ರಾಜ್ಯದಲ್ಲಿ ಹಿಂದುಳಿದ ಸಮುದಾಯ ಗುರುತಿಸಿ ಮೀಸಲಾತಿ ಕಲ್ಪಿಸಲಾಗುತ್ತಿದೆ: ಜಯಪ್ರಕಾಶ್ ಹೆಗಡೆ
Team Udayavani, May 27, 2022, 6:18 AM IST
ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳನ್ನು ಗುರುತಿಸಿ ಮೀಸಲಾತಿ ಕಲ್ಪಿಸಲಾಗುತ್ತಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಹೇಳಿದ್ದಾರೆ.
ತೆಲಂಗಾಣ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ತಂಡ ಗುರುವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ , ಡಿ. ದೇವರಾಜ ಅರಸು ಭವನದ ಕಛೇರಿಗೆ ಭೇಟಿ ನೀಡಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅನಾಥ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದೊರಕಿಸಿಕೊಡುವ ಜವಾಬ್ದಾರಿ ಹೊತ್ತಿರುವ ತೆಲಂಗಾಣಕ್ಕೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ತಮಿಳು ಹಾಗೂ ರಾಜ್ಯಸ್ಥಾನ ರಾಜ್ಯಗಳಿಗೆ ಭೇಟಿ ನೀಡಲಾಗುವುದು, ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಅನಾಥಶ್ರಮ ಮತ್ತು ಬಾಲಮಂದಿರಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.
ವಿವಿಧ ಸಮುದಾಯಗಳು ಮೀಸಲಾತಿಗೆ ಬೇಡಿಕೆ ಇಟ್ಟಿರುವುದರಿಂದ ಆಯೋಗ ಜಿಲ್ಲೆಗಳಿಗೆ ಪ್ರವಾಸ ಮಾಡಿ, ಮನೆ ಮನೆಗೆ ತೆರಳಿ ಅಭಿಪ್ರಾಯ ಸಂಗ್ರಹ, ಸಮುದಾಯಗಳ ಮುಖಂಡರ ಜೊತೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ತೆಲಂಗಾಣ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಡಾ ವಕುಲಾಭರಣ ಕ್ರಷ್ಣಮೋಹನರಾವ್ ನೇತ್ರತ್ವದ ತೆಲಂಗಾಣ ತಂಡ ಎರಡು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗಡೆ , ಸದಸ್ಯರು, ಅಧಿಕಾರಿ ವರ್ಗದವರ ಜೊತೆ ವಿವಿಧ ಹಂತಗಳಲ್ಲಿ ಚರ್ಚೆ ನಡೆಸಲಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಅಧ್ಯಯನದ ಜವಾಬ್ದಾರಿಯನ್ನು ಕೂಡ ತೆಲಂಗಾಣ ತಂಡ ಹೊಂದಿದ್ದು ಈ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಲಹೆ ಪಡೆಯಲಿದೆ. ತೆಲಂಗಾಣ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಸಿ.ಎಚ್. ಉಪೇಂದ್ರ, ಶುಭಪ್ರದ್ ಪಟೇಲ್ ನೂಲಿ, ಕೆ. ಕಿರ್ಶೋ ಗೌಡ್ ತಂಡದಲ್ಲಿದ್ದಾರೆ ರಾಜ್ಯ ಆಯೋಗದ ಸದಸ್ಯರಾದ ಕೆ ಟಿ ಸುವರ್ಣ, ಕಲ್ಯಾಣಕುಮಾರ್, ಶಾರದಾ ನಾಯ್ಕ, ಅರುಣಕುಮಾರ್ , ಬಿ ಎಸ್ ರಾಜಶೇಖರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ