ರೈತರ ಕೆಲಸಕ್ಕೆ ವಿಳಂಬ ಬೇಡ: ಅಶ್ವತಿ
Team Udayavani, May 25, 2022, 3:31 PM IST
ಕೆ.ಆರ್.ಪೇಟೆ: ತಾಲೂಕಿನ ರೈತರ ಕೆಲಸ ಕಾರ್ಯಗಳು ನಿಗದಿತ ಕಾಲಮಿತಿಯೊಳ ಗೆಮಾಡಿಕೊಡಲು ಅಧಿಕಾರಿಗಳು ಮತ್ತು ನೌಕರರು ಸತಾಯಿಸುತ್ತಿದ್ದು ದಾಖಲೆಗಳನ್ನು ಸಲ್ಲಿಸಿದರೂ ಸಬೂಬು ಹೇಳಿಕೊಂಡು ಬರುತ್ತಿದ್ದಾರೆ ಎಂದು ಕಂದಾಯ ಇಲಾಖೆ ನೌಕರರ ವಿರುದ್ಧ ರೈತರು ದೂರು ನೀಡಿದ್ದಾರೆ. ಇನ್ನು ಮುಂದೆ ಕಡ್ಡಾಯವಾಗಿನಿಗದಿತ ಕಾಲಮಿತಿಯೊಳಗೆ ರೈತರ ಕೆಲಸಕಾರ್ಯ ಮಾಡಿಕೊಡಲು ತಹಶೀಲ್ದಾರ್ರೂಪಾ ಅವರಿಗೆ ಜಿಲ್ಲಾಧಿಕಾರಿ ಎಸ್. ಅಶ್ವಥಿ ಸೂಚನೆ ನೀಡಿದರು.
ಸೂಕ್ತ ಕ್ರಮ: ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ ರೈತರು ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಜನರಿಗೆ ಅನುಕೂಲಮಾಡಿಕೊಡಿ ಎಂದು ಸೂಚನೆ ನೀಡಿದರು.
ರೈತರು ಹಾಗೂ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿ, ಲಂಚದ ಹಣಕ್ಕಾಗಿ ಒತ್ತಾಯಿಸುವ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿ. ಅಂತಹವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಕಂದಾಯ ಇಲಾಖೆಯ ಆಡಳಿತದ ವೇಗ ಚುರುಕುಗೊಳಿಸಿ, ಆರು ತಿಂಗಳ ಒಳಗೆ ರೈತರ ಮನವಿಗಳಿಗೆ ಶಾಶ್ವತ ಪರಿಹಾರನೀಡಿ, ಕೋರ್ಟು ಕಚೇರಿಗಳಿಗೆ ಅಲೆಸ ದಂತೆ ಕ್ರಮಕೈಗೊಳ್ಳಬೇಕು ಎಂದುಪಾಂಡವಪುರ ಎಸಿ ಶಿವಾನಂದಮೂರ್ತಿ ಅವರಿಗೆ ನಿರ್ದೇಶನ ನೀಡಿದರು.
ಜಿಪಂ ಸಿಇಒ ದಿವ್ಯಪ್ರಭು, ಡಿಡಿಪಿಐಜವರೇಗೌಡ, ಹೇಮಾವತಿ ಜಲಾಶಯ ಯೋಜನೆ ಸೂಪರಿಂಟೆಂಡೆಂಟ್ಎಂಜಿನಿಯರ್ ಚಂದ್ರಶೇಖರ್, ಇಇಶಿಲ್ಪಾ, ಭೂ ದಾಖಲೆಗಳ ಸಹಾಯಕನಿರ್ದೇಶಕ ಪರಶಿವನಾಯಕ್, ರೈತಮುಖಂಡ ರಾದ ಮುದುಗೆರೆ ರಾಜೇಗೌಡ,ಮಂದ ಗೆರೆ ಜಯರಾಂ, ಪಿಬಿ ಮಂಚನಹಳ್ಳಿ ನಾಗಣ್ಣಗೌಡ, ಮರುವನಹಳ್ಳಿಶಂಕರ್, ಮುದ್ದುಕುಮಾರ್, ಬೂಕನಕೆರೆನಾಗರಾಜು, ಚೌಡೇನಹಳ್ಳಿ ನಾರಾಯಣ ಸ್ವಾಮಿ, ತಾಲೂಕು ರೈತಸಂಘದ ಅಧ್ಯಕ್ಷಕಾರಿಗನಹಳ್ಳಿ ಪುಟ್ಟೇಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ