ಅತಿವೃಷ್ಟಿಯಲ್ಲಿ ಆಪದ್ಭಾಂಧವನಾದ ಅಗ್ನಿಶಾಮಕ ದಳ!

ಹಲವರ ಜೀವ ರಕ್ಷಿಸಿದ ಸಿಬ್ಬಂದಿ

Team Udayavani, May 25, 2022, 4:10 PM IST

fire-fighters

ಶಿವಮೊಗ್ಗ: ಭಾರೀ ಮಳೆ. ಚರಂಡಿಗಳು ತುಂಬಿ ರಸ್ತೆಗಳು ಜಲಾವೃತವಾಗಿತ್ತು. ಮನೆಗಳಿಗೂ ನೀರು ನುಗ್ಗಿತ್ತು. ಮನೆ ಒಳಗಿದ್ದವರಿಗೆ ಹೊರಗೆ ಬರಲು ಭಯ. ಒಳಗಿರಲು ಆತಂಕ. ಇಂತಹ ಸಂದರ್ಭ ಜನರ ನೆರವಿಗೆ ಬಂದಿದ್ದೇ ಶಿವಮೊಗ್ಗ ಅಗ್ನಿಶಾಮಕ ಸಿಬ್ಬಂದಿ.

ಮೇ 19ರಂದು ಶಿವಮೊಗ್ಗ ನಗರ ಅಕ್ಷರಶಃ ಮುಳುಗಿತ್ತು. ಸ್ಮಾರ್ಟ್‌ ಸಿಟಿ ಅವಾಂತರ, ಪಾಲಿಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ನಗರದ ಬಹು ಬಡಾವಣೆಗಳು ಜಲಾವೃತವಾಗಿದ್ದವು. ಇಂತಹ ಸಂದರ್ಭ ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು, ಹಗಲು, ರಾತ್ರಿ ಕೆಲಸ ಮಾಡಿದರು. 150ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು.

ಮೇ 19ರ ಬೆಳಗ್ಗೆ 10.30ಕ್ಕೆ ಆರ್‌.ಎಂ.ಎಲ್‌ ನಗರದ ಎರಡು ಕಡೆ ಮೊದಲ ರಕ್ಷಣಾ ಕಾರ್ಯಾಚರಣೆ ನಡೆಸಿಲಾಯಿತು. 25 ಜನರನ್ನು ರಕ್ಷಣೆ ಮಾಡಲಾಯಿತು. ಆ ಬಳಿಕ ಸುಮಾರು 15 ಕಡೆ ಅಗ್ನಿಶಾಮಕ ಸಿಬ್ಬಂದಿ ರೆಸ್ಕ್ಯು ಆಪರೇಷನ್‌ ನಡೆಸಿದರು.

ಗೋಪಾಲಗೌಡ ಬಡಾವಣೆ, ಶರಾವತಿ ನಗರ, ಮಿಳಘಟ್ಟ, ಗಾಂಧಿನಗರ, ಹೊಸಮನೆ, ವೆಂಕಟೇಶ ನಗರ, ಲಕ್ಷ್ಮೀ ಟಾಕೀಸ್‌ ಬಳಿ, ವಿದ್ಯಾನಗರದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿದರು. ಈ ವೇಳೆ ಹಸುಗೂಸಿನಿಂದ ವಯೋವೃದ್ಧರ ತನಕ 150ಕ್ಕೂ ಹೆಚ್ಚು ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದರು.

ಆರ್‌.ಎಂ.ಎಲ್. ನಗರದಲ್ಲಿ ಜಲಾವೃತವಾಗಿದ್ದ ಮನೆಯಿಂದ 90 ವರ್ಷದ ಅಬ್ದುಲ್‌ ಅಜೀಜ್‌ ಖಾನ್‌ ಎಂಬುವವರ ರಕ್ಷಣೆ ಮಾಡಲಾಯಿತು. ಅವರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲಾಯಿತು. ಗೋಪಾಲ ಗೌಡ ಬಡಾವಣೆಯಲ್ಲಿ ವೃದ್ಧೆಯೊಬ್ಬರನ್ನು ರಕ್ಷಿಸಲಾಯಿತು.

ಅದೇ ದಿನ ರಾತ್ರಿ ವಿದ್ಯಾನಗರದಲ್ಲಿ ನವಜಾತ ಶಿಶು ಮತ್ತು ಬಾಣಂತಿಯ ರಕ್ಷಣಾ ಕಾರ್ಯ ನಡೆಸಲಾಯಿತು. ಇವರನ್ನು ಸುರಕ್ಷಿತವಾಗಿ ಬಡಾವಣೆಯಿಂದ ಹೊರಗೆ ಕರೆತರಲಾಯಿತು. ನಿರಂತರ ಮಳೆ ನಡುವೆ ಅಗ್ನಿಶಾಮಕ ಸಿಬ್ಬಂದಿಗೆ ಸವಾಲೆನಿಸಿದ್ದು ಸ್ಮಾರ್ಟ್‌ ಸಿಟಿ ಗುಂಡಿಗಳು. ಯಾವ ಬಡಾವಣೆಯಲ್ಲಿ ಎಲ್ಲಿ ಗುಂಡಿ ತೋಡಲಾಗಿದೆ ಅನ್ನುವುದರ ಖಚಿತತೆ ಇರಲಿಲ್ಲ. ಹಾಗಾಗಿ ಪ್ರತಿ ಹೆಜ್ಜೆ ಇಡುವಾಗಲೂ ಮುನ್ನೆಚ್ಚರಿಕೆ ವಹಿಸುತ್ತಿದ್ದರು. ಪ್ರತಿದಿನ ಓಡಾಡುತ್ತಿದ್ದ ರಸ್ತೆಯಲ್ಲಿ ಹೆಜ್ಜೆ ಇಡಲು ಜನ ಹೆದರುತ್ತಿದ್ದ ಸಂದರ್ಭದಲ್ಲೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಕೆಲವು ಕಡೆ ಜನರನ್ನು ಎತ್ತಿಕೊಂಡು ಬಂದು ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು. ಇನ್ನೂ ಕೆಲವು ಕಡೆ ಹಗ್ಗ ಬಳಸಿ ಜನರ ರಕ್ಷಣೆ ಮಾಡಿದರು.

ಗೋಪಾಲಗೌಡ ಬಡಾಣೆಯಲ್ಲಿ ಜಲಾವೃತವಾಗಿದ್ದ ರಸ್ತೆಯಲ್ಲಿ ತೆರಳುತ್ತಿದ್ದ ಕಾರು ಆಫ್‌ ಆಗಿತ್ತು. ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದರಿಂದ ಕಾರಿನಲ್ಲಿದ್ದವರು ಕೆಳಗಿಳಿಯಲು ಹೆದರುತ್ತಿದ್ದರು. ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ರೆಸ್ಕ್ಯು ಆಪರೇಷನ್‌ ನಡೆಸಿದರು. ಹಗ್ಗದ ಸಹಾಯದಿಂದ ಕಾರಿನಲ್ಲಿದ್ದವರನ್ನು ಕಾಪಾಡಿದರು.

ಇನ್ನು, ಶಿವಮೊಗ್ಗದ ಸೋಮಿನಕೊಪ್ಪ ಕೆರೆಯ ನಡುಗಡ್ಡೆಯಲ್ಲಿ ಕುದುರೆ ಗುಂಪೊಂದು ಸಿಕ್ಕಿಬಿದ್ದಿದ್ದವು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮಾಡಿ 13 ಕುದುರೆಗಳ ರಕ್ಷಣೆ ಮಾಡಿದರು. ಎರಡು ದಿನಗಳಿಂದ ಆಹಾರವಿಲ್ಲದೆ ಕುದುರೆಗಳು ನಡುಗಡ್ಡೆಯಲ್ಲಿ ಸಿಕ್ಕಿಬಿದ್ದಿದ್ದವು. ಅವುಗಳ ರಕ್ಷಣೆ ಮಾಡಿ ಕರ್ತವ್ಯ ಪಜ್ಞೆ ಜೊತೆಗೆ ಮಾನವೀಯತೆ ಮರೆದಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಚಾಕಚಕ್ಯತೆ ಮತ್ತು ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಸಾವು- ನೋವಿನ ಆತಂಕವೂ ದೂರವಾಗಿದೆ. ಶಿವಮೊಗ್ಗ ಜಲಾವೃತವಾಗಿದ್ದಾಗ ಜೀವದ ಹಂಗು ತೊರೆದು 150ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಿದ್ದಾರೆ. ಇವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.