ರೈತನ ಮಗಳ ಕೊರಳಿಗೆ 16 ಚಿನ್ನದ ಪದಕ

ಬಿಎಸ್ಸಿ ತೋಟಗಾರಿಕೆಯಲ್ಲಿ ಇಡೀ ವಿವಿಗೆ ಪ್ರಥಮ ; ಇಟಲಿ ಅಧ್ಯಯನಕ್ಕೆ ಹಣದ ಸಮಸ್ಯೆ

Team Udayavani, May 26, 2022, 11:14 AM IST

3

ಬಾಗಲಕೋಟೆ: ಆ ಯುವತಿ ಮೈತುಂಬ ಸೀರೆಯನ್ನುಟ್ಟು ಚಿಕ್ಕ ಹೆಜ್ಜೆಯನ್ನಿಡುತ್ತ ವೇದಿಕೆ ಹತ್ತುತ್ತಿದ್ದರೆ, ಇತ್ತ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ರೈತ ದಂಪತಿ ಕಣ್ಣಲ್ಲಿ ಆನಂದಭಾಷ್ಪ. ರಾಜ್ಯಪಾಲರಿಂದ ಒಂದೊಂದೇ ಚಿನ್ನದ ಪದಕ ಕೊರಳಿಗೆ ಹಾಕುತ್ತಿದ್ದರೆ ಸಭಾಂಗಣದಲ್ಲಿದ್ದ ಜನರಿಂದ ಭರ್ಜರಿ ಕರತಾಡನ.

ಇದು ಕಂಡು ಬಂದಿದ್ದು ಬುಧವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ. ಬಿಎಸ್ಸಿ ತೋಟಗಾರಿಕೆಯಲ್ಲಿ ಇಡೀ ವಿವಿಗೆ ಪ್ರಥಮ ಸ್ಥಾನ ಪಡೆದ ಆ ಯುವತಿ, ಬರೋಬ್ಬರಿ 16 ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಳು. ಈ ಯುವತಿ ಸಾಧನೆಗೆ ಸ್ವತಃ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಬೆನ್ನು ತಟ್ಟಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಗುಲ್ಲಂಪೇಟೆ (ಕಾರೇಹಟ್ಟಿ, ಸತ್ತಿಹಳ್ಳಿ) ಗ್ರಾಮದ ಉಮ್ಮೆಸಾರಾ ಹಸ್ಮತ್‌ಅಲಿ ಎಂಬ ವಿದ್ಯಾರ್ಥಿನಿ ಶಿರಸಿ ತೋಟಗಾರಿಕೆ ಕಾಲೇಜಿನಲ್ಲಿ ಬಿಎಸ್ಸಿ ತೋಟಗಾರಿಕೆ ವಿಜ್ಞಾನ ಪದವಿ ಪಡೆದಿದ್ದು, ತೋಟಗಾರಿಕೆ ವಿವಿಯ 11ನೇ ಘಟಿಕೋತ್ಸವದಲ್ಲಿ ಒಟ್ಟು 16 ಚಿನ್ನದ ಪದಕ ಪಡೆದು ಚಿನ್ನದ ಹುಡುಗಿ ಎನಿಸಿಕೊಂಡಿದ್ದಾರೆ.

ಬಿಎಸ್ಸಿ ತೋಟಗಾರಿಕೆ ವಿಜ್ಞಾನ ವಿಭಾಗದಲ್ಲಿ ಇಡೀ ವಿವಿಗೆ ಪ್ರಥಮ ಸ್ಥಾನ ಪಡೆದಿದ್ದಕ್ಕೆ ವಿವಿಯ ಚಿನ್ನದ ಪದಕ ಸಹಿತ ಈ ವಿಭಾಗದಲ್ಲಿ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗಾಗಿ ವಿವಿಧ ದಾನಿಗಳು ಕೊಡಮಾಡಿದ ಒಟ್ಟು 15 ಚಿನ್ನದ ಪದಕ ಸಹಿತ 16 ಚಿನ್ನದ ಪದಕಗಳನ್ನು ವಿದ್ಯಾರ್ಥಿನಿ ಉಮ್ಮೆಸಾರಾ ಅವರಿಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ತೋಟಗಾರಿಕೆ ಸಚಿವ ವಿ. ಮುನಿರತ್ನ, ಕುಲಪತಿ ಡಾ| ಕೆ.ಎಂ. ಇಂದಿರೇಶ, ಮುಖ್ಯ ಭಾಷಣಕಾರರಾಗಿದ್ದ ರಾಜಸ್ಥಾನದ ಡಾ|ರಾಜೇಂದ್ರಸಿಂಗ್‌ ಪ್ರದಾನ ಮಾಡಿದರು.

ಸಾಲ ಮಾಡಿ ಶಿಕ್ಷಣ: ಉಮ್ಮೆಸಾರಾ ಅವರ ತಂದೆ ಹಸ್ಮತ್‌ ಅಲಿ, ಗುಲ್ಲಂಪೇಟದಲ್ಲಿ ರೈತರಾಗಿದ್ದು ನಾಲ್ಕು ಎಕರೆ ಕಾಫಿ ಹಾಗೂ ವಿವಿಧ ಕೃಷಿ ಮಾಡಿಕೊಂಡಿದ್ದಾರೆ. ತಾಯಿ ರಹೀಮಬಾನು ಗೃಹಿಣಿ. ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ಶಿಕ್ಷಣದಲ್ಲೂ ಅತ್ಯಂತ ಜಾಣೆಯಾಗಿದ್ದ ಮಗಳ ಕಲಿಕಾ ಆಸಕ್ತಿ ಕಂಡ ತಂದೆ ಹಸ್ಮತ್‌ ಅಲಿ, ತೋಟಗಾರಿಕೆ ವಿಷಯದಲ್ಲಿ ಬಿಎಸ್ಸಿ ಕಲಿಯುವುದಾಗಿ ಹೇಳಿದಾಗ, ಪ್ರವೇಶ ಪರೀಕ್ಷೆ ಬರೆಯಲು ಸಹಕಾರ ನೀಡಿದರು.

ತೋಟಗಾರಿಕೆ ಶಿರಸಿ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿ ಉಮ್ಮೆಸಾರಾ ವಿವಿಯ ಶಿಷ್ಯವೇತನಕ್ಕೂ ಆಯ್ಕೆಯಾಗಿದ್ದರು. ಆದರೆ, ಬಿಎಸ್ಸಿ ತೋಟಗಾರಿಕೆ ವಿಜ್ಞಾನ ಪೂರ್ಣಗೊಳಿಸಲು, ಗುಲ್ಲಂಪೇಟದ ಕೆನರಾ ಬ್ಯಾಂಕ್‌ನಲ್ಲಿ ಒಟ್ಟು 1 ಲಕ್ಷ ಶೈಕ್ಷಣಿಕ ಸಾಲ ಮಾಡಿದ್ದು, ಇನ್ನೂ 89 ಸಾವಿರ ಸಾಲ ಬಾಕಿ ಇದೆ.

ಇಟಲಿ ಶಿಕ್ಷಣಕ್ಕೆ ಹಣದ ಕೊರತೆ:16 ಚಿನ್ನದ ಪದಕ ಕೊರಳಿಗೇರಿಸಿಕೊಂಡ ಈ ಚಿನ್ನದ ಹುಡುಗಿ ಉಮ್ಮೆಸಾರಾಗೆ ತೋಟಗಾರಿಕೆ ಎಂಎಸ್ಸಿ ಕಲಿತು, ಸುಸ್ಥಿರ ಕೃಷಿಯಲ್ಲಿ ಸಂಶೋಧಕಿಯಾಗಬೇಕೆಂಬ ದೊಡ್ಡ ಗುರಿ ಇದೆ. ಇಟಲಿಯ ಪಡುವಾ ವಿಶ್ವ ವಿದ್ಯಾಲಯ ನಡೆಸುವ ಆನ್‌ಲೈನ್‌ ಪ್ರವೇಶ ಪರೀಕ್ಷೆಯಲ್ಲಿ ಜಾಗತಿಕ ಮಟ್ಟದಲ್ಲಿ 87ನೇ ರ್‍ಯಾಂಕ್‌ ಕೂಡ ಪಡೆದಿದ್ದಾಳೆ. ಇಟಲಿ ವಿವಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದು, ಅಲ್ಲಿಗೆ ಹೋಗಿ ಎಂಎಸ್ಸಿ ಸುಸ್ಥಿರ ಕೃಷಿ ಅಧ್ಯಯನ ಮಾಡಲು ಸುಮಾರು 8ರಿಂದ 10 ಲಕ್ಷ ಹಣ ಬೇಕು. ಇದಕ್ಕಾಗಿ ಅದೇ ಕೆನರಾ ಬ್ಯಾಂಕ್‌ನಲ್ಲಿ ಶೈಕ್ಷಣಿಕ ಸಾಲ ಕೇಳಿದ್ದು ಅದು ರಿಜೆಕ್ಟ್ ಆಗಿದೆ. ನಾಲ್ಕು ಎಕರೆ ಹೊಲ ಒತ್ತೆ ಇಟ್ಟುಕೊಂಡು ಸಾಲ ಕೊಡಿ ಎಂದು ತಂದೆ ಹಸ್ಮತ್‌ ಅಲಿ ಕೇಳಿದ್ದು, ರೈತರಿಗೆ ಅಷ್ಟೊಂದು ಸಾಲ ಕೊಡಲು ಬರಲ್ಲ ಎಂದು ಬ್ಯಾಂಕ್‌ನವರು ಹೇಳಿದ್ದಾರೆ. ಹೀಗಾಗಿ ಮುಂದೇನು ಮಾಡಬೇಕೆಂಬ ಚಿಂತೆಯಲ್ಲಿ ಈ ವಿದ್ಯಾರ್ಥಿನಿಯ ಕುಟುಂಬವಿದೆ.

„ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.