ಮಹಾನಗರ ಪಾಲಿಕೆ; ಇ-ಖಾತಾಗೆ ಸರ್ವರ್‌ ಸಮಸ್ಯೆ


Team Udayavani, May 24, 2022, 9:36 AM IST

policy

ಲಾಲ್‌ಬಾಗ್‌: ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲಕರ ಅಧಿಕೃತ ಹಾಗೂ ಅನಧಿಕೃತವಲ್ಲದ ನಿವೇಶನ, ಕಟ್ಟಡಗಳ ಆಸ್ತಿ ಹಕ್ಕಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ವಿವರವನ್ನು ದಾಖಲಿಸಿದ ಇ – ಖಾತಾ ಪಡೆಯಲು ಇದೀಗ ಸರ್ವರ್‌ ಸಮಸ್ಯೆ ಎದುರಾಗಿದೆ.

ಮಂಗಳೂರು ಪಾಲಿಕೆ ವ್ಯಾಪ್ತಿಯ ಹಲವು ಸೇವೆಗಳು ಆನ್‌ಲೈನ್‌ ಆಗಿದ್ದು, ಇ – ಖಾತಾ ಪಡೆಯಲು ಸಾರ್ವಜನಿಕರಿಗೆ ಕೆಲವು ಸಮಸ್ಯೆಗಳು ಹಾಗೂ ತಾಂತ್ರಿಕವಾದ ಸವಾಲುಗಳು ಎದುರಾಗುತ್ತಿದೆ. ಕೆಲವು ಸಮಯದಿಂದ ಇ – ಖಾತಾ ಪಡೆಯಲು ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆದರೆ ಈ ವ್ಯವಸ್ಥೆಯಲ್ಲಿ ಬಯೋಮೆಟ್ರಿಕ್‌ ತಾಳೆ ಆಗುತ್ತಿಲ್ಲ. ಇನ್ನು ಖಾತಾ ಪಡೆಯಲು ಗೌಪ್ಯತೆಯ ಕಾರಣಕ್ಕೆ ಒಟಿಪಿ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದ್ದು, ಕೆಲವೊಂದು ಬಾರಿ ಒಟಿಪಿಯೇ ಬರುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಪಾಲಿಕೆಯು ಕಳೆದ ವರ್ಷ ಆಸ್ತಿ ತೆರಿಗೆ ಪಾವತಿ ಮಾಡಲು ಡಿಜಿಟಲ್‌ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಸದ್ಯ ಅನೇಕ ಮಂದಿಗೆ ಆನ್‌ ಲೈನ್‌ ಮುಖೇನ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಆನ್‌ಲೈನ್‌ ಮುಖೇನ ಬಳಸಿಕೊಳ್ಳಲು ವೆಬ್‌ ಅಪ್ಲಿಕೇಶನ್‌ ಸಿದ್ಧಪಡಿಸಲಾಗಿದ್ದು, ಅದರಲ್ಲಿ ಈ ಹಿಂದೆ ಸಮಸ್ಯೆ ಉಂಟಾಗುತ್ತಿತ್ತು. ಆದರೆ, ಸದ್ಯ ತಕ್ಕಮಟ್ಟಿಗೆ ಸಮಸ್ಯೆ ನಿವಾರಣೆಯಾಗುತ್ತಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.

ಏನಿದು ಇ ಖಾತಾ?

ಗ್ರಾಮಾಂತರ ಭಾಗದಲ್ಲಿ ಆರ್‌ಟಿಸಿ ಇದ್ದ ಹಾಗೆ, ಪಾಲಿಕೆ ವ್ಯಾಪ್ತಿಯಲ್ಲಿ ಈ ಹಿಂದೆ ಖಾತಾ ನೀಡಲಾಗುತ್ತಿತ್ತು. ಬಳಿಕ ಕರ್ನಾಟಕ ಮುನ್ಸಿಪಲ್‌ ಡಾಟಾ ಸೊಸೈಟಿ ಹಾಗೂ ರಾಷ್ಟ್ರೀಯ ಸೂಚ್ಯಂಕ ಕೇಂದ್ರದ ಸಹಯೋಗದೊಂದಿಗೆ ಆಸ್ತಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಇ-ಖಾತಾ ಅನುಷ್ಠಾನಿಸಲಾಗಿದೆ.

ತಂತ್ರಾಂಶದ ಮೂಲಕ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತವಲ್ಲದ ಹಾಗೂ ಅಕ್ರಮ ಆಸ್ತಿಗಳ ಮಾಹಿತಿಯನ್ನು ದಾಖಲಿಸಲು/ತಿದ್ದುಪಡಿ ಮಾಡಲು ಆಸ್ತಿಗಳ ಮಾಲಕತ್ವ ಹಕ್ಕು ವರ್ಗಾವಣೆ ಮಾಡಲು ಹಾಗೂ ಆಸ್ತಿ ತೆರಿಗೆಯ ನಕಲನ್ನು ಡಿಜಿಟಲ್‌ ಸಹಿಯೊಂದಿಗೆ ತಂತ್ರಾಂಶದಿಂದ ಪಡೆಯಲು ಅವಕಾಶ ನೀಡಲಾಗಿದೆ.

ಸಮಸ್ಯೆ ಶೀಘ್ರ ಬಗೆಹರಿಯಲಿದೆ

ಪಾಲಿಕೆಯಲ್ಲಿ ಇ-ಖಾತ ಪಡೆದು ಕೊಳ್ಳಲು ಕೆಲವೊಂದು ತಾಂತ್ರಿಕ ಸಮಸ್ಯೆ ಎದುರಾಗಿದೆ. ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ರಾಜ್ಯದ ಅಧಿಕಾರಿಗಳ ಜತೆಗೂ ಚರ್ಚೆ ನಡೆಸಲಾಗಿದೆ. ಸದ್ಯದಲ್ಲಿಯೇ ಸಮಸ್ಯೆ ಬಗೆಹರಿಯಲಿದೆ. – ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.