ಒತ್ತಡದ ಬದುಕಿನಿಂದ ಮಾನಸಿಕ ರೋಗ 

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಪಿ.ಆರ್‌.ಹಾವನೂರು ಅಭಿಮತ

Team Udayavani, May 26, 2022, 4:19 PM IST

20

ಹಾವೇರಿ: ಆಧುನಿಕ ಯುಗದ ನಿರಂತರ ಒತ್ತಡದ ಬದುಕಿನಿಂದ ಮಾನವ ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾನೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಪಿ. ಆರ್‌. ಹಾವನೂರು ಹೇಳಿದರು.

ನಗರದ ಜಿ.ಎಚ್‌.ಕಾಲೇಜಿನಲ್ಲಿ ಬುಧವಾರ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಸಹಯೋಗದಲ್ಲಿ ನಡೆದ ವಿಶ್ವ ಸ್ಕಿಜೋಫ್ರಿನಿಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ 15 ರಿಂದ 30ವರ್ಷ ವಯೋಮಾನದವರಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಇಂದು ಎಲ್ಲರೂ ತಂತ್ರಜ್ಞಾನಕ್ಕೆ ಅಂಟಿಕೊಂಡು ಅತಿಯಾದ ಆಲೋಚನೆಗೆ ಒಳಗಾಗಿ ಒಂದಿಲ್ಲೊಂದು ಮಾನಸಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇತ್ತೀಚೆಗೆ ವಿದ್ಯಾರ್ಥಿಗಳು ವಿವಿಧ ರೀತಿಯ ಮಾನಸಿಕ ಕಾಯಿಲೆಗೆ ಒಳಪಡುತ್ತಿದ್ದಾರೆ. ವಿದ್ಯಾಥಿಗಳು ಅತಿಯಾದ ಆಲೋಚನೆ ಮಾಡಬಾರದು ಹಾಗೂ ಮೊಬೈಲ್‌ ಬಳಕೆ ಕಡಿಮೆ ಮಾಡಿ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಬೇಕು. ರಾತ್ರಿ ಮಲಗುವ ಸಮಯದಲ್ಲಿ ದಿನಚರಿಯಲ್ಲಿ ನಡೆದ ವಿಷಯಗಳ ಬಗ್ಗೆ ಅತಿಯಾದ ಯೋಚನೆ ಒಳ್ಳೆಯದಲ್ಲ ಎಂದು ಸಲಹೆ ನೀಡಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ| ಚನಬಸಯ್ಯ ವಿರಕ್ತಮಠ ಮಾತನಾಡಿ, ಸ್ಕೀಜೊಫ್ರೇನಿಯಾ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ ಅರ್ಥವಿಲ್ಲದ ಮತ್ತು ಅಸಂಭದ್ದ ಮಾತುಗಳು, ಸೂಕ್ತವಲ್ಲದ ಭಾವನೆಗಳನ್ನು ವ್ಯಕ್ತಪಡಿಸುವುದು, ಕಾರಣವಿಲ್ಲದೆ ಅಳುವುದು, ನಗುವುದು ಮತ್ತು ಕೋಪ ಮಾಡಿಕೊಳ್ಳುವುದು, ಭಾವನೆಗಳೇ ಇಲ್ಲದ ಹಾಗೆ ಇರುವುದು, ತನ್ನ ಲೋಕದಲ್ಲಿ ಒಂಟಿಯಾಗಿರುವುದು, ಇಲ್ಲದ ವಾಸನೆ ಇದೆ ಎನ್ನುವುದು, ಸ್ಪರ್ಶಾನುಭವ  ಇಲ್ಲದಿರುವುದು, ಸ್ವಚ್ಛತೆ, ಹಸಿವು ಮತ್ತು ಬಾಯಾರಿಕೆ ಬಗ್ಗೆ ನಿರ್ಲಕ್ಷ್ಯ, ಕೆಲಸ ಕರ್ತವ್ಯಗಳನ್ನು ಮಾಡದೇ ಇರುವುದು ಕಂಡುಬರುತ್ತವೆ. ಈ ಲಕ್ಷಣಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದಾಗಿದೆ ಎಂದು ಹೇಳಿದರು.

ಮನೋವೈದ್ಯ ಡಾ|ವಿಜಯಕುಮಾರ ಬಿ. ಉಪನ್ಯಾಸ ನೀಡಿ, ಸ್ಕಿಜೋಫ್ರಿನಿಯಾ ಒಂದು ಅನುಮಾನದ ಕಾಯಿಲೆಯಾಗಿದೆ. ಅನವಶ್ಯಕವಾಗಿ ಆಲೋಚನೆಗೆ ಒಳಪಡಿಸುತ್ತದೆ. ಆದರೆ, ರೋಗಿಯನ್ನು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ಇದೊಂದು ಅನುವಂಶಿಕ ರೋಗವಾಗಿದ್ದು, ವಂಶವಾಹಿಯಾಗಿ ಶೇ. 10ರಷ್ಟು ಮಕ್ಕಳಿಗೆ ಬಾಧಿಸಿದರೆ, ಶೇ. 90ರಷ್ಟು ಇದರ ಲಕ್ಷಣಗಳು ಕಂಡುಬರುವುದಿಲ್ಲ ಎಂದರು.

ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಉಪಪ್ರಾಚಾರ್ಯ ಪ್ರೊ.ಡಿ.ಎ. ಕೊಲ್ಹಾಪುರೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಣಾಧಿಕಾರಿ ಡಾ|ಪ್ರಭಾಕರ ಕುಂದೂರು, ಡಾ|ಜೆ.ಎಫ್‌.ಹೊಸಮನಿ, ಪ್ರೊ|ನಾಗರತ್ನ ಇತರರಿದ್ದರು. ಪ್ರೊ|ಎಸ್‌.ಎಸ್‌.ಸಣ್ಣಶಿವಣ್ಣನವರ ಸ್ವಾಗತಿಸಿ, ಯಲ್ಲಪ್ಪ ಓಬಣ್ಣನವರ ವಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.