ಪಣಜಿ : ಬಾವಿಗೆ ಬಿದ್ದ ಚಿರತೆ : ಸತತ ಐದು ಗಂಟೆಗಳ ಕಾಲ ನಡೆಯಿತು ರಕ್ಷಣಾ ಕಾರ್ಯಾಚರಣೆ
Team Udayavani, May 26, 2022, 6:26 PM IST
ಪಣಜಿ: ಗೋವಾ ವೆಳ್ಳಿಯಲ್ಲಿ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂಧಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ವೆಳ್ಳಿಯಲ್ಲಿ ಚಿರತೆ ಬಾವಿಗೆ ಬಿದ್ದಿರುವುದಾಗಿ ಮಡಗಾಂವ್ ಅರಣ್ಯ ಇಲಾಖೆ ಕಛೇರಿಗೆ ದೂರವಾಣಿ ಕರೆ ಬಂದಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳಾದ ಜೂಲಿಯೋ ಕಾರ್ಡೋಜ್ ಮತ್ತು ಬೆಲ್ಹಾಲ್ ಅಟಾವ್ ರವರ ನೇತೃತ್ವದಲ್ಲಿ ಘಟನಾ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ಹಗ್ಗದಿಂದ ಬೋನನ್ನು ಬಾವಿಗೆ ಬಿಟ್ಟು ಚಿರತೆಯನ್ನು ಹೊರತೆಗೆದಿದ್ದಾರೆ. ರಾತ್ರಿ 10 ಗಂಟೆಗೆ ಆರಂಭಗೊಂಡ ಈ ರಕ್ಷಣಾ ಕಾರ್ಯಾಚರಣೆ ಗುರುವಾರ ಬೆಳಗಿನ ಜಾವ 3 ಗಂಟೆಯ ವರೆಗೂ ನಡೆಯಿತು. ಅರಣ್ಯ ಇಲಾಖೆ ಸಿಬ್ಬಂದಿಗಳು ನಂತರ ಚಿರತೆಯನ್ನು ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಇದನ್ನೂ ಓದಿ : ಮಡಿಕೇರಿ : ಬ್ರೇಕ್ ವಿಫಲಗೊಂಡು ಹಿಮ್ಮುಖವಾಗಿ ಚಲಿಸಿದ ಜೆಸಿಬಿ : ಕಾರ್ಮಿಕ ಸ್ಥಳದಲ್ಲೇ ಸಾವು