಎಂದು ಅವರು ಆಬಳಿಕ ತಿಳಿಸಿದ್ದರು.

ಹಾಲಿ ಚಾಂಪಿಯನ್‌ಗೆ ಸೋಲು
ಹಾಲಿ ಚಾಂಪಿಯನ್‌ ಆಗಿರುವ ಬಾಬೊìರಾ ಕ್ರೆಜಿಸಿಕೋವಾ ಮೂರು ಸೆಟ್‌ಗಳ ಹೋರಾಟದಲ್ಲಿ ಸೋತು ಹೊರಬಿದ್ದಿದ್ದಾರೆ. ಅವರು ಫ್ರಾನ್ಸ್‌ನ ಹದಿಹರೆಯದ ಡಿಯಾನೆ ಪೆರ್ರಿ ಅವರ ಕೈಯಲ್ಲಿ 1-6, 6-2, 6-3 ಸೆಟ್‌ಗಳಿಂದ ಸೋಲನ್ನು ಕಂಡರು. ಮೊಣಕೈ ಗಾಯದಿಂದಾಗಿ ಅವರು ಕಳೆದ ಫೆಬ್ರವರಿ ಬಳಿಕ ಇಷ್ಟರವರೆಗೆ ಟೆನಿಸ್‌ನಿಂದ ದೂರ ಉಳಿದಿದ್ದರು.

ಫ್ರೆಂಚ್‌ ಓಪನ್‌ ಫೇವರಿಟ್‌ ಇಗಾ ಸ್ವಿಯಾಟೆಕ್‌ ಸುಲಭ ಗೆಲುವಿನೊಂದಿಗೆ ದ್ವಿತೀಯ ಸುತ್ತಿಗೇರಿದ್ದಾರೆ. ಉಕ್ರೈನಿನ ಅರ್ಹತಾ ಆಟಗಾರ್ತಿ ಲೆಸಿಯಾ ಟಿಸುರೆಂಕೊ ಅವರನ್ನು 6-2, 6-0 ಸೆಟ್‌ಗಳಿಂದ ಉರುಳಿಸಿದ ಅವರು ತನ್ನ ಸತತ ಗೆಲುವಿನ ಅಭಿಯಾನವನ್ನು 29 ಪಂದ್ಯಗಳಿಗೆ ವಿಸ್ತರಿಸಿದರು.

ವಿಶ್ವದ ನಂಬರ್‌ ವನ್‌ ಆಟಗಾರ್ತಿ ಯಾಗಿರುವ ಸ್ವಿಯಾಟೆಕ್‌ ಕಳೆದ ಐದು ಕೂಟಗಳಲ್ಲಿ ಪ್ರಶಸ್ತಿ ಜಯಿಸಿದ್ದಲ್ಲದೇ ಮೂರನೇ ಪ್ರಯತ್ನದಲ್ಲಿ ಎರಡನೇ ಫ್ರೆಂಚ್‌ ಓಪನ್‌ ಗೆಲ್ಲುವ ಗುರಿ ಇಟ್ಟುಕೊಂಡಿದ್ದಾರೆ. ಕಳೆದ ಫೆಬ್ರವರಿಯಿಂದ ಅಜೇಯ ಸಾಧನೆ ಮುಂದುವರಿಸಿರುವ ಸ್ವಿಯಾಟೆಕ್‌ ಡಬ್ಲ್ಯುಟಿಎ ಟೂರ್‌ನಲ್ಲಿ ಎರಡನೇ ದೀರ್ಘ‌ ಪಂದ್ಯಗಳ ಗೆಲುವಿನ ದಾಖಲೆಯನ್ನು ಹೊಂದಿದ್ದಾರೆ. 2013ರಲ್ಲಿ ಸತತ 34 ಪಂದ್ಯ ಗೆದ್ದಿರುವ ಸೆರೆನಾ ವಿಲಿಯಮ್ಸ್‌ ಮೊದಲ ಸ್ಥಾನದಲ್ಲಿದ್ದಾರೆ.

ಡೊಮಿನಿಕ್‌ ಥೀಮ್‌ಗೆ ಸೋಲು
ಎರಡು ಬಾರಿಯ ರನ್ನರ್‌ ಅಪ್‌ ಡೊಮಿನಿಕ್‌ ಥೀಮ್‌ ಅವರು ಬೊಲಿವಿಯಾದ ಹುಗೊ ಡೆಲ್ಲೀನ್‌ ಅವರ ಕೈಯಲ್ಲಿ 6-3, 6-2, 6-4 ಸೆಟ್‌ಗಳಿಂದ ಸೋಲನ್ನು ಕಂಡಿದ್ದಾರೆ. 2020ರ ಯುಎಸ್‌ ಚಾಂಪಿಯನ್‌ ಆಗಿದ್ದ ಥೀಮ್‌ ಗಾಯದ ಸಮಸ್ಯೆಯಿಂದಾಗಿ ಹಲವು ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದಾರೆ.

ಟಾಪ್ ನ್ಯೂಸ್

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.