ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ


Team Udayavani, May 24, 2022, 8:24 PM IST

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ವಾಡಿ (ಚಿತ್ತಾಪುರ) : ಪಠ್ಯಪುಸ್ತಕ ಪರೀಷ್ಕರಣೆ ಹೆಸರಿನಲ್ಲಿ ಶಿಕ್ಷಣವನ್ನು ಕೇಸರೀಕರಣಗೊಳಿಸಲು ರಾಜ್ಯ ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ. ಬಹು ಸಂಸ್ಕೃತಿಯ ಈ ಕನ್ನಡ ನಾಡಿನಲ್ಲಿ ಏಕ ಜಾತಿ ಪ್ರಭಾವದ ಮನುವಾದ ಬೇರನ್ನು ಪಠ್ಯದಲ್ಲಿ ನೆಟ್ಟಿದೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಭುಗಿಲೆದ್ದಿರುವ ಪಠ್ಯ ಪುಸ್ತಕ ಪರೀಷ್ಕರಣೆ ವಿವಾದದ ಕುರಿತು ಮಂಗಳವಾರ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸಂದೇಶವನ್ನು ಹಂಚಿಕೊಂಡಿರುವ ಪ್ರಿಯಾಂಕ್, ಬಲು ತೀಕ್ಷಣವಾಗಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಶೇ.40 ಕಮಿಷನ್ ದಂಧೆಯಲ್ಲಿ ತೊಡಗಿರುವ ಭಾಜಪ ಸರ್ಕಾರ ಅಪರಿಮಿತವಾದ ಭ್ರಷ್ಟಾಚಾರದಲ್ಲಿ ತೊಡಗಿದೆ. ಪ್ರಾಯೋಜಿತ ಕೋಮುದಳ್ಳುರಿ ಮತ್ತು ಹಂಗಿಲ್ಲದ ಬೆಲೆ ಏರಿಕೆಗಳು ಜನಸಾಮಾನ್ಯರ ಜೀವನ ಹಾಳುಗೆಡವಿದೆ. ಈಗ ಪಠ್ಯಪುಸ್ತಕದಲ್ಲಿ ಕೋಮುವಾದಿ ಹಿನ್ನೆಲೆಯ ಬಾಡಿಗೆ ಭಾಷಣಕಾರನ ಲೇಖಕನವನ್ನು ಸೇರಿಸಿ ಮಕ್ಕಳ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಮರೆತವರು ಇತಿಹಾಸವನ್ನು ರಚಿಸುವುದಿಲ್ಲ ಎಂದು ಅಂಬೇಡ್ಕರರು ಹೇಳಿರುವಂತೆ, ಕೋಮುಸೌಹಾರ್ಧತೆ ಎಂಬುದು ಅರಿಯದವರು ಇಂದು ಈ ನಾಡಿನ ಇತಿಹಾಸವನ್ನೇ ತಿರುಚಲು ಮುಂದಾಗಿದ್ದಾರೆ. ತಾಯಿನಾಡನ್ನೇ ಬ್ರಿಟೀಷರಿಗೆ ಮಾರಲು ಹೊರಟಿದ್ದ ಹೇಡಿಗಳನ್ನು ವೀರರಂತೆ ಬಿಂಬಿಸಲು ಮುಂದಾಗಿರುವುದು ದೇಶಕ್ಕಾಗಿ ಪ್ರಾಣತೆತ್ತ ನಿಜವಾದ ದೇಶಭಕ್ತರಿಗೆ ಮಾಡಿದ ಘೋರ ಅಪಮಾನವಾಗಿದೆ. ಈಟಿ ಸೆಲ್‌ನ ಟ್ರೋಲ್‌ಗಳು ಇಂದು ಪಠ್ಯಪುಸ್ತಕ ಪರೀಷ್ಕರಣೆಯ ಸೂತ್ರದಾರಿಗಳಾಗಿದ್ದಾರೆ. ಜಾತಿ ಸಮಾನತೆ, ಕೋಮು ಸೌಹಾರ್ಧತೆ ಸಾರಿದ ಕವಿಗಳು ಹಾಗೂ ಬಡ ಜನರ ಗ್ರಾಮೀಣ ಜನಪದ ನುಡಿಗಳು ಇವರಿಗೆ ಬೇಕಾಗಿಲ್ಲ. ಬಾಯಿಬಿಟ್ಟರೆ ಸುಳ್ಳು ಹೇಳುವ ಬಾಡಿಗೆ ಭಾಷಣಕಾರರ ಲೇಖನಗಳು ಪಠ್ಯಪುಸ್ತಕದ ಭಾಗವಾಗಿವೆ ಎಂದು ಪ್ರಿಯಾಂಕ್ ಖರ್ಗೆ ವಿಷಾಧಿಸಿದ್ದಾರೆ.

ಇದನ್ನೂ ಓದಿ : ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ

ಸ್ವಾತಂತ್ರ್ಯಕ್ಕಾಗಿ ಗಲ್ಲುಗಂಭಕ್ಕೇರಿದ ಶಹೀದ ಭಗತ್‌ಸಿಂಗ್ ಹಾಗೂ ಮೂರು ಸಲ ಬ್ರಿಟೀಷರ ವಿರುದ್ಧ ಯುದ್ಧ ಮಾಡಿದ ಟಿಪ್ಪು ಅವರ ಇತಿಹಾಸ ಬಿಜೆಪಿಗೆ ಬೇಡವಾಗಿದೆ. ಬದಲಾದ ಶಿಕ್ಷಣ ವ್ಯವಸ್ಥೆಯಿಂದ ದೇಶದ ತ್ರೀವರ್ಣ ಧ್ವಜದ ಬದಲು ಆರ್‌ಎಸ್‌ಎಸ್‌ನ ಭಗ್ವಾ ಧ್ವಜಕ್ಕೆ ಮಂಡಿಯೂರಬೇಕಾದ ಪರಸ್ಥಿತಿ ಬರಲಿದೆ. ಸಾರಾ ಅಬೂಬಕರ್, ಕೆ.ಲೀಲಾ, ಬಿ.ಟಿ.ಲಲಿತಾ ನಾಯ್ಕ್ ಅವರ ಚೇತೋಹಾರಿ ಲೇಖನಗಳನ್ನು ಕೈಬಿಟ್ಟು, ಹೆಣ್ಣೊಬ್ಬಳನ್ನು ಹಣದ ರಾಶಿಗೆ ಹೋಲಿಸುವ ಆರ್‌ಎಸ್‌ಎಸ್ ಪ್ರೇಮಿಯ ಲೇಖನಗಳನ್ನು ಪಠ್ಯದಲ್ಲಿ ಸೇರಿಸಲಾಗಿದ್ದು, ಮನುವಾದದ ಸ್ತ್ರೀ ವಿರೋಧಿ ನೀತಿಗಳನ್ನು ೨೧ನೇ ಸತಮಾನದ ಮಕ್ಕಳಿಗೆ ಕಲಿಸುವ ನೀಚ ಸ್ಥಿತಿಗೆ ನಾವು ಬಂದಿದ್ದೇವಾ? ಜಾತಿ ಶೋಷಣೆ ವಿರುದ್ಧ ಹೋರಾಡಿದವರನ್ನ ಬದಿಗೆ ಸರಿಸುತ್ತಾ, ಮನುವಾದ ಸಾರಿದವರನ್ನ ಮುನ್ನೆಲೆಗೆ ತರಲಾಗುತ್ತಿದೆ. ಇಂತಹ ಶಿಕ್ಷಣವನ್ನು ಬಿಜೆಪಿ ನಾಯಕರ ಮಕ್ಕಳು ಎಂದಿಗೂ ಕಲಿಯುವುದಿಲ್ಲ. ಕಾರಣ ಅವರೆಲ್ಲರೂ ವಿದೇಶದಲ್ಲಿ ಓದುತ್ತಾರೆ ಎಂದು ತಿವಿದಿರುವ ಪ್ರಿಯಾಂಕ್, ಹೇಳೋದು ಸಬ್‌ಕಾ ಸಾಥ್-ಸಬ್‌ಕಾ ವಿಕಾಸ್, ಆದರೆ ಮಾಡುತ್ತಿರೋದು ಮಾತ್ರ ಸಬ್‌ಕಾ ಸರ್ವನಾಶ ಎಂದು ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.