ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ: ಪ್ರವೀಣ್‌ ಶೆಟ್ಟಿ ಪುತ್ತೂರು ಆಯ್ಕೆ


Team Udayavani, May 25, 2022, 12:04 PM IST

Untitled-1

ಮುಂಬಯಿ: 2020-2022 ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಪುಣೆಯ ಜನಪ್ರಿಯ ಸಮಾಜ ಸೇವಕ, ಕಲಾ ಪೋಷಕ, ಹೊಟೇಲ್‌ ಉದ್ಯಮಿ ಪ್ರವೀಣ್‌ ಶೆಟ್ಟಿ ಪುತ್ತೂರು ಇವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 25 ರಂದು ಸಂಜೆ 6.30 ಕ್ಕೆ ನಾಡಿನ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಜನ್ಮ ಭೂಮಿಯಲ್ಲಿ ಮತ್ತು ಕರ್ಮಭೂಮಿಯಲ್ಲಿ ಸಮಾಜ ಸೇವೆ ಮಾಡುವ ಭಾಗ್ಯವನ್ನು ಪಡೆದುಕೊಳ್ಳುವ ಬೆರಳೆಣಿಕೆಯ ಜನರಲ್ಲಿ ಯಶಸ್ವಿ ಉದ್ಯಮಿ, ಕಲಾಪ್ರೇಮಿ, ಕಲಾ ಸಂಘಟಕ, ಸಮಾಜ ಸೇವಾಕರ್ತ ಪ್ರವೀಣ್‌ ಶೆಟ್ಟಿ ಪುತ್ತೂರು ಅವರು ಕೂಡಾ ಒಬ್ಬರು. ತನ್ನ ಆದಾಯದ ಒಂದಾಂಶವನ್ನು ಬಡವರಿಗೆ ಸಹಾಯ ಹಸ್ತ ನೀಡುವಲ್ಲಿ ಇವರದ್ದು ಎತ್ತಿದ ಕೈ. ಸಮಾಜ ಸೇವಕನಾಗಿ, ಕಲಾ ಸೇವಕನಾಗಿ, ಸಂಕಷ್ಟದಲ್ಲಿರುವವರಿಗೆ ಅಪತ್ಭಾಂದವರಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯ ಸೇರಿದಂತೆ ಸಮಾಜದಲ್ಲಿ ಗುರುತಿಸಿಕೊಂಡಿರುವ ಪ್ರವೀಣ್‌ ಶೆಟ್ಟಿ ಪುತ್ತೂರು ಅವರು ಯುವ ಪೀಳಿಗೆಗೆ ಮಾದರಿ.

ಕ್ಯಾಟರಿಂಗ್‌ ಉದ್ಯಮದಲ್ಲಿ ಯಶಸ್ಸು :

ಪುಣೆಯ ಅರ್‌ಬಿಐ ಪ್ರವೀಣಣ್ಣ ಎಂದೇ ಪ್ರಸಿದ್ದಿ ಪಡೆದ ಪ್ರವೀಣ್‌ ಶೆಟ್ಟಿ ಇವರು ಉಡುಪಿಯ ಪುತ್ತೂರಿನಲ್ಲಿ ಕಲ್ಯಾಣಿ ಶೆಟ್ಟಿ ಮತ್ತು ಶಂಕರ ಶೆಟ್ಟಿ ದಂಪತಿಯ ಪುತ್ರನಾಗಿ ಜನಿಸಿ, ಹುಟ್ಟೂರಿನಲ್ಲಿಯೇ ಪ್ರಾಥಮಿಕ, ಮಾಧ್ಯಮಿಕ, ಪದವಿ ಶಿಕ್ಷಣವನ್ನು ಮುಗಿಸಿ ಎಲ್ಲರಂತೆಯೇ ಬಹಳಷ್ಟು ಕನಸುಗಳನ್ನು ಹೊತ್ತುಕೊಂಡು ಉದ್ಯೋಗವನ್ನು ಅರಸಿ ಪುಣೆಗೆ ಬಂದು ಹೊಟೇಲ್‌ ಉದ್ಯೋಗಿಯಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದವರು. 1999ರಲ್ಲಿ ತಮ್ಮ ಸ್ವಂತ ಪರಿಶ್ರಮದಿಂದ ಪುಣೆಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಕ್ಯಾಂಟೀನ್‌ ಉದ್ಯಮವನ್ನು ಪ್ರಾರಂಭಿಸಿದರು. ಬಳಿಕ ಹಂತ ಹಂತವಾಗಿ ಮೇಲೆಕ್ಕೇರಿ ಹಲವಾರು ಕಾರ್ಪೊರೇಟ್‌ ಕಂಪನಿಗಳು ಸೇರಿದಂತೆ ಎ. ಪಿ ಹಾಸ್ಪಿಟಾಲಿಟಿ ಸರ್ವಿಸಸ್‌ ಪ್ರೈವೇಟ್‌ ಹೆಸರಿನಲ್ಲಿ ಕ್ಯಾಟರಿಂಗ್‌ ಉದ್ಯಮವನ್ನು ಪ್ರಾರಂಬಿಸಿ ಉತ್ತಮ ಸೇವೆಯನ್ನು ನೀಡುವ ಮೂಲಕ ಹಲವಾರು ಪ್ರತಿಷ್ಠಿತ ಪುರಸ್ಕಾರಗಳನ್ನು ಪಡೆದಿದ್ದಾರೆ. ಹೊಟೇಲ್‌ ಉದ್ಯಮದಲ್ಲೂ ಆಸಕ್ತಿ ಹೊಂದಿರುವ ಇವರು ಪುಣೆ ಹಾಗೂ ಉಡುಪಿಯಲ್ಲಿ ಹೊಟೇಲ್‌ಗ‌ಳನ್ನು ಪ್ರಾರಂಭಿಸಿ ಯಶಸ್ಸನ್ನು ಪಡೆದಿದ್ದಾರೆ.

ಕಲೆ-ಕಲಾವಿದರ ಆಶಾಕಿರಣ :

ತುಳುನಾಡಿನ ಪ್ರೀತಿಯಿಂದ, ಕರ್ಮಭೂಮಿಯಲ್ಲೂ ತವರೂರ ತುಳು ಭಾಷೆ, ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿರುವು ದಲ್ಲದೆ, ಹಲವಾರು ಸಂಘ ಸಂಸ್ಥೆಗಳಿಗೆ ನೆರವು ನೀಡಿದ್ದಾರೆ. ಯಕ್ಷಗಾನದ ಮೇಲಿನ ಅತೀವ ಪ್ರೀತಿಯಿಂದ 2009ರಲ್ಲಿ ಪುಣೆಯಲ್ಲಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯನ್ನು ಸ್ಥಾಪಿಸಿ, ಸ್ಥಾಪಕಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು  85 ಕ್ಕೂ ಅಧಿಕ ಕಾರ್ಯಕ್ರಮಗಳನ್ನು ನೀಡಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಪುಣೆ ಬಂಟರ ಸಂಘದ ಟ್ರಸ್ಟಿಯಾಗಿ, ಸಂಘದ ಉಪಾಧ್ಯಕ್ಷರಾಗಿ, ಉಡುಪಿ ಪುತ್ತೂರು ಬಂಟರ ಸಂಘದ ಗೌರವಾಧ್ಯಕ್ಷರಾಗಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ.

ಈ ಹಿಂದೆ ಬರ ಪರಿಸ್ಥಿತಿಯ ಸಮಯದಲ್ಲಿ ಉಡುಪಿಯ ಸುಬ್ರಹ್ಮಣ್ಯ ವಾರ್ಡ್‌ನ ಜನರು ನೀರಿಲ್ಲದೆ ಪರದಾಡುತ್ತಿದ್ದ ಸಂದರ್ಭದಲ್ಲಿ ತಮ್ಮ ಸ್ವಂತ ಜಾಗದಲ್ಲಿ ಬಾವಿಯನ್ನು ನಿರ್ಮಿಸಿ ಸುಮಾರು 3 ಗ್ರಾಮದವರಿಗೆ ನೀರನ್ನು ಒದಗಿಸಿದ ಪುಣ್ಯ ಕಾರ್ಯ ಇವರದ್ದಾಗಿದೆ. ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲೂ ತುಳು-ಕನ್ನಡಿಗರ ಹಲವಾರು ಬಡ ಕುಟುಂಬಗಳು ವಿವಿಧ ರೀತಿಯಲ್ಲಿ ಸಹಕರಿಸಿದ್ದಾರೆ. ತುಳುನಾಡಿನ ಹಲವಾರು ಯಕ್ಷಗಾನ ಕಲಾವಿದರು, ರಂಗ ಕರ್ಮಿಗಳಿಗೆ ತನ್ನಿಂದಾದ ಧನ ಸಹಾಯವನ್ನು ನೀಡಿದ್ದಾರೆ. ಮನೆ ಬಾಡಿಗೆ ಕಟ್ಟಲಾಗದೆ ತನ್ನ ಬಳಿಗೆ ಬಂದವರಿಗೆ, ಲಾಕ್‌ಡೌನ್‌ನಿಂದ ಎಲ್ಲವನ್ನು ಕಳಕೊಂಡು ಊರಿಗೆ ಹೋಗಲು ಕಷ್ಟದಲ್ಲಿದ್ದವರಿಗೆ ಸಹಕರಿಸಿದ್ದಾರೆ.

ಹಲವಾರು ಪ್ರಶಸ್ತಿ-ಪುರಸ್ಕಾರಗಳು :

ಇವರ ಅತ್ಯುತ್ತಮ ಹಾಸ್ಪಿಟಾಲಿಟಿ ಸರ್ವಿಸ್‌ಗೆ ರಾಷ್ಟ್ರ ಮಟ್ಟದ ಗೌರವವೂ ಲಭಿಸಿದೆ. ಇವರ ಸಾಮಾಜಪರ ಕಾರ್ಯಗಳಿಗೆ ವಿಶ್ವ ತೌಳವ ರತ್ನ ಪ್ರಶಸ್ತಿ, ತೌಳವ ಪ್ರಶಸ್ತಿ, ಸುಬ್ಬಣ್ಣ ಶೆಟ್ಟಿ ಸಂಸ್ಕರಣ ಪ್ರಶಸ್ತಿ, ಮುಂಬಯಿ ಕಲ್ವ ಫ್ರೆಂಡ್ಸ್‌ ಪ್ರಶಸ್ತಿ, ಕಾಪು ತುಳುಕೂಟದ ಪ್ರಶಸ್ತಿ, ಯಕ್ಷ ರûಾ ಪ್ರಶಸ್ತಿ, ಭ್ರಾಮರಿ ಯಕ್ಷನೃತ್ಯಕಲಾ ನಿಲಯದ ಪ್ರಶಸ್ತಿ, ಎಚ್‌. ಬಿ. ಎಲ್‌. ರಾವ್‌ ಸಂಸ್ಮರಣ ಪ್ರಶಸ್ತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮಾನ-ಸಮ್ಮಾನಗಳು ಲಭಿಸಿವೆ. ಸದಾ ಹಸನ್ಮುಖೀಯಾಗಿರುವ ಇವರು ಪತ್ನಿ ಆಶಾ ಶೆಟ್ಟಿ ಹಾಗು ಮಕ್ಕಳಾದ ಪ್ರಣವ್‌ ಮತ್ತು ಪ್ರತೀಕ್‌ ಅವರೊಂದಿಗೆ ಪುಣೆಯಲ್ಲಿ ನೆಲೆಸಿದ್ದಾರೆ.

ಪ್ರಚಾರ ಬಯಸದ ಸಮಾಜ ಸೇವೆ :

ಪುಣೆ ತುಳುಕೂಟದ ಮುಖ್ಯ ಸಲಹೆಗಾರರಾಗಿ ತುಳು ಕೂಟದ ಮುಖಾಂತರ ಪ್ರತಿ ವರ್ಷ ಬಡ ಮಕ್ಕಳ ಶಿಕ್ಷಣಕ್ಕೆ ನೆರವು, ಪ್ರತಿಭಾವಂತ ಮಕ್ಕಳಿಗೆ ಸತ್ಕಾರಕ್ಕೆ ಸಹಕಾರ, ತುಳು ಭಾಷೆ, ಕಮ್ಮಟ, ಯಕ್ಷಗಾನ, ತಾಳಮದ್ದಲೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಕರಾಗಿ ತುಳು ಭಾಷೆಯ ಬೆಳವಣಿಗೆಗೆ ತಮ್ಮದೇ ಆದಂತಹ ಕೊಡುಗೆಯನ್ನು ನೀಡುತ್ತಿದ್ದಾರೆ. ಪುಣೆ ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಾಥಾಶ್ರಮ, ವೃದ್ಧಾಶ್ರಮ, ಶಿಕ್ಷಣ ಸಂಸ್ಥೆಗಳಿಗೆ, ದೈವ-ದೇವಸ್ಥಾನಗಳಿಗೆ ದೇಣಿಗೆ ನೀಡಿ ತನ್ನಲ್ಲಿಯೇ ಸಂತೃಪ್ತಿಯನ್ನು ಕಂಡವರು. ಯಾವುದೇ ರೀತಿಯಲ್ಲೂ ಪ್ರಚಾರವನ್ನು ಬಯಸದೆ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.