ಕಬ್ಬಿಣದ ಅದಿರು ರಫ್ತು ನಿಷೇಧ ತೆರವು ಆದೇಶ: ಬಂದರಿಗೆ ಅದಿರು ಹರಿದು ಬರುವ ನಿರೀಕ್ಷೆ


Team Udayavani, May 26, 2022, 6:30 AM IST

ಕಬ್ಬಿಣದ ಅದಿರು ರಫ್ತು ನಿಷೇಧ ತೆರವು ಆದೇಶ ಹಿನ್ನೆಲೆ: ಬಂದರಿಗೆ ಅದಿರು ಹರಿದು ಬರುವ ನಿರೀಕ್ಷೆ

ಮಂಗಳೂರು: ರಾಜ್ಯದ ಕಬ್ಬಿಣದ ಅದಿರನ್ನು ರಫ್ತು ಮಾಡುವುದಕ್ಕೆ ಇದ್ದ ನಿರ್ಬಂಧಗಳನ್ನು ಸುಪ್ರೀಂ ಕೋರ್ಟ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ನವಮಂಗಳೂರು ಬಂದರಿಗೆ ಅದಿರು ಹರಿದು ಬರುವ ಬಗ್ಗೆ ಲೆಕ್ಕಾಚಾರ ಆರಂಭವಾಗಿದೆ.

ಇದೇ ವೇಳೆ ಕಬ್ಬಿಣದ ಅದಿರು ಖರೀದಿಗೆ ಈಗಿನ ಪರಿಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ಗ್ರಾಹಕರು ಸಿಗಬಹುದೇ ಎಂಬ ಸಂಶಯವೂ ಕಾಡತೊಡಗಿದೆ. ಮುಖ್ಯ ಆಮದುದಾರ ದೇಶವಾಗಿರುವ ಚೀನದೊಂದಿಗೆ ಸಂಬಂಧ ಹದಗೆಟ್ಟಿರುವುದು ಇದಕ್ಕೆ ಕಾರಣ.

ಹಿಂದೆ ಕಬ್ಬಿಣದ ಅದಿರನ್ನು ರಾಜ್ಯದ ನವಮಂಗಳೂರು ಬಂದರು, ಬೇಲೆಕೇರಿ ಮತ್ತು ಕಾರವಾರ – ಈ ಮೂರು ಬಂದರುಗಳಿಂದ ಚೀನ ಮತ್ತಿತರ ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ಆಗ ಕರಾವಳಿಗೆ ಸಾವಿರಾರು ಕಬ್ಬಿಣದ ಅದಿರು ಸಾಗಾಟ ಟ್ರಕ್‌ಗಳು ಬಳ್ಳಾರಿ, ಹೊಸಪೇಟೆ ಕಡೆಯಿಂದ ಬರುತ್ತಿದ್ದವು.ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ರಾಜ್ಯ, ಕೇಂದ್ರ ಸರಕಾರಗಳು ಕಬ್ಬಿಣದ ಅದಿರುಗಣಿಗಾರಿಕೆಗೆ ನಿಷೇಧ ಹೇರಿದ್ದಷ್ಟೇ ಅಲ್ಲದೆ ಗಣಿಗಾರಿಕೆ ನಡೆಸಲಾಗಿದ್ದ ಅದಿರನ್ನೂ ರಫ್ತು ಮಾಡುವಂತಿಲ್ಲ ಎಂಬ ಆದೇಶಿಸಲಾಗಿತ್ತು

ಅದಿರು ನಿರ್ವಹಣೆ ಸವಾಲು
ಲಕ್ಷಗಟ್ಟಲೆ ಟನ್‌ ಅದಿರು ಇನ್ನೂ ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿದ್ದು, ಸೂಕ್ತ ಮಾರುಕಟ್ಟೆ ಲಭ್ಯವಾದರೆ ರಫ್ತು ಆರಂಭವಾಗುವ ಸಾಧ್ಯತೆ ಇದೆ. ಅದಕ್ಕಾಗಿ ನವ ಮಂಗಳೂರು ಬಂದರು ಪ್ರಾಧಿಕಾರದಿಂದ ಪ್ರಯತ್ನ ಕೈಗೊಳ್ಳಲಾಗುವುದು. ಬಳ್ಳಾರಿಯಿಂದ ರೈಲು ಮತ್ತು ರಸ್ತೆ ಮೂಲಕ ಸರಕು ಸ್ವೀಕರಿಸಬಹುದು. ಎನ್‌ಎಂಪಿಎಯಲ್ಲಿ ಬೃಹತ್‌ ಯಾರ್ಡ್‌ಗಳಿದ್ದು, ಅವುಗಳಲ್ಲಿ ಅದಿರು ಇಳಿಸಿ ಬಳಿಕ ರಫ್ತು ಮಾಡುವುದಕ್ಕೆ ಅವಕಾಶಗಳಿವೆ ಎನ್ನತ್ತಾರೆ ಅಧಿಕಾರಿಗಳು.

ಸುಪ್ರೀಂ ಕೋರ್ಟ್‌ ಆದೇಶದ ಸರಿಯಾದ ಅಧ್ಯಯನ ನಡೆದ ಬಳಿಕ ಬಂದರು ಪ್ರಾಧಿಕಾರದ ಆಡಳಿತ ಈ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲಿದೆ. ಈಗಿನ ಮಾಹಿತಿಯ ಅನ್ವಯ ಎಲ್ಲ ಪ್ರಕ್ರಿಯೆ ಮುಗಿದು, ರಫ್ತು ಆರಂಭವಾಗಲು ಇನ್ನು ಮೂರು ತಿಂಗಳ ಕಾಲಾವಕಾಶ ಬೇಕಾಗಬಹುದು.

ಎನ್‌ಎಂಪಿಎ ತನ್ನ 14 ಮೀ. ಆಳದ ಡೀಪ್‌ ಡ್ರಾಫ್ಟ್‌ ಬರ್ತನ್ನು ಕಂಟೈನರ್‌ ನಿರ್ವಹಣೆಗಾಗಿ ಈಗಾಗಲೇ ಜೆಎಸ್‌ಡಬ್ಲ್ಯುಗೆ ಹಸ್ತಾಂತರಿಸಿದೆ. ಹಾಗಾಗಿ ಅದರಲ್ಲಿಇನ್ನು ದೊಡ್ಡ ಹಡಗು ನಿರ್ವಹಣೆ ಅಸಾಧ್ಯ. ಉಳಿದ ಬರ್ತ್‌ ಗಳು 9ರಿಂದ 10 ಮೀ. ಆಳವಷ್ಟೇ ಇದೆ. ಇದು ದೊಡ್ಡ ಹಡಗು ಬರುವುದಕ್ಕೆ ಅಡ್ಡಿಯಾಗಬಹುದು ಎನ್ನುತ್ತಾರೆ ಕೆಲವು ರಫ್ತುದಾರರು. ಈ ಅಂಶಗಳನ್ನು ಗಮನಿಸಿದರೆ ರಫ್ತುದಾರರು ಮಂಗಳೂರಿಗಿಂತ ಆಂಧ್ರಪ್ರದೇಶದ ಕೃಷ್ಣಪಟ್ಟಣಂ ಬಂದರು ಕಡೆಗೆ ಹೋಗುವ ಸಾಧ್ಯತೆ ಅಧಿಕ. ಚೀನಕ್ಕೆ ರಫ್ತು ಮಾಡುವುದಾದರೂ ಇದು ಹೆಚ್ಚು ಸೂಕ್ತವಾಗುತ್ತದೆ. ಕಬ್ಬಿಣದ ಅದಿರು ಸಾಗಾಟವನ್ನು ತಡೆಯುವಲ್ಲಿ ಈ ಹಿಂದೆ ರಾಜ್ಯ ಸರಕಾರ ಆಸಕ್ತಿ ವಹಿಸಿತ್ತು. ಈಗ ಮತ್ತೆ ಆರಂಭಿಸುವುದಕ್ಕೆ ಆಸಕ್ತಿ ತೋರುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಬಂದರಿನಲ್ಲಿದೆ ಅದಿರು
2012ರ ವೇಳೆ ಅದಿರು ನಿಷೇಧವಾದಾಗ ಬಂದರಿನಲ್ಲಿದ್ದ ಕೆಲವು ಟನ್‌ ಕಬ್ಬಿಣದ ಅದಿರು ಹಾಗೆಯೇ ಇದೆ. ಈಗ ಬಳಕೆಗೆ ಯೋಗ್ಯವಾಗಿರಲಾರದು ಎನ್ನುತ್ತಾರೆ ಅಧಿಕಾರಿಗಳು.

ಸುಪ್ರೀಂ ಕೋರ್ಟ್‌ ಆದೇಶ ಈಗಷ್ಟೇ ಹೊರಬಿದ್ದಿದೆ. ಅದನ್ನು ಅಧ್ಯಯನ ಮಾಡುತ್ತೇವೆ. ಜತೆಗೆ ನಮ್ಮ ತಂಡದವರು ಎನ್‌ಎಂಪಿಎ ಇದನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬಹುದು ಎನ್ನುವುದನ್ನು ಪರಿಶೀಲಿಸಲಿದ್ದೇವೆ. ಸ್ವಲ್ಪ ಕಾಲಾವಕಾಶ ಬೇಕಾಗಬಹುದು.
– ಕೆ.ಜಿ. ನಾಥ್‌, ನವಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷ

-ವೇಣು ವಿನೋದ್‌

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.