ಅವೈಜ್ಞಾನಿಕ ನೀರಿನ ಶುಲ್ಕ ಸರಿಪಡಿಸಿ
ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಧರಣಿ
Team Udayavani, May 26, 2022, 2:52 PM IST
ಶಿವಮೊಗ್ಗ: ನಗರದಲ್ಲಿ 24×7 ಕುಡಿಯುವ ನೀರಿನ ಶುಲ್ಕ ಅವೈಜ್ಞಾನಿಕವಾಗಿದ್ದು, ಇದನ್ನು ಸರಿಪಡಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನಾಗರಿಕರ ಸಭೆ ಕರೆಯಬೇಕೆಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಬುಧವಾರ ಶಾಸಕ ಕೆ.ಎಸ್. ಈಶ್ವರಪ್ಪ ಅವರ ಕಚೇರಿ ಎದುರು ಧರಣಿ ನಡೆಸಲಾಯಿತು.
ಸಭೆ ಕರೆಯುವಂತೆ ಶಾಸಕರಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದು, ಆದಾಗ್ಯೂ ಶಾಸಕರು ಮನವಿಯನ್ನು ಪರಿಗಣಿಸದೇ ಇರುವುದರಿಂದ ಕಚೇರಿ ಮುಂಭಾಗದಲ್ಲಿ ಶಾಂತಿಯುತ ಹಾಗೂ ಕಾನೂನಾತ್ಮಕ ಪ್ರತಿಭಟನೆ ಕೈಗೊಂಡಿರುವುದಾಗಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ. ವಸಂತಕುಮಾರ್ ತಿಳಿಸಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 61 ಸಾವಿರ ನೀರಿನ ತೆರಿಗೆದಾರರಿದ್ದಾರೆ. 24×7 ನೀರಿನ ಸಂಪರ್ಕವನ್ನು ಕೆಲವು ವಾರ್ಡ್ಗಳಲ್ಲಿ ಮಾತ್ರ ಕಲ್ಪಿಸಲಾಗಿದೆ. ಈಗಿರುವ 12 ಸಾವಿರ 24×7 ಸಂಪರ್ಕದಲ್ಲಿ 6 ಸಾವಿರ ಸಂಪರ್ಕದವರಿಗೆ ಮಾತ್ರ ನೀರಿನ ತೆರಿಗೆ ವಿಧಿಸಲಾಗುತ್ತಿದೆ. ಈ ನೀರಿನ ಶುಲ್ಕ ಅತ್ಯಂತ ದುಬಾರಿಯಾಗಿದೆ ಎಂದರು.
ಸಮಾನ ಮಾನದಂಡ ವಿಧಿಸಿ ನೀರಿನ ಶುಲ್ಕ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ ಅವರು, ಶಾಸಕರು ಸಂಬಂಧಿಸಿದ ಅಧಿಕಾರಿಗಳು ಹಾಗೂ ನಾಗರಿಕರ ಸಭೆಯನ್ನು ಕೂಡಲೇ ಕರೆಯದಿದ್ದಲ್ಲಿ ಪ್ರತಿವಾರ ಶಾಸಕರ ಕಚೇರಿ ಎದುರು ಧರಣಿ ನಡೆಸಲಾಗುವುದು. ಈ ಹೋರಾಟ ನಿರಂತರವಾಗಿದ್ದು, ಒಂದು ವೇಳೆ ನಮ್ಮ ಹೋರಾಟಕ್ಕೆ ಸ್ಪಂದಿಸದೇ ಸಭೆ ಕರೆಯದಿದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಶಾಸಕರ ಕಚೇರಿ ಎದುರು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಧರಣಿಯಲ್ಲಿ ಒಕ್ಕೂಟದ ಪ್ರಮುಖರಾದ ಡಾ| ಎ.ಸತೀಶ್ ಕುಮಾರ್ ಶೆಟ್ಟಿ, ಎಸ್.ಬಿ. ಅಶೋಕ್ ಕುಮಾರ್, ಜನಾರ್ದನ ಪೈ, ಜನಮೇಜಿರಾವ್, ನಾಗರಾಜ್, ರಘುಪತಿ, ಚಂದ್ರಶೇಖರ್ ಗೌಡ ಮೊದಲಾದವರಿದ್ದರು.
ಶಿವಮೊಗ್ಗದಲ್ಲಿ ಬಲೂ ದುಬಾರಿ
ಮೈಸೂರಿನಲ್ಲಿ 25 ಸಾವಿರ ಲೀಟರ್ 150 ರೂ. ಶುಲ್ಕ ಇದ್ದರೆ ಶಿವಮೊಗ್ಗದಲ್ಲಿ 275 ರೂ. ಶುಲ್ಕ ವಿಧಿಸಲಾಗುತ್ತಿದೆ. ಮೈಸೂರಿನಲ್ಲಿ 50 ಸಾವಿರ ಲೀಟರ್ಗೆ 275 ರೂ. ಶುಲ್ಕ ವಿಧಿಸಿದರೆ ಶಿವಮೊಗ್ಗದಲ್ಲಿ 400 ರೂ. ಶುಲ್ಕ ವಿಧಿಸಲಾಗುತ್ತಿದೆ. ಈಗಾಗಲೇ ವಿಧಿಸಲಾಗಿರುವ ನೀರಿನ ಶುಲ್ಕ ಅವೈಜ್ಞಾನಿಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !