11-12 ಲೆಕ್ಕಾಚಾರ; ಬಂಡಾಯದಲ್ಲಿ ಠುಸ್‌ ಮದ್ದಿನ ವಾಸನೆ

ಅವಿಶ್ವಾಸಕ್ಕೆ ನಾಂದಿ ಹಾಡಿದವರೇ ಯೂಟರ್ನ್?

Team Udayavani, May 24, 2022, 1:19 PM IST

14

ಮುಂಡರಗಿ: ತಿಂಗಳ ಹಿಂದೆಯಷ್ಟೇ ಅವಿಶ್ವಾಸದ ಮೂಲಕ ಕವಿತಾ ಉಳ್ಳಾಗಡ್ಡಿಯವರನ್ನು ಪುರಸಭೆ ಅಧ್ಯಕ್ಷ ಸ್ಥಾನದಿಂದ ಕೆಳಗಿಸಲಾಗಿತ್ತು. ಬಿಜೆಪಿ 14 ಸದಸ್ಯರು ಮತ್ತು ಕಾಂಗ್ರೆಸ್‌ನ 6 ಜನ ಸದಸ್ಯರು ಸೇರಿದಂತೆ ಒಟ್ಟು 20 ಪುರಸಭೆ ಸದಸ್ಯರು ಅವಿಶ್ವಾಸಕ್ಕೆ ನಾಂದಿ ಹಾಡಿ ಬಂಡಾಯದ ಬಾವುಟ ಹಾರಿಸಿದ್ದರು. ಉಪಾಧ್ಯಕ್ಷ ಶಿವಪ್ಪ ಚಿಕ್ಕಣ್ಣವರ ಪ್ರಭಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

ಅಧ್ಯಕ್ಷ ಸ್ಥಾನವು ಹಿಂದುಳಿದ ಬ ವರ್ಗದ ಮಹಿಳೆಗೆ ಮೀಸಲಾಗಿದ್ದು, ಈ ವರ್ಗಕ್ಕೆ ಸೇರಿರುವ ಜ್ಯೋತಿ ಹಾನಗಲ್ಲ ಮತ್ತು ಕವಿತಾ ಉಳ್ಳಾಗಡ್ಡಿಯವರ ಮಧ್ಯೆ ಸ್ಪರ್ಧೆ ಏರ್ಪಡಲಿದೆ. ಇದರ ಮಧ್ಯೆಯೇ ಬಂಡಾಯದ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಕೆಲವು ಸದಸ್ಯರು ಮತ್ತೆ ಕವಿತಾ ಉಳ್ಳಾಗಡ್ಡಿಯೇ ಅಧ್ಯಕ್ಷರಾಗಲಿ ಎನ್ನುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ಬಂಡಾಯದ ಕೋಣೆಯಲ್ಲಿ ಠುಸ್‌ ಮದ್ದಿನ ವಾಸನೆ ಹೊಡೆಯತೊಡಗಿದೆ. ಬಂಡಾಯದ ಬಾವುಟ ಹಾರಿಸಿದ್ದವರ ಮೊದಲಿನ ಉತ್ಸಾಹ ಉಳಿದಿಲ್ಲ.

ಮೇ 24ರಂದು ಖಾಲಿ ಇರುವ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಂಡಾಯದ ಬಾವುಟ ಹಾರಿಸಿದ್ದ ಬಿಜೆಪಿ ಸದಸ್ಯರೇ ಮತ್ತೆ ಕವಿತಾ ಉಳ್ಳಾಗಡ್ಡಿ ಅಧ್ಯಕ್ಷರಾಗಲಿ ಎನ್ನುವ ಮನೋಭೂಮಿಕೆ ಸಿದ್ಧವಾಗಿದೆ. ರಾಜಕೀಯ ಒತ್ತಡ, ಬಿಜೆಪಿ ಪಕ್ಷದ ವರ್ಚಸ್ಸು, ಸಮುದಾಯದ ಪ್ರಭಾವಗಳು ಮತ್ತೆ ಕವಿತಾ ಉಳ್ಳಾಗಡ್ಡಿಯವರೇ ಅಧ್ಯಕ್ಷರಾಗಲಿ ಎನ್ನುವ ಸ್ಥಿತಿ ನಿರ್ಮಿಸಿದೆ. ಹೀಗಾಗಿ ಮತ್ತೆ ಕವಿತಾ ಉಳ್ಳಾಗಡ್ಡಿ ಅಧ್ಯಕ್ಷರಾಗುವ ಸಾಧ್ಯತೆ ಅಲ್ಲಗೆಳೆಯುವಂತೆ ಇಲ್ಲ.

ಅವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿ 14 ಜನ ಸದಸ್ಯರು ಮತ್ತು ಕಾಂಗ್ರೆಸ್‌ ಪಕ್ಷದ 6 ಜನ ಸದಸ್ಯರು ನೂತನ ಅಧ್ಯಕ್ಷೆಯಾಗಿ ಜ್ಯೋತಿ ಹಾನಗಲ್ಲ ಅವರನ್ನು ಆಯ್ಕೆ ಮಾಡುವಲ್ಲಿ ಒಲುವು ಹೊಂದಿದ್ದರು. ಆದರೆ ಬಂಡಾಯದ ಸದಸ್ಯರಲ್ಲಿಯೇ ಬಿರುಕು ಬಿಟ್ಟು ಕವಿತಾ ಉಳ್ಳಾಗಡ್ಡಿಯವರೇ ಮತ್ತೆ ಅಧ್ಯಕ್ಷರಾಗಲಿ ಎಂದು ಒಮ್ಮತ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

11-12 ಲೆಕ್ಕಾಚಾರ: ಪುರಸಭೆಯಲ್ಲಿ ಬಿಜೆಪಿಯ 16 ಸದಸ್ಯರು, ಕಾಂಗ್ರೆಸ್‌ನ 6 ಜನ ಸದಸ್ಯರು, ಓರ್ವ ಪಕ್ಷೇತರ ಸದಸ್ಯ ಸೇರಿ ಒಟ್ಟಾರೆ 23 ಸದಸ್ಯರಿದ್ದಾರೆ. 16 ಬಿಜೆಪಿ ಸದಸ್ಯರಲ್ಲಿ 12 ಜನ ಕವಿತಾ ಅವರನ್ನು ಬೆಂಬಲಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಶಾಸಕರು, ಸಂಸದರ ತಲಾ ಒಂದು ಮತಗಳು ಸೇರಿದರೇಒಟ್ಟು 14 ಮತಗಳು ಕವಿತಾ ಉಳ್ಳಾಗಡ್ಡಿ ಬೆಂಬಲಕ್ಕೆ ಬಂದರೆ ಅಧ್ಯಕ್ಷ ಸ್ಥಾನ ಮರಳಿ ಸಿಗಲಿದೆ. ಮೊದಲಿನಿಂದಲೂ ಬಂಡಾಯದ ಬಾವುಟ ಹಾರಿಸುತ್ತಲೇ ಬಂದಿರುವ ಜ್ಯೋತಿ ಹಾನಗಲ್ಲ ನೂತನ ಅಧ್ಯಕ್ಷೆಯಾಗಲು ತುದಿಗಾಲಿನಲ್ಲಿ ನಿಂತಿದ್ದಾರೆ. ಬಿಜೆಪಿಯ ಐವರು ಸದಸ್ಯರು, ಕಾಂಗ್ರೆಸ್‌ನ 6 ಸದಸ್ಯರು ಅವರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕೊನೆಯ ಕ್ಷಣದಲ್ಲಿ ಕವಿತಾ ಗುಂಪಿನಲ್ಲಿ ಇರುವವರು ಮನಸ್ಸು ಬದಲಿಸಿದರೆ ಜ್ಯೋತಿ ಹಾನಗಲ್ಲ ಪಟ್ಟಕ್ಕೇರುವ ಸಾಧ್ಯತೆ ಅಲ್ಲಗೆಳೆಯುವಂತೆ ಇಲ್ಲ. ಇವೆಲ್ಲಕ್ಕಿಂತ ಮುಖ್ಯವಾಗಿ ಯಾರೇ ಅಧ್ಯಕ್ಷರಾದರೂ ವ್ಯಕ್ತಿಗತ ಅಹಂ, ಪಕ್ಷ-ಜಾತಿ ಭೂತವನ್ನು ಬದಿಗಿಟ್ಟು ಪಟ್ಟಣದ ಅಭಿವೃದ್ಧಿ ಕಡೆಗೆ ಲಕ್ಷ್ಯ ವಹಿಸಬೇಕಿದೆ.

ಪಟ್ಟಣದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ, ಜಾತ್ಯತೀತವಾಗಿ ಅವಿಶ್ವಾಸದ ಮೂಲಕ ಅಧ್ಯಕ್ಷರನ್ನು ಕೆಳಗಿಸಲಾಗಿತ್ತು. ಆದರೆ ಅವಿಶ್ವಾಸ ಮಾಡಿದವರು ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ. ಸಚಿವ, ಶಾಸಕರು ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡು ಮತ್ತೆ ಕವಿತಾ ಅವರನ್ನು ಅಧ್ಯಕ್ಷೆ ಮಾಡಲು ಹೊರಟಿದ್ದಾರೆ. ಇದರಿಂದ ಪಟ್ಟಣದ ಅಭಿವೃದ್ಧಿಗೆ ಕೊಡಲಿ ಪೆಟ್ಟು ಬೀಳಲಿದೆ. ನಾಗರಾಜ ಹೊಂಬಳಗಟ್ಟಿ, ಕಾಂಗ್ರೆಸ್‌ ಸದಸ್ಯ

ಮೇ 24ರಂದು ನಡೆಯುವ ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯವರೇ ಅಧ್ಯಕ್ಷರಾಗುತ್ತಾರೆ. ಇದರಲ್ಲಿ ಯಾವುದೇ ಸಂದೇಹ ಬೇಡ. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಲಾಗುವುದು. ಹೇಮಗಿರೀಶ ಹಾವಿನಾಳ, ಬಿಜೆಪಿ ಮಂಡಲ ಅಧ್ಯಕ್ಷ

-ಹು.ಬಾ. ವಡ್ಡಟಿ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.