ಪೂರ್ಣ ಕಾಮಗಾರಿಗಳ ದೃಢೀಕರಣ ಪತ್ರ ಸಲ್ಲಿಸಿ

ಕಾಮಗಾರಿ ಕ್ರಿಯಾ ಯೋಜನೆ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಪಂ ಸಿಇಒ ಜಿ. ಪ್ರಭು ಸೂಚನೆ

Team Udayavani, May 24, 2022, 4:51 PM IST

letter

ಚಿಕ್ಕಮಗಳೂರು: ಪೂರ್ಣಗೊಂಡ ಕಾಮಗಾರಿಗಳ ದೃಢೀಕರಣ ಪತ್ರ ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಪಂ ಸಿಇಒ ಜಿ.ಪ್ರಭು ಸೂಚಿಸಿದರು.

ಇತ್ತೀಚೆಗೆ ನಗರದ ಜಿಪಂ ಸಭಾಂಗಣದಲ್ಲಿ 2022-23ನೇ ಸಾಲಿನ ವಿವಿಧ ಇಲಾಖೆಗಳ ಕಾಮಗಾರಿ ಕ್ರಿಯಾ ಯೋಜನೆ ಸಿದ್ಧತೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವ ಹಿಸಿ ಅವರು ಮಾತನಾಡಿದರು. ಕಾಮಗಾರಿಗಳ ವೆಚ್ಚದ ಸುಳ್ಳು ಲೆಕ್ಕ ತೋರಿಸಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ.

ಕಳೆದ ವರ್ಷ ಪೂರ್ಣಗೊಂಡ ಕಾಮಗಾರಿಗಳ ದೃಢೀಕರಣ ಪತ್ರ ಸಲ್ಲಿಸುವಂತೆ ತಿಳಿಸಿದರು. 2022-23ನೇ ಸಾಲಿನಲ್ಲಿ ಜಿಪಂಗೆ 5.41ಕೋಟಿ ರೂ. ಹಾಗೂ ಪ್ರತೀ ತಾಪಂಗೆ 2.21 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಮೇ 28ರೊಳಗೆ ಸರ್ಕಾರಕ್ಕೆ ಕ್ರಿಯಾ ಯೋಜನೆ ವರದಿ ಸಲ್ಲಿಸಬೇಕಿದೆ. ಪ್ರತೀ ಇಲಾಖೆ ಕೈಗೊಳ್ಳುತ್ತಿರುವ ಕಾಮಗಾರಿಗಳ ಸಮಗ್ರ ವರದಿಯನ್ನು ಸಲ್ಲಿಸುವಂತೆ ಹೇಳಿದರು. ಶೇ.25ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಡಲಾಗಿದೆ. ಪ್ರತೀ ಗ್ರಾಪಂ ಮಾದರಿ ಶಾಲೆ ನಿರ್ಮಿಸಲು ನರೇಗಾ ಯೋಜನೆಯಡಿ ಶಾಲೆಗಳಿಗೆ ಕಾಂಪೌಂಡ್‌ ನಿರ್ಮಾಣ ಮತ್ತು ಮೇಜು ಹಾಗೂ ಪರಿಕರಗಳನ್ನು ಒದಗಿಸುವಂತೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಜಿಪಂ ಮತ್ತು ತಾಪಂ 350ಲಕ್ಷ ರೂ.ಮೀಸಲಿಡಲಾಗುವುದು ಎಂದ ಅವರು, ಜಿಲ್ಲೆಯಲ್ಲಿ ಬಾಕಿ ಇರುವ 62 ಅಂಗನವಾಡಿಗಳ ದುರಸ್ತಿ ಪೂರ್ಣಗೊಂಡಲ್ಲಿ 1825 ಸುಸಜ್ಜಿತ ಅಂಗನವಾಡಿಗಳನ್ನು ಹೊಂದಿರುವ ಪ್ರಥಮ ಜಿಲ್ಲೆಯಾಗಲಿದೆ ಎಂದು ತಿಳಿಸಿದರು.

ಆರೋಗ್ಯ ಕ್ಷೇತ್ರಕ್ಕೆ ಜಿಪಂನಿಂದ 54ಲಕ್ಷ ರೂ., ಪ್ರತಿ ತಾಪಂಗೆ 22ಲಕ್ಷ ರೂ. ಮೀಸಲಿಡಲಾಗುತ್ತಿದೆ. ಸಮುದಾಯ ಆರೋಗ್ಯ ಕೇಂದ್ರಗಳ ದುರಸ್ತಿ, ಕಾಂಪೌಂಡ್‌ ನಿರ್ಮಾಣ, ಪೀಠೊಪಕರಣಗಳ ಖರೀದಿಸಲು ವರದಿ ನೀಡಬೇಕು ಎಂದರು.

ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ 100 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಶೇ.10 ರಷ್ಟು ಮೀರದಂತೆ ಬಳಕೆ ಮಾಡಬೇಕು. ಅಂಗವಿಕಲರ ಕಲ್ಯಾಣಕ್ಕಾಗಿ 120ಲಕ್ಷ ರೂ. ಅನುದಾನ ನೀಡಲಾಗುತ್ತಿದ್ದು, ಅಂಗವಿಕಲ ಸಮುದಾಯದ ಪೂರಕವಾಗಿ ಶಾಶ್ವತ ಸಹಾಯಕ್ಕಾಗಿ ಸಮಗ್ರ ವರದಿ ನೀಡಲು ಅವರು ತಿಳಿಸಿದರು.

ಆಶಾಕಿರಣ ಅಂಧ ಮಕ್ಕಳ ಶಾಲೆಯು ಮಾದರಿಯಾಗಿದ್ದು, ಇಲ್ಲಿನ ವಿದ್ಯಾರ್ಥಿಗಳು ಪ್ಯಾರಾ ಒಲಂಪಿಕ್ಸ್‌ನ ಕ್ರೀಡೆಗಳಲ್ಲಿ ಭಾರತವನ್ನು ಪ್ರತಿನಿಧಿಸಿ 4ಕ್ಕೂ ಹೆಚ್ಚು ಪದಕಗಳನ್ನು ಪಡೆದಿದ್ದಾರೆ. ಪ್ರತಿವರ್ಷ ಹೆಚ್ಚಾಗಿ ವಿದ್ಯಾರ್ಥಿಗಳು ದಾಖಲಾತಿ ಹೊಂದದೇ ಇರುವುದರಿಂದ ಪ್ರತಿ ತಾಪಂ ಕಾರ್ಯನಿರ್ವಾಹಣಾಧಿಕಾರಿಗಳು ತಮ್ಮ ತಾಲೂಕಿನಲ್ಲಿ ತಲಾ 20 ಅಂಧ ಮಕ್ಕಳನ್ನು ಶಾಲೆಗೆ ದಾಖಲಿಸಲು ಪೋಷಕರಿಗೆ ಪ್ರೇರೇಪಿಸಬೇಕು ಎಂದರು.

ವೃಕ್ಷಾಭಿಯಾನ ಮಹತ್ವದ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ 2.5ಲಕ್ಷ ಗಿಡಗಳನ್ನು ನೆಡಬೇಕಾಗಿದೆ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ 1000 ಗಿಡಗಳನ್ನು ನೆಡುವ ಜೊತೆಗೆ ಅವುಗಳ ಪಾಲನೆಯನ್ನು ಮಾಡಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ರಮೇಶ್‌ ಕರಿಗೌಡ, ಜಿಪಂ ಉಪಕಾರ್ಯದರ್ಶಿ ಎಂ. ಕಿಶೋರ್‌, ಜಿಲ್ಲೆಯ ಎಲ್ಲಾ ತಾಪಂ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.