ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

ಸರಳವಾಗಿ ದೇವಾಲಯದಲ್ಲಿ ಮದುವೆಯದವರು ಸುಖವಾಗಿ ಬದುಕಿ ಬಾಳುತ್ತಿದ್ದಾರೆ

Team Udayavani, May 26, 2022, 5:44 PM IST

ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

ದೊಡ್ಡಬಳ್ಳಾಪುರ: ಸಮಾಜದಲ್ಲಿ ಆಡಂಬರದ ಮದುವೆಗಳು ಕಡಿಮೆಯಾಗಿ, ಇದಕ್ಕೆ ಬಳಸುವ ಹಣ ದಂಪತಿಗಳ ಜೀವನ ನಿರ್ವರ್ಹಣೆಗೆ ನೀಡಬಹುದಾಗಿದೆ. ಮುಂದೆ ನನ್ನ ಮೊಮ್ಮಕ್ಕಳಿಗೂ ಸಾಮೂಹಿಕ ವಿವಾಹದಲ್ಲೇ ಧಾರೆ ಎರೆದು ಕೊಡುವ ಅಭಿಲಾಷೆಯಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ ಹೇಳಿದರು.

ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ತಾಲೂಕಿನ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ವಧುವರರಿಗೆ ಶುಭ ಹಾರೈಸಿ ನಂತರ ಮಾತನಾಡಿದ ಅವರು, ಈ ಹಿಂದೆ ಮದುವೆಗಳಲ್ಲಿ ಆಡಂಬರವಿರಲಿಲ್ಲ. ನನಗೂ ಕೂಡ ಮನೆ ಮುಂದೆ ದೇವರ ಫೋಟೊ ಇಟ್ಟು ಮದುವೆ ಮಾಡಿಸಿದ್ದರು. ಸರಳವಾಗಿ ದೇವಾಲಯದಲ್ಲಿ ಮದುವೆಯದವರು ಸುಖವಾಗಿ ಬದುಕಿ ಬಾಳುತ್ತಿದ್ದಾರೆ ಎಂದರು.

ಆರ್ಥಿಕವಾಗಿ ದುರ್ಬಲರಾಗಿರುವವರು, ಗ್ರಾಮೀಣ ಪ್ರದೇಶದಲ್ಲಿರುವವರು, ಬಡವರಿಗೆ ಸಾಮೂಹಿಕ ವಿವಾಹ ನೆರವಾಗುತ್ತಿದ್ದು, ಈ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿರುವುದು ನಮಗೆ ಅತೀವ ಸಂತೋಷವಾಗಿದೆ ಎಂದು ತಿಳಿಸಿದರು.

ಬಡವರಿಗೆ ಅನುಕೂಲ: ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಹಿಂದೆ ಕೋವಿಡ್‌ ಕಾರಣದಿಂದ ಸಾಮೂ ಹಿಕ ವಿವಾಹಗಳು ಮುಂದೂಡಲಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿರುವುದರಿಂದ ಮತ್ತೆ ಸಾಮೂಹಿಕ ವಿವಾಹಗಳನ್ನು ಆರಂಭಿಸಿರುವುದು ಸಂತಸ ವಾಗಿದ್ದು, ಇದರಿಂದ ಕೂಲಿಕಾರ್ಮಿಕರು, ದೀನ ದಲಿತರು ಹಾಗೂ ದುರ್ಬಲರಿಗೆ ಅನುಕೂಲ ಕರ ವಾಗಿವೆ ಎಂದರು.

ಊಟೋಪಚಾರದ ವ್ಯವಸ್ಥೆ: ಸಾಮೂಹಿಕ ವಿವಾಹಕ್ಕೆ ಆಗಮಿಸುವ ವಧು-ವರ ಮತ್ತು ಅವರ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌, ಅಪರ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್‌, ಉಪವಿಭಾಗಾಧಿಕಾರಿ ತೇಜಸ್‌ ಕುಮಾರ್‌, ಮುಜರಾಯಿ ಇಲಾಖೆಯ ಜಿಲ್ಲಾ ಸಹಾಯಕ ಆಯುಕ್ತರಾದ ಜಿ. ಜೆ.ಹೇಮಾವತಿ, ಘಾಟಿ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಪ್ರಧಾನ ಆರ್ಚಕ ಸುಬ್ಬುಕೃಷ್ಣಶಾಸ್ತ್ರಿ ,
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಚ್‌.ಅಪ್ಪಯ್ಯಣ್ಣ, ರಾಜ್ಯ ತೆಂಗಿನ ಸಹಕಾರ ಮಹಾಮಂಡಳದ ಅಧ್ಯಕ್ಷ ವೆಂಕಟೇಶ್‌ ಬಾಬು, ಕೆಪಿಸಿಸಿ ಸದಸ್ಯ ಎಸ್‌.ಆರ್‌. ಮುನಿರಾಜು, ತೂಬಗೆರೆ ಹೋಬಳಿ ಜೆಡಿಎಸ್‌ ಅಧ್ಯಕ್ಷ ಜಗನ್ನಾಥಾಚಾರಿ ಹಾಗೂ ಇತರರು ಇದ್ದರು.

ನವ ಜೀವನಕ್ಕೆ ಕಾಲಿಟ್ಟ 16 ಜೋಡಿಗಳು
ಬುಧವಾರ ಬೆಳಗ್ಗೆ 10.50ರಿಂದ 11.40ರ ಒಳಗೆ ಕಟಕ ಲಗ್ನದಲ್ಲಿ ನಡೆದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈ ಮೊದಲೇ ನೋಂದಣಿಯಾಗಿದ್ದ 16 ಜೋಡಿಗಳು, ಹಿಂದೂ ಸಂಪ್ರದಾಯದಂತೆ, ಪೌರೋಹಿತರ ವೇದ ಮಂತ್ರ ಘೋಷದೊಂದಿಗೆ ವಿವಾಹವಾಗಿ ಹೊಸ ಬಾಳಿಗೆ ಕಾಲಿರಿಸಿದರು. ವಿವಾಹದಲ್ಲಿ ಪಾಲ್ಗೊಂಡಿದ್ದ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10 ಸಾವಿರ ರೂ. ಮತ್ತು ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು(ಒಟ್ಟು 40 ಸಾವಿರ ರೂ ಮೌಲ್ಯ) ಒಟ್ಟು 55 ಸಾವಿರ ರೂ.ಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.