ಕುಂದಾಪುರ: ಸಮುದ್ರದ ಅಲೆಗಳಲ್ಲಿ ಕಪ್ಪು ದ್ರವ


Team Udayavani, May 25, 2022, 10:50 AM IST

black-liquid

ಕುಂದಾಪುರ: ದಕ್ಷಿಣ ಕನ್ನಡದ ಬೀಚ್‌ಗಳಲ್ಲಿ ಅಲೆಗಳ ಮೇಲೆ ತೇಲುತ್ತಿರುವ ಕಪ್ಪು ದ್ರವದ ಮಾದರಿಯಲ್ಲಿ ಕುಂದಾಪುರದಲ್ಲೂ ಸಮುದ್ರದ ಅಲೆಗಳಲ್ಲಿ ಕಪ್ಪುದ್ರವ ತೇಲುವುದು ಕಂಡುಬಂದಿದೆ. ಸಮುದ್ರದ ನೀರು ಕಲುಷಿತಗೊಂಡಿದ್ದು ಮೀನುಗಾರರಲ್ಲಿ ಆತಂಕ ಮೂಡಿಸಿದೆ.

ಮೀನುಗಳ ಸಾವು

ಪ್ರತೀ ವರ್ಷವೂ ಈ ಕಪ್ಪು ದ್ರವ ಕುಂದಾಪುರದ ಕಡಲ ತೀರವಿಡೀ ಕಾಣಲು ಸಿಗುತ್ತದೆ. ಆದರೆ ಸ್ಥಳೀಯರ ಅಭಿಪ್ರಾಯದ ಪ್ರಕಾರ ತೇಲುವ ಈ ಕಪ್ಪು ದ್ರವ ಬಂದಂತೆ ಪಂಜರದಲ್ಲಿ ಸಾಕಿದ ಮೀನುಗಳೂ ಏಕಾಏಕಿ ಸಾವಿಗೀಡಾಗುತ್ತವೆ. ಮೀನುಗಾರಿಕೆ ಮೇಲೆ ಇದು ಗಾಢ ಪರಿಣಾಮ ಬೀರುತ್ತಿದೆ.

ಪೆಟ್ರೋಲಿಯಂ ತ್ಯಾಜ್ಯ

ಸಮುದ್ರದ ಅಲೆಗಳಲ್ಲಿ ಕಂಡು ಬರುತ್ತಿರುವ ಕಪ್ಪುದ್ರವ ಹಡಗುಗಳಿಂದ ಸುರಿದ ಪೆಟ್ರೋಲಿಯಂ ತ್ಯಾಜ್ಯ – ಟಾರ್‌ ಬಾಲ್‌ಗ‌ಳು ಎನ್ನುವ ಆರೋಪ ಊರವರದು. ಏಕೆಂದರೆ ಸಮುದ್ರಕ್ಕೆ ಇಳಿದು ನಡೆದುಕೊಂಡು ಹೋದರೆ, ಕೈಗೆ ನೀರನ್ನು ಹಾಕಿಕೊಂಡರೆ ಕೈ ಕಾಲುಗಳು ಕಪ್ಪಾಗುತ್ತವೆ. ಸಣ್ಣ ಸಣ್ಣ ಗಡ್ಡೆಯಂತಹ ಆಕಾರಗಳು ಪತ್ತೆಯಾಗುತ್ತಿವೆ.

ಕ್ಲೀನ್‌ ಕುಂದಾಪುರ ತಂಡ

134 ನೇ ವಾರ ಕಡಲತಡಿಯ ಸ್ವತ್ಛತೆಗೆ ಬೀಜಾಡಿಯ ಸಮುದ್ರ ದಡಕ್ಕಿಳಿದ ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ತಂಡಕ್ಕೆ ಈ ತೇಲುವ ಕಪ್ಪು ದ್ರವ ತೀರದುದ್ದಕ್ಕೂ ಹರಡಿರುವುದು ಗಮನಕ್ಕೆ ಬಂತು. ತಂಡದಲ್ಲಿದ್ದ ಒಂದಿಬ್ಬರು ಪರೀಕ್ಷಿಸಲು ಹೋಗಿ, ಎಣ್ಣೆ ಅಂಶದ ಟಾರ್‌ನ್ನು ಚಪ್ಪಲಿಗೆ ಮೆತ್ತಿಕೊಂಡು ಅದು ಏನಿರಬಹುದು? ಅನ್ನುವುದರ ಪ್ರತ್ಯಕ್ಷ ಅನುಭವ ಹೊತ್ತು ತಂದರು! ದೂರದೂರದಿಂದ ಸಮುದ್ರ ನೋಡಲು ಬಂದ ಕೆಲವು ಜೋಡಿಗಳು ಸಮುದ್ರ ಅಂದರೆ ಕಪ್ಪು ನೀರು ಅಂತ ತಿಳಿದು ಆ ನೀರಲ್ಲೇ ಹೊರಳಾಡೋದು, ತುರಿಕೆ ಶುರುವಿಟ್ಟುಕೊಳ್ಳುವುದು ಬೇಡ ಎಂದು ತಂಡದವರು ಸಮುದ್ರದ ನೀರಲ್ಲಿ ಆಟವಾಡದಂತೆ ಎಚ್ಚರಿಸಿದ್ದಾರೆ.

ಅಪಾಯ

ಸಮುದ್ರವನ್ನೇ ನಂಬಿದ ಜೀವ ಸಂಕುಲಗಳ ಬದುಕಿಗೆ ಮಾರಕವಾದ ಇದರ ಕುರಿತು ಸಮುದ್ರ ಜೀವಿಗಳಿಗೆ ಇದರ ಅಪಾಯದಿಂದ ತಪ್ಪಿಸಿಕೊಳ್ಳಲು ಎಚ್ಚರಿಸುವ ಅಗತ್ಯ ಇದೆ.

ಅಲ್ಲೇನು

ಮಾನ್ಸೂನ್‌ ಪೂರ್ವದಲ್ಲಿ ಬಯೋ ಲ್ಯೂಮಿನೆಸೆನ್ಸ್‌ ಆಲ್ಗೆಗಳ ಬ್ಲೂಮ್‌ನಿಂದ ಹೀಗಾಗುತ್ತದೆ. ಇದು ಸಹಜ ಎಂದು ಅಧಿಕಾರಿಗಳು ಹೇಳಿಕೆ ಕೊಟ್ಟು ದಕ್ಷಿಣಕನ್ನಡದಲ್ಲಿ ಪತ್ತೆಯಾದ ದ್ರವದ ಮಾದರಿಯನ್ನು ಹೆಚ್ಚಿನ ಮಾಹಿತಿಗೆ ಲ್ಯಾಬ್‌ ಗೆ ಕಳುಹಿಸಿಕೊಟ್ಟಿದ್ದರು. ಅಷ್ಟಕ್ಕೂ ಸಮುದ್ರ ತೀರದಲ್ಲಿ ಮಾನ್ಸೂನ್‌ ಪೂರ್ವದಲ್ಲಿ ಆಗುತ್ತಿರುವುದೇನು? ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಈ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ನೂರಾರು ಕಿಲೋಮೀಟರ್‌ ಗಟ್ಟಲೆ ಹರಡೋದು ಹೇಗೆ? ಗೊತ್ತಿಲ್ಲದೆ ನಡೆಯುವ ಪ್ರಮಾದವೇ? ಪರೋಕ್ಷವಾಗಿ ಸಮುದ್ರದ ಆಹಾರ ತಿನ್ನುವವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಎನ್ನುವ ಪ್ರಶ್ನೆಗಳಿಗೆ ಉತ್ತರ ದೊರೆತಿಲ್ಲ.

ಜಾಗೃತರಾಗಬೇಕಿದೆ

ಭೂಮಿಯ, ಅಷ್ಟೂ ಜೈವಿಕ ಪ್ರಕ್ರಿಯೆಯ ಮೂಲವಾದ ಸಾಗರವನ್ನು ಇನ್ನಿಲ್ಲದಂತೆ ಕಲುಷಿತ ಮಾಡುವುದನ್ನು ಮೂಕರಾಗಿ ನೋಡಬೇಕೆನ್ನುವ ಅಪರಾಧ ಪ್ರಜ್ಞೆ ಕಾಡುತ್ತ ಇದೆ. ಈ ಕುರಿತು ಇನ್ನಷ್ಟು ಮಂದಿ ಜಾಗೃತರಾಗುವ ಅಗತ್ಯವಿದೆ. ಸಮುದ್ರವನ್ನೇ ವಿಷ ಮಾಡುತ್ತಿರುವ ಈ ಗಂಭೀರ ವಿಚಾರ ಕಡಲನ್ನೇ ನಂಬಿ ಬದುಕುವವರ ಗಮನಕ್ಕೂ ಬಾರದಿರುವುದು ಆಶ್ಚರ್ಯ. -ಗಣೇಶ್‌ ಪುತ್ರನ್‌ ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ತಂಡ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.